ಮನರಂಜನೆ

ಅವನು ಶಿವ, ಇವಳು ಗಂಗ; ಪ್ರೇಮಕಥೆಯಲ್ಲೊಂದು ಸಾಮಾಜಿಕ ಸಂದೇಶ

ಕನ್ನಡ ಚಿತ್ರರಂಗದಲ್ಲಿ ಪ್ರೇಮಕಥೆಗಳಿಗೆ ಬರವಿಲ್ಲ. ಇದುವರೆಗೂ ಸಾವಿರಾರು ಪ್ರೇಮಕಥೆಗಳು ಬಂದಿವೆ, ಇನ್ನೂ ಬರುತ್ತಲೇ ಇವೆ. ಈ ಸಾಲಿಗೆ ‘ಶಿವಗಂಗ’ ಎಂಬ ಹೊಸ ಚಿತ್ರವೂ ಸೇರಿಕೊಂಡಿದೆ.

ಶ್ರೀ ಪಂಚಮಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಕುಮಾರ್ ಸಿ.ವಿ ನಿರ್ಮಾಣ ಮಾಡುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿರುವ ಚಿತ್ರ ‘ಶಿವಗಂಗ’. ಶ್ರೀಮಂಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಹರ್ಷ ಕಾಗೋಡು ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸಿರಿ ಮ್ಯೂಸಿಕ್ ಯೂಟ್ಯೂಬ್‍ ಚಾನಲ್‍ನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿವೆ.

‘ಶಿವಗಂಗ ಎರಡು ಪಾತ್ರಗಳ ಹೆಸರು ಎಂದು ಮಾತು ಶುರು ಮಾಡಿದ ನಿರ್ದೇಶಕ ಶ್ರೀಮಂಜು, ‘ಇದೊಂದು ಪ್ರೇಮಪ್ರಧಾನ ಚಿತ್ರ. ಜೊತೆಗೆ ಸಾಮಾಜಿಕ ಸಂದೇಶವೂ ಇದೆ. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಕುಮಾರ್ ಸಿ.ವಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ಮಾಣಕ್ಕೂ ಮುಂದಾದರು. ಅವರೇ ಈ ಚಿತ್ರದ ನಾಯಕನಾಗೂ ನಟಿಸಿದ್ದಾರೆ. ರಿವಾನ್ಸಿ‌ ನಾಯಕಿಯಾಗಿ ಅಭಿನಯಿಸಿದ್ದಾರೆ’ ಎಂದು ಮಾಹಿತಿ ನೀಡಿದರು.

ಈ ಚಿತ್ರಕ್ಕೆ ಕ್ಲೈಮ್ಯಾಕ್ಸ್ ಚಿತ್ರೀಕರಣ ಮಾಡಿಲ್ಲ ಎನ್ನುವ ಶ್ರೀಮಂಜು, ‘ಆದರೂ ತೆರೆಯ ಮೇಲೆ ಬರುತ್ತದೆ. ಅದೇ ಚಿತ್ರದ ವಿಶೇಷತೆ. ಈ ಚಿತ್ರದಲ್ಲಿ ಹಲವು ವಿಷಯಗಳು ಬಂದು ಹೋಗುತ್ತವೆ. ಚಿತ್ರರಂಗದ ಬಗ್ಗೆ, ಗಾಂಧಿನಗರದ ಬಗ್ಗೆ ಕೆಲವು ವಿಷಯಗಳಿವೆ. ಪಾತ್ರಧಾರಿಗಳ್ಯಾರಿಗೂ ಕಥೆ ಗೊತ್ತಿಲ್ಲ. ಕೆಲವರಿಗೆ ಅವರವರ ಪಾತ್ರದ ಬಗ್ಗೆ ಮಾತ್ರ ಗೊತ್ತಿದೆ. ಅವರು ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಚಿತ್ರ ನೋಡಿದ ಮೇಲೆ ಅವರಿಗೆ ಕಥೆ ಗೊತ್ತಾಗುತ್ತದೆ. ಅಲ್ಲಿಯವರೆಗೂ ಕಥೆ ಗೊತ್ತಾಗುವುದಿಲ್ಲ. ಕಥೆ ಬಿಟ್ಟುಕೊಡಬಾರದು ಎಂಬುದು ನನ್ನಾಸೆ’ ಎಂದರು.

ನಿರ್ಮಶಪಕ  ನಾಯಕ ಕುಮಾರ್ ಮೂಲತಃ ರೈತರಂತೆ. ಜೊತೆಗೆ ರಿಯಲ್‍ ಎಸ್ಟೇಟ್‍ ಉದ್ಯಮಿಯೂ ಹೌದು. ‘ನಿರ್ದೇಶಕ ಶ್ರೀಮಂಜು ಅವರು ಹೇಳಿದ ಕಥೆ ಇಷ್ಟವಾಯಿತು. ಕಥೆ ಇಷ್ಟವಾಗಿ ನಾನೇ ನಿರ್ಮಾಣ ಕೂಡ ಮಾಡಿದ್ದೀನಿ. ಯಾವುದೋ ಲಿಟಿಗೇಶನ್‍ ಜಮೀನಿತ್ತು. ಅದರಿಂದ ಬಂದ ಹಣವನ್ನು ತಂದು ಚಿತ್ರಕ್ಕೆ ಹಾಕಿದ್ದೇನೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಒಂದೊಳ್ಳೆಯ ಚಿತ್ರ ಮಾಡಿದ್ದೇವೆ. ನನಗೆ ಮೊದಲಿನಿಂದ ಚಿತ್ರ ಮಾಡುವ ಆಸೆ ಇತ್ತು. ಆದರೆ, ಯಾರೂ ಪರಿಚಯವಿರಲಿಲ್ಲ. ಆಗ ಶ್ರೀಮಂಜು ಅವರ ಪರಿಚಯವಾಯಿತು. ಅವರು ಹೇಳಿದ ಕಥೆ ಇಷ್ಟವಾಯ್ತು. ಆದರೆ, ಕ್ಲೈಮ್ಯಾಕ್ಸ್ ಗೊತ್ತಿಲ್ಲ’ ಎಂದರು.

‘ಶಿವಗಂಗಾ’ ಚಿತ್ರದಲ್ಲಿ ಸಂಗೀತ, ಪುಷ್ಪ, ಸುಧೀಂದ್ರ, ಶಿವಮೊಗ್ಗ ರಾಮಣ್ಣ, ನಟರಾಜು, ಭಾಗ್ಯಮ್ಮ, ನಾಗರಾಜ್ ಮುಂತಾದವರಿದ್ದಾರೆ. ಹರ್ಷ ಕಾಗೋಡು ಸಂಗೀತ, ಸುನಯ್ ಜೈನ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

27 mins ago

ವಕ್ಫ್‌ ಒತ್ತುವರಿ ಆಸ್ತಿ ತೆರವಿಗೆ ಕ್ರಮ : ಸಚಿವ ಜಮೀರ್‌ ಅಹಮದ್‌

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…

43 mins ago

ಒಳಮೀಸಲಾತಿ ಮೂಲಕ ಪರಿಶಿಷ್ಟ ಜಾತಿಗಳನ್ನು ಒಡೆಯುತ್ತಿರುವ ಕಾಂಗ್ರೆಸ್ : ಬಿಎಸ್‌ಪಿ ಆರೋಪ

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…

1 hour ago

ರಂಜಾನ್, ಯುಗಾದಿ ; ಎಸ್ಪಿ ಕಚೇರಿಯಲ್ಲಿ ಸೌಹಾರ್ದ ಸಭೆ

ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…

2 hours ago

2027ರ ಗಣತಿಗೆ ಡಿಜಿಟಲ್‌ ಸ್ಪರ್ಶ : ದೋಷರಹಿತವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…

2 hours ago

ಮಹದೇಶ್ವರ ಬೆಟ್ಟ | ವಿವಿಧ ಸೇವೆಗಳಿಂದ 1.16ಕೋಟಿ ಸಂಗ್ರಹ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…

2 hours ago