ಮನರಂಜನೆ

ಇದು ‘ಹಿಕೋರಾ’ ಎಂಬ anti-virusನ ಕಥೆ; ಹಾಡುಗಳ ಬಿಡುಗಡೆ

ಕೆಲವು ವರ್ಷಗಳ ಹಿಂದಿನ ಮಾತು. ನೀನಸಾಂ ವಿದ್ಯಾರ್ಥಿಗಳು ಮತ್ತು ತಂಡದವರು ಸೇರಿ ಮಾಡುತ್ತಿರುವ ‘ಹಿಕೋರಾ’ ಎಂಬ ಚಿತ್ರದ ಮುಹೂರ್ತಕ್ಕೆ ಬಂದು, ಚಿತ್ರಕ್ಕೆ ಚಾಲನೆ ನೀಡಿದ್ದರು. ಈಗ ಚಿತ್ರವು ಮುಗಿದಿದ್ದು, ಬಿಡುಗಡೆಗೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿದೆ.

‘ಹಿಕೋರಾ’ ಚಿತ್ರವನ್ನ ರತ್ನ ಶ್ರೀಧರ್ ನಿರ್ಮಿಸಿದ್ದು, ನೀನಾಸಂ ಕಿಟ್ಟಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚತ್ರದ ಕರಿತು ಮಾತನಾಡುವ ಕಿಟ್ಟಿ, ‘ನಾನು ನೀನಾಸಂನ ವಿದ್ಯಾರ್ಥಿ. ಅಲ್ಲೇ ನಟನೆ ಕಲಿತದ್ದು. ನಿರ್ಮಾಪಕಿ ರತ್ನ ಹಾಗೂ ಅವರ ಪತಿ ಶ್ರೀಧರ್ ನೀನಾಸಂನಲ್ಲೇ ಮೆಸ್ ನಡೆಸುತ್ತಿದ್ದರು. ಅವರ ಕೈತುತ್ತು ತಿಂದು ಬೆಳೆದವನು ನಾನು. ರತ್ನ ಶ್ರೀಧರ್ ಅವರು ಕರೋನಕ್ಕೂ ಸ್ವಲ್ಪ ದಿನಗಳ ಮುಂಚೆ ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ನಂತರ ಕೊರೋನಾ ಮುಂತಾದ ಕಾರಣಗಳಿಂದ ಚಿತ್ರ ತಡವಾಗಿ, ಇದೀಗ ಬಿಡುಗಡೆ ಹಂತಕ್ಕೆ ಚಿತ್ರ ಬಂದಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ’ ಎಂದರು.

ಹಿಕೋರ ಚಿತ್ರದ ಗೀತೆ ಬಿಡುಗಡೆ ಕಾರ್ಯಕ್ರಮ

ಇಷ್ಟಕ್ಕೂ ‘ಹಿಕೋರಾ’ ಎಂದರೇನು? ‘ಕೊರೋನ ಎಂದರೆ ವೈರಸ್ ಎಂದು ಎಲ್ಲರಿಗೂ ಗೊತ್ತು. ಅದನ್ನು ಹೋಗಲಾಡಿಸಲು ಅನೇಕ ಆಂಟಿ ವೈರಸ್ ಕಂಡು ಹಿಡಿಯಲಾಯಿತು. ‘ಹಿಕೋರಾ’ ಕೂಡ ಒಂದು ಆಂಟಿ ವೈರಸ್‌. ಹಾಗಾದರೆ ವೈರಸ್ ಯಾವುದು? ಅದನ್ನು ತಿಳಿಯಲು ನೀವು ನಮ್ಮ ಸಿನಿಮಾ ನೋಡಬೇಕು’ ಎಂದರು ನಿರ್ದೇಶಕ ಹಾಗೂ ನಟ ನೀನಾಸಂ ಕಿಟ್ಟಿ.

ಈ ಹಿಂದೆ ಹಲವು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿರುವ ಸ್ಪಂದನಾ ಪ್ರಸಾದ್‍ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದ ಕುರಿತು ಮಾತನಾಡುವ ಅವರು, ‘ಈ ಸಮಯದಲ್ಲಿ ನಾನು ಪುನೀತ್ ರಾಜಕುಮಾರ್ ಅವರನ್ನು ನೆನಪಿಸಿಕೊಳ್ಳಬೇಕು. ಅವರು ನನಗೆ ಹೇಳಿದ ಮಾತು ನಾನು ಈ ಚಿತ್ರದಲ್ಲಿ ನಟಿಸಲು ಸ್ಪೂರ್ತಿ‌‌’ ಎಂದರು ಸ್ಪಂದನ ಪ್ರಸಾದ್‍.

‘ಹಿಕೋರಾ’ ಚಿತ್ರದಲ್ಲಿ ಸರ್ದಾರ್ ಸತ್ಯ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ರತ್ನಕ್ಕ ಅವರ ಅನ್ನದ ಋಣ ನನ್ನ ಮೇಲಿದೆ. ನಾನು ನೀನಾಸಂನಲ್ಲಿದ್ದಾಗ ಅವರಿಂದ ಬೇಕಾದನ್ನು ಮಾಡಿಸಿಕೊಂಡು ತಿಂದಿದ್ದೇನೆ. ಒಂದು ದಿನ ರತ್ನಕ್ಕ ಬಂದು ಈ ಚಿತ್ರದಲ್ಲಿ ನಟಿಸಬೇಕು ಎಂದರು. ಜೊತೆಗೆ ಸಂಭಾವನೆಯನ್ನು ಕೇಳಿದರು. ನಾನು ಕೇವಲ ಒಂದು ರೂಪಾಯಿ ಪಡೆದು ಈ ಚಿತ್ರದಲ್ಲಿ ನಟಿಸಿದ್ದೇನೆ’ ಎಂದು ನಟ ಸರ್ದಾರ್ ಸತ್ಯ ಹೇಳಿದರು.

‘ಹಿಕೋರಾ’ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿದ್ದು, ತಮ್ಮದೇ ಹಾಡಿಯೋ ಆಡಿಯೋ ಸಂಸ್ಥೆ ಮೂಲಕ ಹಾಡುಗಳನ್ನು ಹೊರತಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

13 mins ago

ಕೊಟ್ಟ ಮಾತಿನಂತೆ ನಡೆಯುತ್ತಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 580 ಭರವಸೆಗಳ ಪೈಕಿ 290ಕ್ಕೂ ಹೆಚ್ಚು ಭರವಸೆಗಳನ್ನು…

23 mins ago

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

4 hours ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

5 hours ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

7 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

7 hours ago