ಮನರಂಜನೆ

ಅವರ ಕನಸಲ್ಲಿ ಇವರ ಪಾತ್ರ; ‘ರೂಪಾಂತರ’ ಟ್ರೇಲರ್ ಬಿಡುಗಡೆ

ರಾಜ್‍ ಬಿ ಶೆಟ್ಟಿ ಅಭಿನಯದ ‘ಏಕಂ’ ಎಂಬ ವೆಬ್‍ಸರಣಿ ಇತ್ತೀಚೆಗಷ್ಟೇ ಬಿಡುಗಡೆಯಾಯಿತು. ಈಗ ಇದೇ ಶುಕ್ರವಾರ (ಜುಲೈ 26), ರಾಜ್‍ ಅಭಿನಯದ ‘ರೂಪಾಂತರ’ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಅವರು ಬರೀ ನಟ ಮತ್ತು ಸಂಭಾಷಣೆಕಾರ. ಮಿಕ್ಕ ಜವಾಬ್ದಾರಿಗಳು ಅವರ ಸ್ನೇಹಿತರದ್ದು. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ.

‘ರೂಪಾಂತರ’ ಬಗ್ಗೆ ಮಾತನಾಡುವ ರಾಜ್ ಬಿ ಶೆಟ್ಟಿ, ‘ನನಗೆ ಬಹಳ ಇಷ್ಟವಾದ ಚಿತ್ರಗಳ ಪೈಕಿ ‘ರೂಪಾಂತರ’ ಸಹ ಒಂದು. ಈ ಚಿತ್ರದಲ್ಲಿ ನಾನು ನಟ ಮತ್ತು ಸಣ್ಣಮಟ್ಟದಲ್ಲಿ ಬರಹಗಾರನಾಗಿ ಕೆಲಸ ಮಾಡಿದ್ದೇನೆ. ಬಿಟ್ಟರೆ, ಇದು ಇವರ ಕನಸು. ಇದರಲ್ಲಿ ಬೇರೆಬೇರೆ ಪಾತ್ರಗಳ, ಬೇರೆಬೇರೆ ಕಥೆಗಳಿವೆ. ಅವು ರೂಪಾಂತರಗೊಳ್ಳುವುದೇ ಈ ಚಿತ್ರದ ಕಥೆ. ಜೀವನದ ಒಂದು ಮಗ್ಗುಲಲ್ಲಿ ಅವರಲ್ಲಿ ರೂಪಾಂತರವಾಗುವ ಕಥೆ ಇದೆ. ಎಲ್ಲಾ ಕಥೆಗಳು ಸಮಾನಾಂತರವಾಗಿ ಸಾಗುತ್ತಿರುತ್ತದೆ. ಒಂದು ಹಂತದಲ್ಲಿ ಅವರೆಲ್ಲಾ ಭೇಟಿಯಾಗುತ್ತಾರೆ. ಒಬ್ಬನ ರೂಪಾಂತರಕ್ಕೆ ಇನ್ನೊಬ್ಬರ ಕೊಡುಗೆ ಇರುತ್ತದೆ’ ಎಂದರು.

ಈ ಚಿತ್ರವನ್ನು ಮಿಥಿಲೇಶ್ ಎಡವಲತ್ ನಿರ್ದೇಶಿಸಿದ್ದಾರೆ. ಅವರು ಮೂಲತಃ ಕೇರಳದವರು. ಬಹಳ ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವುದರ ಜೊತೆಗೆ ಕಥೆ ಬರೆದು ಕನ್ನಡದಲ್ಲಿ ನಿರ್ದೇಶನ ಮಾಡಿದ್ದಾರೆ. ‘ಬೆಂಗಳೂರಿನಲ್ಲಿ ನಾನು ನೋಡಿ, ಸ್ಫೂರ್ತಿಗೊಂಡ ಜನರ ಕಥೆ ಇದು. ಐದು ಪ್ರಮುಖ ಪಾತ್ರಗಳ ಸುತ್ತ ಈ ಕಥೆ ಸುತ್ತತ್ತದೆ’ ಎಂದು ಹೇಳಿಕೊಂಡರು ಮಿಥಿಲೇಶ್.

ನಿರ್ಮಾಪಕ ಸುಹಾನ್ ಪ್ರಸಾದ್‍ ಇದಕ್ಕೂ ಮೊದಲು ‘ಒಂದು ಮೊಟ್ಟೆಯ ಕಥೆ’ ನಿರ್ಮಿಸಿದ್ದರು. ಈ ಚಿತ್ರದ ಮೂಲಕ ತಾವೂ ರೂಪಾಂತರಗೊಂಡಿರುವ ಕುರಿತು ಹೇಳಿದ ಅವರು, ‘ನಾವು ಇಷ್ಟು ದಿನ ಮಂಗಳೂರಿನ ಭಾಷೆ ಮತ್ತು ಸೊಗಡು ಇಟ್ಟುಕೊಂಡು ಚಿತ್ರ ಮಾಡುತ್ತಿದ್ದೆವು. ಹೊರಗೆ ಬಂದು ಬೇರೆ ತರಹದ ಸಿನಿಮಾ ಮಾಡೋಣ ಎಂಬ ಆಸೆ ಇತ್ತು. ಕಾರಣಾಂತರಗಳಿಂದ ಅದು ನಿಧಾನವಾಯ್ತು. ಈ ಚಿತ್ರದಿಂದ ಅದು ಸಾಧ್ಯವಾಗಿದೆ. ಇಲ್ಲಿ ಮಂಗಳೂರಿನ ಸೊಗಡಿಲ್ಲ. ಅಲ್ಲಿ ಚಿತ್ರೀಕರಣವನ್ನೂ ಮಾಡಿಲ್ಲ. ರಾಜ್ಯದ ಬೇರೆಬೇರೆ ಮೂಲೆಗಳ ಸಾಕಷ್ಟು ಕಲಾವಿದರು ಚಿತ್ರದಲ್ಲಿದ್ದಾರೆ. ಒಂದರ್ಥದಲ್ಲಿ ನಾವು ಸಹ ಈ ಚಿತ್ರದ ಮೂಲಕ ‘ರೂಪಾಂತರ’ ಆಗಿದ್ದೇವೆ’ ಎಂದರು.

ಮಿಥುನ್‍ ಮುಕುಂದನ್‍ ಸಂಗೀತ ಮತ್ತು ಪ್ರವೀಣ್‍ ಶ್ರೀಯಾನ್‍ ಛಾಯಾಗ್ರಹಣವಿರುವ ‘ರೂಪಾಂತರ’ ಚಿತ್ರದಲ್ಲಿ ರಾಜ್‍ ಬಿ. ಶೆಟ್ಟಿ ಜೊತೆಗೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಸೆರೆಗೆ ಡ್ರೋನ್ ಕಾರ್ಯಾಚರಣೆ

ಕೆ.ಬಿ.ರಮೇಶನಾಯಕ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಡ್ರಗ್ಸ್ ಮಾರಾಟ, ಸೇವನೆಯನ್ನು ಬುಡಸಮೇತ ಕಿತ್ತು ಹಾಕುವುದರ ಜತೆಗೆ, ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯದ ಮೇಲೆ…

1 min ago

1.65 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಬೆಳಕು

ಆಂದೋಲನ ವಿಶೇಷ ಸಂದರ್ಶನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹೆಮ್ಮೆಯ ನುಡಿ ಆಂದೋಲನ: ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದ್ದು,…

5 mins ago

‘ನಾನು ಬೆಳೆಸಿದ ಕಾಡಿನಲ್ಲಿ ನನಗೆ ವಾಸಕ್ಕೆ ಜಾಗ ಇಲ್ವಾ?’

ಮಂಜು ಕೋಟೆ ೪೦ ವರ್ಷಗಳ ಕಾಲ ಆದಿವಾಸಿಗಳ ಪರ ಹೋರಾಟ ನಡೆಸಿದ ದಿಟ್ಟ ಮಹಿಳೆ ಸೋಮಮ್ಮ ಇನ್ನು ನೆನಪು ಮಾತ್ರ…

11 mins ago

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

10 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

13 hours ago