ಮನರಂಜನೆ

ಹೀರೋ ಆದ ನವೀನ್ ಸಜ್ಜು; ‘ಲೋ ನವೀನ’ ಚಿತ್ರದ ‘ಕೋಣಾಣೆ’ ಹಾಡು ಬಿಡುಗಡೆ

ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು ನವೀನ್‍ ಸಜ್ಜು ಅಭಿನಯದ ‘ಲೋ ನವೀನ’ ಎಂಬ ಚಿತ್ರ. ಕನ್ನಡ ಚಿತ್ರರಂಗದಲ್ಲಿ ಗಾಯಕರಾಗಿ ಗುರುತಿಸಿಕೊಂಡಿದ್ದ ನವೀನ್‍, ಈ ಚಿತ್ರದ ಮೂಲಕ ಹೀರೋ ಆಗಿದ್ದರು. ಈ ಚಿತ್ರವು ಇದೀಗ ಮುಕ್ತಾಯದ ಹಂತಕ್ಕೆ ಬಂದಿದ್ದು, ಇತ್ತೀಚೆಗೆ ‘ಕೋಣಾಣೆ …’ ಎಂಬ ಮೊದಲ ಹಾಡು ಬಿಡುಗಡೆಯಾಗಿದೆ.

ಅಪ್ಪಟ ಜನಪದ ಶೈಲಿಯ ಈ ಹಾಡನ್ನು ಮೈಸೂರಿನ ಎಚ್.ಡಿ. ಕೋಟೆಯ ಗ್ರಾಮೀಣ ಪ್ರತಿಭೆಗಳಾದ ಚಮ್ಮಮ್ಮ ಹಾಗೂ ಲಕ್ಷಮ್ಮ ಹಾಡಿದ್ದಾರೆ. ನವೀನ್ ಸಜ್ಜು ಸಹ ಗಾಯನನದಲ್ಲಿ ಜೊತೆಯಾಗಿದ್ದಾರೆ. ಬರೀ ಗಾಯನವಷ್ಟೇ ಅಲ್ಲ, ಹಾಡಿಗೆ ಸಾಹಿತ್ಯ ಬರೆಯುವುದರ ಜೊತೆಗೆ ಸಂಗೀತವನ್ನೂ ನವೀನ್‍ ಸಂಯೋಜಿಸಿದ್ದಾರೆ.

ನಂತರ ಮಾತನಾಡಿದ ನವೀನ್‍ ಸಜ್ಜು, ‘ಮೂಲತಃ ಮಳವಳ್ಳಿಯವನಾದ ನಾನು, ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದೆ. ನನ್ನ ಪ್ರತಿಭೆ ಗುರುತಿಸಿದ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಹಾಗೂ ನಿರ್ದೇಶಕ ಪವನ್ ಕುಮಾರ್ ‘ಲೂಸಿಯಾ’ ಚಿತ್ರದಲ್ಲಿ ಹಾಡುವ ಅವಕಾಶ ಕೊಟ್ಟರು. ಅಲ್ಲಿಂದ ನನ್ನ ಜರ್ನಿ ಆರಂಭವಾಯಿತು. ಆನಂತರ ಸಾಕಷ್ಟು ಚಿತ್ರಗಳಲ್ಲಿ ಹಾಡಿದ್ದೇನೆ. ನಾನು, ಸುನೀಲ್ ಮೈಸೂರು ಹಾಗೂ ಅನೇಕ ಸ್ನೇಹಿತರು ಸೇರಿ ಮನೋರಂಜನೆಯೇ ಪ್ರಧಾನವಾಗಿರುವ ಈ ಚಿತ್ರದ ಕಥೆ ಬರೆದಿದ್ದೇವೆ. ಅಮೇರಿಕಾಗೆ ಒಮ್ಮೆ ಹೋಗಿದ್ದಾಗ ಬೆನ್ ಚಿಕ್ಕಸ್ವಾಮಿ ಹಾಗೂ ಕೀರ್ತಿಸ್ವಾಮಿ ಅವರನ್ನು ಭೇಟಿ ಮಾಡಿದೆ. ಅವರ ಬಳಿ ಈ ಚಿತ್ರದ ಬಗ್ಗೆ ಹೇಳಿದಾಗ ಅವರು ನಾವೇ ಚಿತ್ರಕ್ಕೆ ಬಂಡವಾಳ ಹೂಡುತ್ತೇವೆ ಎಂದರು. ಈಗ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ’ ಎಂದರು.

ಚಿತ್ರದ ಲೊಕೇಶನ್ ಹುಡುಕಾಟದ ಸಲುವಾಗಿ ಎಚ್.ಡಿ. ಕೋಟೆಯ ಹಿರೇನಂದಿ ಗ್ರಾಮಕ್ಕೆ ಹೋಗಿದ್ದಾಗ ಅಲ್ಲಿ ಚಮ್ಮಮ್ಮ ಹಾಗೂ ಲಕ್ಷಮ್ಮ ಅವರು ಹೊಲದಲ್ಲಿ ಕೆಲಸ ಮಾಡುತ್ತಾ ಹಾಡುತ್ತಿದ್ದುದ್ದನ್ನು ನೋಡಿದೆ ಎಂದ ನವೀನ್, ‘ಅವರಿಂದ ನಮ್ಮ ಚಿತ್ರದ ಹಾಡೊಂದನ್ನು ಹಾಡಿಸಬೇಕು ಎಂದು ನಿರ್ಧರಿಸಿದೆ. ಅಂದುಕೊಂಡಂತೆ, ಅವರಿಂದಲೇ ಈ ಹಾಡು ಹಾಡಿಸಿದ್ದೇನೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಉಳಿದ ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿದೆ’ ಎಂದರು ನವೀನ್ ಸಜ್ಜು.

ಈ ಚಿತ್ರವನ್ನು ಧನುರ್ದಾರಿ ಪವನ್‍ ನಿರ್ದೇಶಿಸುತ್ತಿದ್ದು, ಇದು ಅವರ ಮೊದಲ ಚಿತ್ರವಾಗಿದೆ. ಅನಿವಾಸಿ ಭಾರತೀಯರಾದ ಬೆನ್ ಚಿಕ್ಕಸ್ವಾಮಿ ಮತ್ತು ಕೀರ್ತಿ ಸ್ವಾಮಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ರಿಷಿಕೇಶ್ ಛಾಯಾಗ್ರಹಣವಿದ್ದು, ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಹಾಡು ಬಿಡುಗಡೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

10 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

10 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

11 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

11 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

12 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

12 hours ago