ನವದೆಹಲಿ: ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಡಿ ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾತಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ.
ಅನುಮತಿ ಪಡೆಯದೇ ತಮ್ಮ ನಿರ್ಮಾಣ ಸಂಸ್ಥೆಯಿಂದ ತಯಾರಾದ ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಕೆ ಮಾಡಿದ್ದಕ್ಕಾಗಿ ಎಂಆರ್ಟಿ ಮ್ಯೂಸಿಕ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಈ ಹಿನ್ನೆಲೆಯಲ್ಲಿ ಇಂದು ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ.
ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಅವರು, ಎಂಆರ್ಟಿ ಹಕ್ಕು ಹೊಂದಿರುವ ನ್ಯಾಯ ಎಲ್ಲಿದೆ ಹಾಗೂ ಒಮ್ಮೆ ನಿನ್ನನ್ನು ಹಾಡನ್ನು ಬಳಕೆ ಮಾಡಿದ್ದರು. ಅನುಮತಿ ಪಡೆಯದೇ ಹಾಡನ್ನು ಬಳಸಿದ್ದನ್ನು ಸಹ ರಕ್ಷಿತ್ ಶೆಟ್ಟಿ ಒಪ್ಪಿಕೊಂಡಿದ್ದರು. ತುಣುಕು ಹಾಡುಗಳನ್ನು ಬಳಸಿಕೊಳ್ಳಲು ಅನುಮತಿ ಬೇಕಾ ಎಂದು ಪ್ರಶ್ನೆ ಮಾಡಿದ್ದರು.
ಇದನ್ನು ಪ್ರಶ್ನಿಸಿ ಎಂಆರ್ಟಿ ಮ್ಯೂಸಿಕ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ ಹಾಗೂ ಪರಂವಾಗೆ ನೋಟಿಸ್ ನೀಡಿತ್ತು. ಈ ನೋಟಿಸ್ಗೆ ರಕ್ಷಿತ್ ಶೆಟ್ಟಿ ಕೋರ್ಟ್ಗೆ ಹಾಜರಾಗದ ಕಾರಣ ಸೋಷಿಯಲ್ ಮೀಡಿಯಾ ಸೇರಿದಂತೆ, ಹಾಡುಗಳು ಬಳಕೆಯಾದ ಕಡೆಯಲ್ಲಿ ತೆಗೆದು ಹಾಕಬೇಕು. ಇದಲ್ಲದೇ 20 ಲಕ್ಷ ರೂಪಾಯಿ ಠೇವಣಿ ಇಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…