ಮನರಂಜನೆ

ಅವನು ಶಿವ, ಇವಳು ಗಂಗ; ಪ್ರೇಮಕಥೆಯಲ್ಲೊಂದು ಸಾಮಾಜಿಕ ಸಂದೇಶ

ಕನ್ನಡ ಚಿತ್ರರಂಗದಲ್ಲಿ ಪ್ರೇಮಕಥೆಗಳಿಗೆ ಬರವಿಲ್ಲ. ಇದುವರೆಗೂ ಸಾವಿರಾರು ಪ್ರೇಮಕಥೆಗಳು ಬಂದಿವೆ, ಇನ್ನೂ ಬರುತ್ತಲೇ ಇವೆ. ಈ ಸಾಲಿಗೆ ‘ಶಿವಗಂಗ’ ಎಂಬ ಹೊಸ ಚಿತ್ರವೂ ಸೇರಿಕೊಂಡಿದೆ.

ಶ್ರೀ ಪಂಚಮಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಕುಮಾರ್ ಸಿ.ವಿ ನಿರ್ಮಾಣ ಮಾಡುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿರುವ ಚಿತ್ರ ‘ಶಿವಗಂಗ’. ಶ್ರೀಮಂಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಹರ್ಷ ಕಾಗೋಡು ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸಿರಿ ಮ್ಯೂಸಿಕ್ ಯೂಟ್ಯೂಬ್‍ ಚಾನಲ್‍ನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿವೆ.

‘ಶಿವಗಂಗ ಎರಡು ಪಾತ್ರಗಳ ಹೆಸರು ಎಂದು ಮಾತು ಶುರು ಮಾಡಿದ ನಿರ್ದೇಶಕ ಶ್ರೀಮಂಜು, ‘ಇದೊಂದು ಪ್ರೇಮಪ್ರಧಾನ ಚಿತ್ರ. ಜೊತೆಗೆ ಸಾಮಾಜಿಕ ಸಂದೇಶವೂ ಇದೆ. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಕುಮಾರ್ ಸಿ.ವಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ಮಾಣಕ್ಕೂ ಮುಂದಾದರು. ಅವರೇ ಈ ಚಿತ್ರದ ನಾಯಕನಾಗೂ ನಟಿಸಿದ್ದಾರೆ. ರಿವಾನ್ಸಿ‌ ನಾಯಕಿಯಾಗಿ ಅಭಿನಯಿಸಿದ್ದಾರೆ’ ಎಂದು ಮಾಹಿತಿ ನೀಡಿದರು.

ಈ ಚಿತ್ರಕ್ಕೆ ಕ್ಲೈಮ್ಯಾಕ್ಸ್ ಚಿತ್ರೀಕರಣ ಮಾಡಿಲ್ಲ ಎನ್ನುವ ಶ್ರೀಮಂಜು, ‘ಆದರೂ ತೆರೆಯ ಮೇಲೆ ಬರುತ್ತದೆ. ಅದೇ ಚಿತ್ರದ ವಿಶೇಷತೆ. ಈ ಚಿತ್ರದಲ್ಲಿ ಹಲವು ವಿಷಯಗಳು ಬಂದು ಹೋಗುತ್ತವೆ. ಚಿತ್ರರಂಗದ ಬಗ್ಗೆ, ಗಾಂಧಿನಗರದ ಬಗ್ಗೆ ಕೆಲವು ವಿಷಯಗಳಿವೆ. ಪಾತ್ರಧಾರಿಗಳ್ಯಾರಿಗೂ ಕಥೆ ಗೊತ್ತಿಲ್ಲ. ಕೆಲವರಿಗೆ ಅವರವರ ಪಾತ್ರದ ಬಗ್ಗೆ ಮಾತ್ರ ಗೊತ್ತಿದೆ. ಅವರು ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಚಿತ್ರ ನೋಡಿದ ಮೇಲೆ ಅವರಿಗೆ ಕಥೆ ಗೊತ್ತಾಗುತ್ತದೆ. ಅಲ್ಲಿಯವರೆಗೂ ಕಥೆ ಗೊತ್ತಾಗುವುದಿಲ್ಲ. ಕಥೆ ಬಿಟ್ಟುಕೊಡಬಾರದು ಎಂಬುದು ನನ್ನಾಸೆ’ ಎಂದರು.

ನಿರ್ಮಶಪಕ  ನಾಯಕ ಕುಮಾರ್ ಮೂಲತಃ ರೈತರಂತೆ. ಜೊತೆಗೆ ರಿಯಲ್‍ ಎಸ್ಟೇಟ್‍ ಉದ್ಯಮಿಯೂ ಹೌದು. ‘ನಿರ್ದೇಶಕ ಶ್ರೀಮಂಜು ಅವರು ಹೇಳಿದ ಕಥೆ ಇಷ್ಟವಾಯಿತು. ಕಥೆ ಇಷ್ಟವಾಗಿ ನಾನೇ ನಿರ್ಮಾಣ ಕೂಡ ಮಾಡಿದ್ದೀನಿ. ಯಾವುದೋ ಲಿಟಿಗೇಶನ್‍ ಜಮೀನಿತ್ತು. ಅದರಿಂದ ಬಂದ ಹಣವನ್ನು ತಂದು ಚಿತ್ರಕ್ಕೆ ಹಾಕಿದ್ದೇನೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಒಂದೊಳ್ಳೆಯ ಚಿತ್ರ ಮಾಡಿದ್ದೇವೆ. ನನಗೆ ಮೊದಲಿನಿಂದ ಚಿತ್ರ ಮಾಡುವ ಆಸೆ ಇತ್ತು. ಆದರೆ, ಯಾರೂ ಪರಿಚಯವಿರಲಿಲ್ಲ. ಆಗ ಶ್ರೀಮಂಜು ಅವರ ಪರಿಚಯವಾಯಿತು. ಅವರು ಹೇಳಿದ ಕಥೆ ಇಷ್ಟವಾಯ್ತು. ಆದರೆ, ಕ್ಲೈಮ್ಯಾಕ್ಸ್ ಗೊತ್ತಿಲ್ಲ’ ಎಂದರು.

‘ಶಿವಗಂಗಾ’ ಚಿತ್ರದಲ್ಲಿ ಸಂಗೀತ, ಪುಷ್ಪ, ಸುಧೀಂದ್ರ, ಶಿವಮೊಗ್ಗ ರಾಮಣ್ಣ, ನಟರಾಜು, ಭಾಗ್ಯಮ್ಮ, ನಾಗರಾಜ್ ಮುಂತಾದವರಿದ್ದಾರೆ. ಹರ್ಷ ಕಾಗೋಡು ಸಂಗೀತ, ಸುನಯ್ ಜೈನ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

3 mins ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

9 mins ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

21 mins ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

2 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

2 hours ago