ಮನರಂಜನೆ

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ ವಿಧಿಸಿದೆ.

ಬ್ಯಾಚುಲರ್‌ ಪಾರ್ಟಿ ಚಿತ್ರದಲ್ಲಿ ಅನುಮತಿ ಇಲ್ಲದೇ ಎರಡು ಹಾಡುಗಳನ್ನು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಿತ್‌ ಶೆಟ್ಟಿ ಒಡೆತನದ ಪರಂವಾ ಸ್ಟುಡಿಯೋಸ್‌ಗೆ 25 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.

ವಿಚಾರಣೆಯ ವೇಳೆ ರಕ್ಷಿತ್‌ ಶೆಟ್ಟಿ ಮತ್ತು ತಂಡ ಸಮರ್ಥನೆಯಾಗಿ ಅನೇಕ ವಾದಗಳನ್ನು ಮಂಡಿಸಿದೆ. ನ್ಯಾಯ ಎಲ್ಲಿದೆ ಹಾಡನ್ನು ಕೇವಲ 7 ಸೆಕೆಂಡ್‌, ಒಮ್ಮೆ ನಿನ್ನನ್ನು ಹಾಡನ್ನು 31 ಸೆಕೆಂಡ್‌ ಮಾತ್ರ ಬಳಕೆ ಮಾಡಲಾಗಿದ್ದು, ಇದು ಅತಿ ಕಡಿಮೆ ಅವಧಿ ಆಗಿರುವುದರಿಂದ ಹಕ್ಕುಸ್ವಾಮ್ಯ ಉಲ್ಲಂಘನೆ ಆಗುವುದಿಲ್ಲ ಎಂದು ವಾದಿಸಿತ್ತು.

ಈ ವಾದ ತಿರಸ್ಕರಿಸಿದ ದೆಹಲಿ ಹೈಕೋರ್ಟ್‌ ಹಣಕಾಸಿನ ವಿಚಾರದಲ್ಲಿ ಕಾಪಿರೈಟ್‌ ಉಲ್ಲಂಘಿಸಿದ್ದಕ್ಕಾಗಿ 20 ಲಕ್ಷ ರೂ, ಕೋರ್ಟ್‌ ಆದೇಶ ಪಾಲನೆ ವಿಳಂಬಕ್ಕೆ 5 ಲಕ್ಷ ರೂ ಸೇರಿ ಒಟ್ಟು 25 ಲಕ್ಷ ರೂ ದಂಡ ವಿಧಿಸಿದೆ.

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

37 mins ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

43 mins ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

47 mins ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

52 mins ago

ಓದುಗರ ಪತ್ರ: ಪಾದಚಾರಿ ಮಾರ್ಗ ಒತ್ತುವರಿ ತೆರವು ಸ್ವಾಗತಾರ್ಹ

ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…

1 hour ago

ಓದುಗರ ಪತ್ರ: ಚರಂಡಿ ಕಾಮಗಾರಿ ಪೂರ್ಣಗೊಳಿಸಿ

ಮೈಸೂರಿನ ಹಯಗ್ರೀವ ಕಾಲೇಜು ಹಿಂಭಾಗದ ದಿವಾನ್ಸ್ ರಸ್ತೆಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿಗಾಗಿ ತೆಗೆದಿರುವ ಮಣ್ಣನ್ನು ರಸ್ತೆಯ ಮೇಲೆ…

1 hour ago