ಮನರಂಜನೆ

ಹೀರೋ ಆದ ನವೀನ್ ಸಜ್ಜು; ಶೀರ್ಷಿಕೆ ಬಿಡುಗಡೆ ಮಾಡಿ ಬೆಂಬಲಕ್ಕೆ ನಿಂತ ತಾರೆಯರು

ಜನಪ್ರಿಯ ಗಾಯಕ ನವೀನ್‍ ಸಜ್ಜು ಹೀರೋ ಆಗುತ್ತಿರುವ ವಿಷಯ ಹಳೆಯದೇ. ಒಂದೆರಡು ವರ್ಷಗಳ ಹಿಂದೆಯೇ ಅವರು ‘ಮ್ಯಾನ್ಷನ್‍ ಹೌಸ್‍ ಮುತ್ತು’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಆದರೆ, ಆ ಚಿತ್ರದ ಸುದ್ದಿಯೇ ಇಲ್ಲ. ಈಗ ನವೀನ್‍ ಸಜ್ಜು, ‘ಲೋ ನವೀನ’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ.

ನವೀನ್‍ ಹೊಸ ಚಿತ್ರದ ಪೋಸ್ಟರ್‍ ಇದೀಗ ಸೋಷಿಯಲ್‍ ಮೀಡಿಯಾದಲ್ಲಿ ಬಿಡುಗಡೆಯಾಗಿದ್ದು, ನವೀನ್ ಹೊಸ ಪಯಣಕ್ಕೆ ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ಬೆಂಬಲ ನೀಡಿದ್ದಾರೆ. ತಮ್ಮ ಸೋಷಿಯಲ್‍ ಮೀಡಿಯಾದ ಖಾತೆಗಳ ಮೂಲಕ ‘ಲೋ ನವೀನ’ ಚಿತ್ರದ ಪೋಸ್ಟರ್‍ ಬಿಡುಗಡೆ ಮಾಡುವ ಮೂಲಕ ನವೀನ್‍ ಸಜ್ಜು ಹೊಸ ಪ್ರಯತ್ನಕ್ಕೆ ಶುಭ ಕೋರಿದ್ದಾರೆ.

‘ಲೋ ನವೀನ’ ಪೋಸ್ಟರ್‍ ನೋಡುತ್ತಿದ್ದಂತೆಯೇ ಇದೊಂದು ಗ್ರಾಮೀಣ ಚಿತ್ರ ಎಂದನಿಸುವುದು ಹೌದು. ನಟನೆ ಜೊತೆಗೆ ನವೀನ್‌ ಸಜ್ಜು ಅವರೇ ಈ ಸಿನಿಮಾಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಧನುರ್ದಾರಿ ಪವನ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಮೂವರು ಛಾಯಾಗ್ರಾಹಕರು ಕೆಲಸ ಮಾಡುತ್ತಿರುವುದು ವಿಶೇಷ.

‘ಬಿಗ್‌ ಬಾಸ್‌’ ಖ್ಯಾತಿಯ ಅಕ್ಷತಾ ಪಾಂಡವಪುರ ಹಾಗೂ ಪ್ರಸನ್ನ ಸಾಗರ ಅವರ ವಸ್ತ್ರ ವಿನ್ಯಾಸ ಈ ಚಿತ್ರಕ್ಕಿದೆ. ಎನ್‌.ಎಸ್‌. ಸ್ಟುಡಿಯೋ ಬ್ಯಾನರ್‌ ಅಡಿ ತಯಾರಾರಗುತ್ತಿರುವ ಸಿನಿಮಾಗೆ ಅನಿವಾಸಿ ಭಾರತೀಯರಾದ ವರ್ಜೀನಿಯಾ ನಿವಾಸಿ ಕೀರ್ತಿ ಸ್ವಾಮಿ ಬಂಡವಾಳ ಹೂಡಿದ್ದಾರೆ.

‘ಲೋ ನವೀನ’ ಚಿತ್ರಕ್ಕಾಗಿ ಬೆಂಗಳೂರು, ಮೈಸೂರು, ಮಂಡ್ಯ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಸದ್ಯ ಕಲಾವಿದರ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಸಹ ಪ್ರಾರಂಭವಾಗಲಿದೆ.

ಭೂಮಿಕಾ

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

4 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

4 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

5 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

7 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

7 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

8 hours ago