ಜನಪ್ರಿಯ ಗಾಯಕ ನವೀನ್ ಸಜ್ಜು ಹೀರೋ ಆಗುತ್ತಿರುವ ವಿಷಯ ಹಳೆಯದೇ. ಒಂದೆರಡು ವರ್ಷಗಳ ಹಿಂದೆಯೇ ಅವರು ‘ಮ್ಯಾನ್ಷನ್ ಹೌಸ್ ಮುತ್ತು’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಆದರೆ, ಆ ಚಿತ್ರದ ಸುದ್ದಿಯೇ ಇಲ್ಲ. ಈಗ ನವೀನ್ ಸಜ್ಜು, ‘ಲೋ ನವೀನ’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ.
ನವೀನ್ ಹೊಸ ಚಿತ್ರದ ಪೋಸ್ಟರ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಯಾಗಿದ್ದು, ನವೀನ್ ಹೊಸ ಪಯಣಕ್ಕೆ ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ಬೆಂಬಲ ನೀಡಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾದ ಖಾತೆಗಳ ಮೂಲಕ ‘ಲೋ ನವೀನ’ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನವೀನ್ ಸಜ್ಜು ಹೊಸ ಪ್ರಯತ್ನಕ್ಕೆ ಶುಭ ಕೋರಿದ್ದಾರೆ.
‘ಲೋ ನವೀನ’ ಪೋಸ್ಟರ್ ನೋಡುತ್ತಿದ್ದಂತೆಯೇ ಇದೊಂದು ಗ್ರಾಮೀಣ ಚಿತ್ರ ಎಂದನಿಸುವುದು ಹೌದು. ನಟನೆ ಜೊತೆಗೆ ನವೀನ್ ಸಜ್ಜು ಅವರೇ ಈ ಸಿನಿಮಾಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಧನುರ್ದಾರಿ ಪವನ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಮೂವರು ಛಾಯಾಗ್ರಾಹಕರು ಕೆಲಸ ಮಾಡುತ್ತಿರುವುದು ವಿಶೇಷ.
‘ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಪಾಂಡವಪುರ ಹಾಗೂ ಪ್ರಸನ್ನ ಸಾಗರ ಅವರ ವಸ್ತ್ರ ವಿನ್ಯಾಸ ಈ ಚಿತ್ರಕ್ಕಿದೆ. ಎನ್.ಎಸ್. ಸ್ಟುಡಿಯೋ ಬ್ಯಾನರ್ ಅಡಿ ತಯಾರಾರಗುತ್ತಿರುವ ಸಿನಿಮಾಗೆ ಅನಿವಾಸಿ ಭಾರತೀಯರಾದ ವರ್ಜೀನಿಯಾ ನಿವಾಸಿ ಕೀರ್ತಿ ಸ್ವಾಮಿ ಬಂಡವಾಳ ಹೂಡಿದ್ದಾರೆ.
‘ಲೋ ನವೀನ’ ಚಿತ್ರಕ್ಕಾಗಿ ಬೆಂಗಳೂರು, ಮೈಸೂರು, ಮಂಡ್ಯ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಸದ್ಯ ಕಲಾವಿದರ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಸಹ ಪ್ರಾರಂಭವಾಗಲಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…