ಮನರಂಜನೆ

ಹೀರೋ ಆದ ನವೀನ್ ಸಜ್ಜು; ‘ಲೋ ನವೀನ’ ಚಿತ್ರದ ‘ಕೋಣಾಣೆ’ ಹಾಡು ಬಿಡುಗಡೆ

ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು ನವೀನ್‍ ಸಜ್ಜು ಅಭಿನಯದ ‘ಲೋ ನವೀನ’ ಎಂಬ ಚಿತ್ರ. ಕನ್ನಡ ಚಿತ್ರರಂಗದಲ್ಲಿ ಗಾಯಕರಾಗಿ ಗುರುತಿಸಿಕೊಂಡಿದ್ದ ನವೀನ್‍, ಈ ಚಿತ್ರದ ಮೂಲಕ ಹೀರೋ ಆಗಿದ್ದರು. ಈ ಚಿತ್ರವು ಇದೀಗ ಮುಕ್ತಾಯದ ಹಂತಕ್ಕೆ ಬಂದಿದ್ದು, ಇತ್ತೀಚೆಗೆ ‘ಕೋಣಾಣೆ …’ ಎಂಬ ಮೊದಲ ಹಾಡು ಬಿಡುಗಡೆಯಾಗಿದೆ.

ಅಪ್ಪಟ ಜನಪದ ಶೈಲಿಯ ಈ ಹಾಡನ್ನು ಮೈಸೂರಿನ ಎಚ್.ಡಿ. ಕೋಟೆಯ ಗ್ರಾಮೀಣ ಪ್ರತಿಭೆಗಳಾದ ಚಮ್ಮಮ್ಮ ಹಾಗೂ ಲಕ್ಷಮ್ಮ ಹಾಡಿದ್ದಾರೆ. ನವೀನ್ ಸಜ್ಜು ಸಹ ಗಾಯನನದಲ್ಲಿ ಜೊತೆಯಾಗಿದ್ದಾರೆ. ಬರೀ ಗಾಯನವಷ್ಟೇ ಅಲ್ಲ, ಹಾಡಿಗೆ ಸಾಹಿತ್ಯ ಬರೆಯುವುದರ ಜೊತೆಗೆ ಸಂಗೀತವನ್ನೂ ನವೀನ್‍ ಸಂಯೋಜಿಸಿದ್ದಾರೆ.

ನಂತರ ಮಾತನಾಡಿದ ನವೀನ್‍ ಸಜ್ಜು, ‘ಮೂಲತಃ ಮಳವಳ್ಳಿಯವನಾದ ನಾನು, ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದೆ. ನನ್ನ ಪ್ರತಿಭೆ ಗುರುತಿಸಿದ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಹಾಗೂ ನಿರ್ದೇಶಕ ಪವನ್ ಕುಮಾರ್ ‘ಲೂಸಿಯಾ’ ಚಿತ್ರದಲ್ಲಿ ಹಾಡುವ ಅವಕಾಶ ಕೊಟ್ಟರು. ಅಲ್ಲಿಂದ ನನ್ನ ಜರ್ನಿ ಆರಂಭವಾಯಿತು. ಆನಂತರ ಸಾಕಷ್ಟು ಚಿತ್ರಗಳಲ್ಲಿ ಹಾಡಿದ್ದೇನೆ. ನಾನು, ಸುನೀಲ್ ಮೈಸೂರು ಹಾಗೂ ಅನೇಕ ಸ್ನೇಹಿತರು ಸೇರಿ ಮನೋರಂಜನೆಯೇ ಪ್ರಧಾನವಾಗಿರುವ ಈ ಚಿತ್ರದ ಕಥೆ ಬರೆದಿದ್ದೇವೆ. ಅಮೇರಿಕಾಗೆ ಒಮ್ಮೆ ಹೋಗಿದ್ದಾಗ ಬೆನ್ ಚಿಕ್ಕಸ್ವಾಮಿ ಹಾಗೂ ಕೀರ್ತಿಸ್ವಾಮಿ ಅವರನ್ನು ಭೇಟಿ ಮಾಡಿದೆ. ಅವರ ಬಳಿ ಈ ಚಿತ್ರದ ಬಗ್ಗೆ ಹೇಳಿದಾಗ ಅವರು ನಾವೇ ಚಿತ್ರಕ್ಕೆ ಬಂಡವಾಳ ಹೂಡುತ್ತೇವೆ ಎಂದರು. ಈಗ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ’ ಎಂದರು.

ಚಿತ್ರದ ಲೊಕೇಶನ್ ಹುಡುಕಾಟದ ಸಲುವಾಗಿ ಎಚ್.ಡಿ. ಕೋಟೆಯ ಹಿರೇನಂದಿ ಗ್ರಾಮಕ್ಕೆ ಹೋಗಿದ್ದಾಗ ಅಲ್ಲಿ ಚಮ್ಮಮ್ಮ ಹಾಗೂ ಲಕ್ಷಮ್ಮ ಅವರು ಹೊಲದಲ್ಲಿ ಕೆಲಸ ಮಾಡುತ್ತಾ ಹಾಡುತ್ತಿದ್ದುದ್ದನ್ನು ನೋಡಿದೆ ಎಂದ ನವೀನ್, ‘ಅವರಿಂದ ನಮ್ಮ ಚಿತ್ರದ ಹಾಡೊಂದನ್ನು ಹಾಡಿಸಬೇಕು ಎಂದು ನಿರ್ಧರಿಸಿದೆ. ಅಂದುಕೊಂಡಂತೆ, ಅವರಿಂದಲೇ ಈ ಹಾಡು ಹಾಡಿಸಿದ್ದೇನೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಉಳಿದ ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿದೆ’ ಎಂದರು ನವೀನ್ ಸಜ್ಜು.

ಈ ಚಿತ್ರವನ್ನು ಧನುರ್ದಾರಿ ಪವನ್‍ ನಿರ್ದೇಶಿಸುತ್ತಿದ್ದು, ಇದು ಅವರ ಮೊದಲ ಚಿತ್ರವಾಗಿದೆ. ಅನಿವಾಸಿ ಭಾರತೀಯರಾದ ಬೆನ್ ಚಿಕ್ಕಸ್ವಾಮಿ ಮತ್ತು ಕೀರ್ತಿ ಸ್ವಾಮಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ರಿಷಿಕೇಶ್ ಛಾಯಾಗ್ರಹಣವಿದ್ದು, ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಹಾಡು ಬಿಡುಗಡೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

17 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

17 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

17 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

17 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

17 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

17 hours ago