ಮನರಂಜನೆ

ಹೀರೋ ಆದ ನವೀನ್ ಸಜ್ಜು; ‘ಲೋ ನವೀನ’ ಚಿತ್ರದ ‘ಕೋಣಾಣೆ’ ಹಾಡು ಬಿಡುಗಡೆ

ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು ನವೀನ್‍ ಸಜ್ಜು ಅಭಿನಯದ ‘ಲೋ ನವೀನ’ ಎಂಬ ಚಿತ್ರ. ಕನ್ನಡ ಚಿತ್ರರಂಗದಲ್ಲಿ ಗಾಯಕರಾಗಿ ಗುರುತಿಸಿಕೊಂಡಿದ್ದ ನವೀನ್‍, ಈ ಚಿತ್ರದ ಮೂಲಕ ಹೀರೋ ಆಗಿದ್ದರು. ಈ ಚಿತ್ರವು ಇದೀಗ ಮುಕ್ತಾಯದ ಹಂತಕ್ಕೆ ಬಂದಿದ್ದು, ಇತ್ತೀಚೆಗೆ ‘ಕೋಣಾಣೆ …’ ಎಂಬ ಮೊದಲ ಹಾಡು ಬಿಡುಗಡೆಯಾಗಿದೆ.

ಅಪ್ಪಟ ಜನಪದ ಶೈಲಿಯ ಈ ಹಾಡನ್ನು ಮೈಸೂರಿನ ಎಚ್.ಡಿ. ಕೋಟೆಯ ಗ್ರಾಮೀಣ ಪ್ರತಿಭೆಗಳಾದ ಚಮ್ಮಮ್ಮ ಹಾಗೂ ಲಕ್ಷಮ್ಮ ಹಾಡಿದ್ದಾರೆ. ನವೀನ್ ಸಜ್ಜು ಸಹ ಗಾಯನನದಲ್ಲಿ ಜೊತೆಯಾಗಿದ್ದಾರೆ. ಬರೀ ಗಾಯನವಷ್ಟೇ ಅಲ್ಲ, ಹಾಡಿಗೆ ಸಾಹಿತ್ಯ ಬರೆಯುವುದರ ಜೊತೆಗೆ ಸಂಗೀತವನ್ನೂ ನವೀನ್‍ ಸಂಯೋಜಿಸಿದ್ದಾರೆ.

ನಂತರ ಮಾತನಾಡಿದ ನವೀನ್‍ ಸಜ್ಜು, ‘ಮೂಲತಃ ಮಳವಳ್ಳಿಯವನಾದ ನಾನು, ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದೆ. ನನ್ನ ಪ್ರತಿಭೆ ಗುರುತಿಸಿದ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಹಾಗೂ ನಿರ್ದೇಶಕ ಪವನ್ ಕುಮಾರ್ ‘ಲೂಸಿಯಾ’ ಚಿತ್ರದಲ್ಲಿ ಹಾಡುವ ಅವಕಾಶ ಕೊಟ್ಟರು. ಅಲ್ಲಿಂದ ನನ್ನ ಜರ್ನಿ ಆರಂಭವಾಯಿತು. ಆನಂತರ ಸಾಕಷ್ಟು ಚಿತ್ರಗಳಲ್ಲಿ ಹಾಡಿದ್ದೇನೆ. ನಾನು, ಸುನೀಲ್ ಮೈಸೂರು ಹಾಗೂ ಅನೇಕ ಸ್ನೇಹಿತರು ಸೇರಿ ಮನೋರಂಜನೆಯೇ ಪ್ರಧಾನವಾಗಿರುವ ಈ ಚಿತ್ರದ ಕಥೆ ಬರೆದಿದ್ದೇವೆ. ಅಮೇರಿಕಾಗೆ ಒಮ್ಮೆ ಹೋಗಿದ್ದಾಗ ಬೆನ್ ಚಿಕ್ಕಸ್ವಾಮಿ ಹಾಗೂ ಕೀರ್ತಿಸ್ವಾಮಿ ಅವರನ್ನು ಭೇಟಿ ಮಾಡಿದೆ. ಅವರ ಬಳಿ ಈ ಚಿತ್ರದ ಬಗ್ಗೆ ಹೇಳಿದಾಗ ಅವರು ನಾವೇ ಚಿತ್ರಕ್ಕೆ ಬಂಡವಾಳ ಹೂಡುತ್ತೇವೆ ಎಂದರು. ಈಗ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ’ ಎಂದರು.

ಚಿತ್ರದ ಲೊಕೇಶನ್ ಹುಡುಕಾಟದ ಸಲುವಾಗಿ ಎಚ್.ಡಿ. ಕೋಟೆಯ ಹಿರೇನಂದಿ ಗ್ರಾಮಕ್ಕೆ ಹೋಗಿದ್ದಾಗ ಅಲ್ಲಿ ಚಮ್ಮಮ್ಮ ಹಾಗೂ ಲಕ್ಷಮ್ಮ ಅವರು ಹೊಲದಲ್ಲಿ ಕೆಲಸ ಮಾಡುತ್ತಾ ಹಾಡುತ್ತಿದ್ದುದ್ದನ್ನು ನೋಡಿದೆ ಎಂದ ನವೀನ್, ‘ಅವರಿಂದ ನಮ್ಮ ಚಿತ್ರದ ಹಾಡೊಂದನ್ನು ಹಾಡಿಸಬೇಕು ಎಂದು ನಿರ್ಧರಿಸಿದೆ. ಅಂದುಕೊಂಡಂತೆ, ಅವರಿಂದಲೇ ಈ ಹಾಡು ಹಾಡಿಸಿದ್ದೇನೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಉಳಿದ ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿದೆ’ ಎಂದರು ನವೀನ್ ಸಜ್ಜು.

ಈ ಚಿತ್ರವನ್ನು ಧನುರ್ದಾರಿ ಪವನ್‍ ನಿರ್ದೇಶಿಸುತ್ತಿದ್ದು, ಇದು ಅವರ ಮೊದಲ ಚಿತ್ರವಾಗಿದೆ. ಅನಿವಾಸಿ ಭಾರತೀಯರಾದ ಬೆನ್ ಚಿಕ್ಕಸ್ವಾಮಿ ಮತ್ತು ಕೀರ್ತಿ ಸ್ವಾಮಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ರಿಷಿಕೇಶ್ ಛಾಯಾಗ್ರಹಣವಿದ್ದು, ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಹಾಡು ಬಿಡುಗಡೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

3 hours ago

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

14 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

14 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

14 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

15 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

15 hours ago