ಮನರಂಜನೆ

ಅವರ ಕನಸಲ್ಲಿ ಇವರ ಪಾತ್ರ; ‘ರೂಪಾಂತರ’ ಟ್ರೇಲರ್ ಬಿಡುಗಡೆ

ರಾಜ್‍ ಬಿ ಶೆಟ್ಟಿ ಅಭಿನಯದ ‘ಏಕಂ’ ಎಂಬ ವೆಬ್‍ಸರಣಿ ಇತ್ತೀಚೆಗಷ್ಟೇ ಬಿಡುಗಡೆಯಾಯಿತು. ಈಗ ಇದೇ ಶುಕ್ರವಾರ (ಜುಲೈ 26), ರಾಜ್‍ ಅಭಿನಯದ ‘ರೂಪಾಂತರ’ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಅವರು ಬರೀ ನಟ ಮತ್ತು ಸಂಭಾಷಣೆಕಾರ. ಮಿಕ್ಕ ಜವಾಬ್ದಾರಿಗಳು ಅವರ ಸ್ನೇಹಿತರದ್ದು. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ.

‘ರೂಪಾಂತರ’ ಬಗ್ಗೆ ಮಾತನಾಡುವ ರಾಜ್ ಬಿ ಶೆಟ್ಟಿ, ‘ನನಗೆ ಬಹಳ ಇಷ್ಟವಾದ ಚಿತ್ರಗಳ ಪೈಕಿ ‘ರೂಪಾಂತರ’ ಸಹ ಒಂದು. ಈ ಚಿತ್ರದಲ್ಲಿ ನಾನು ನಟ ಮತ್ತು ಸಣ್ಣಮಟ್ಟದಲ್ಲಿ ಬರಹಗಾರನಾಗಿ ಕೆಲಸ ಮಾಡಿದ್ದೇನೆ. ಬಿಟ್ಟರೆ, ಇದು ಇವರ ಕನಸು. ಇದರಲ್ಲಿ ಬೇರೆಬೇರೆ ಪಾತ್ರಗಳ, ಬೇರೆಬೇರೆ ಕಥೆಗಳಿವೆ. ಅವು ರೂಪಾಂತರಗೊಳ್ಳುವುದೇ ಈ ಚಿತ್ರದ ಕಥೆ. ಜೀವನದ ಒಂದು ಮಗ್ಗುಲಲ್ಲಿ ಅವರಲ್ಲಿ ರೂಪಾಂತರವಾಗುವ ಕಥೆ ಇದೆ. ಎಲ್ಲಾ ಕಥೆಗಳು ಸಮಾನಾಂತರವಾಗಿ ಸಾಗುತ್ತಿರುತ್ತದೆ. ಒಂದು ಹಂತದಲ್ಲಿ ಅವರೆಲ್ಲಾ ಭೇಟಿಯಾಗುತ್ತಾರೆ. ಒಬ್ಬನ ರೂಪಾಂತರಕ್ಕೆ ಇನ್ನೊಬ್ಬರ ಕೊಡುಗೆ ಇರುತ್ತದೆ’ ಎಂದರು.

ಈ ಚಿತ್ರವನ್ನು ಮಿಥಿಲೇಶ್ ಎಡವಲತ್ ನಿರ್ದೇಶಿಸಿದ್ದಾರೆ. ಅವರು ಮೂಲತಃ ಕೇರಳದವರು. ಬಹಳ ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವುದರ ಜೊತೆಗೆ ಕಥೆ ಬರೆದು ಕನ್ನಡದಲ್ಲಿ ನಿರ್ದೇಶನ ಮಾಡಿದ್ದಾರೆ. ‘ಬೆಂಗಳೂರಿನಲ್ಲಿ ನಾನು ನೋಡಿ, ಸ್ಫೂರ್ತಿಗೊಂಡ ಜನರ ಕಥೆ ಇದು. ಐದು ಪ್ರಮುಖ ಪಾತ್ರಗಳ ಸುತ್ತ ಈ ಕಥೆ ಸುತ್ತತ್ತದೆ’ ಎಂದು ಹೇಳಿಕೊಂಡರು ಮಿಥಿಲೇಶ್.

ನಿರ್ಮಾಪಕ ಸುಹಾನ್ ಪ್ರಸಾದ್‍ ಇದಕ್ಕೂ ಮೊದಲು ‘ಒಂದು ಮೊಟ್ಟೆಯ ಕಥೆ’ ನಿರ್ಮಿಸಿದ್ದರು. ಈ ಚಿತ್ರದ ಮೂಲಕ ತಾವೂ ರೂಪಾಂತರಗೊಂಡಿರುವ ಕುರಿತು ಹೇಳಿದ ಅವರು, ‘ನಾವು ಇಷ್ಟು ದಿನ ಮಂಗಳೂರಿನ ಭಾಷೆ ಮತ್ತು ಸೊಗಡು ಇಟ್ಟುಕೊಂಡು ಚಿತ್ರ ಮಾಡುತ್ತಿದ್ದೆವು. ಹೊರಗೆ ಬಂದು ಬೇರೆ ತರಹದ ಸಿನಿಮಾ ಮಾಡೋಣ ಎಂಬ ಆಸೆ ಇತ್ತು. ಕಾರಣಾಂತರಗಳಿಂದ ಅದು ನಿಧಾನವಾಯ್ತು. ಈ ಚಿತ್ರದಿಂದ ಅದು ಸಾಧ್ಯವಾಗಿದೆ. ಇಲ್ಲಿ ಮಂಗಳೂರಿನ ಸೊಗಡಿಲ್ಲ. ಅಲ್ಲಿ ಚಿತ್ರೀಕರಣವನ್ನೂ ಮಾಡಿಲ್ಲ. ರಾಜ್ಯದ ಬೇರೆಬೇರೆ ಮೂಲೆಗಳ ಸಾಕಷ್ಟು ಕಲಾವಿದರು ಚಿತ್ರದಲ್ಲಿದ್ದಾರೆ. ಒಂದರ್ಥದಲ್ಲಿ ನಾವು ಸಹ ಈ ಚಿತ್ರದ ಮೂಲಕ ‘ರೂಪಾಂತರ’ ಆಗಿದ್ದೇವೆ’ ಎಂದರು.

ಮಿಥುನ್‍ ಮುಕುಂದನ್‍ ಸಂಗೀತ ಮತ್ತು ಪ್ರವೀಣ್‍ ಶ್ರೀಯಾನ್‍ ಛಾಯಾಗ್ರಹಣವಿರುವ ‘ರೂಪಾಂತರ’ ಚಿತ್ರದಲ್ಲಿ ರಾಜ್‍ ಬಿ. ಶೆಟ್ಟಿ ಜೊತೆಗೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

4 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

5 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

5 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

6 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

6 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

6 hours ago