ನವದೆಹಲಿ: ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಡಿ ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾತಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ.
ಅನುಮತಿ ಪಡೆಯದೇ ತಮ್ಮ ನಿರ್ಮಾಣ ಸಂಸ್ಥೆಯಿಂದ ತಯಾರಾದ ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಕೆ ಮಾಡಿದ್ದಕ್ಕಾಗಿ ಎಂಆರ್ಟಿ ಮ್ಯೂಸಿಕ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಈ ಹಿನ್ನೆಲೆಯಲ್ಲಿ ಇಂದು ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ.
ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಅವರು, ಎಂಆರ್ಟಿ ಹಕ್ಕು ಹೊಂದಿರುವ ನ್ಯಾಯ ಎಲ್ಲಿದೆ ಹಾಗೂ ಒಮ್ಮೆ ನಿನ್ನನ್ನು ಹಾಡನ್ನು ಬಳಕೆ ಮಾಡಿದ್ದರು. ಅನುಮತಿ ಪಡೆಯದೇ ಹಾಡನ್ನು ಬಳಸಿದ್ದನ್ನು ಸಹ ರಕ್ಷಿತ್ ಶೆಟ್ಟಿ ಒಪ್ಪಿಕೊಂಡಿದ್ದರು. ತುಣುಕು ಹಾಡುಗಳನ್ನು ಬಳಸಿಕೊಳ್ಳಲು ಅನುಮತಿ ಬೇಕಾ ಎಂದು ಪ್ರಶ್ನೆ ಮಾಡಿದ್ದರು.
ಇದನ್ನು ಪ್ರಶ್ನಿಸಿ ಎಂಆರ್ಟಿ ಮ್ಯೂಸಿಕ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ ಹಾಗೂ ಪರಂವಾಗೆ ನೋಟಿಸ್ ನೀಡಿತ್ತು. ಈ ನೋಟಿಸ್ಗೆ ರಕ್ಷಿತ್ ಶೆಟ್ಟಿ ಕೋರ್ಟ್ಗೆ ಹಾಜರಾಗದ ಕಾರಣ ಸೋಷಿಯಲ್ ಮೀಡಿಯಾ ಸೇರಿದಂತೆ, ಹಾಡುಗಳು ಬಳಕೆಯಾದ ಕಡೆಯಲ್ಲಿ ತೆಗೆದು ಹಾಕಬೇಕು. ಇದಲ್ಲದೇ 20 ಲಕ್ಷ ರೂಪಾಯಿ ಠೇವಣಿ ಇಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…