ಮನರಂಜನೆ

ಅವರ ಕನಸಲ್ಲಿ ಇವರ ಪಾತ್ರ; ‘ರೂಪಾಂತರ’ ಟ್ರೇಲರ್ ಬಿಡುಗಡೆ

ರಾಜ್‍ ಬಿ ಶೆಟ್ಟಿ ಅಭಿನಯದ ‘ಏಕಂ’ ಎಂಬ ವೆಬ್‍ಸರಣಿ ಇತ್ತೀಚೆಗಷ್ಟೇ ಬಿಡುಗಡೆಯಾಯಿತು. ಈಗ ಇದೇ ಶುಕ್ರವಾರ (ಜುಲೈ 26), ರಾಜ್‍ ಅಭಿನಯದ ‘ರೂಪಾಂತರ’ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಅವರು ಬರೀ ನಟ ಮತ್ತು ಸಂಭಾಷಣೆಕಾರ. ಮಿಕ್ಕ ಜವಾಬ್ದಾರಿಗಳು ಅವರ ಸ್ನೇಹಿತರದ್ದು. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ.

‘ರೂಪಾಂತರ’ ಬಗ್ಗೆ ಮಾತನಾಡುವ ರಾಜ್ ಬಿ ಶೆಟ್ಟಿ, ‘ನನಗೆ ಬಹಳ ಇಷ್ಟವಾದ ಚಿತ್ರಗಳ ಪೈಕಿ ‘ರೂಪಾಂತರ’ ಸಹ ಒಂದು. ಈ ಚಿತ್ರದಲ್ಲಿ ನಾನು ನಟ ಮತ್ತು ಸಣ್ಣಮಟ್ಟದಲ್ಲಿ ಬರಹಗಾರನಾಗಿ ಕೆಲಸ ಮಾಡಿದ್ದೇನೆ. ಬಿಟ್ಟರೆ, ಇದು ಇವರ ಕನಸು. ಇದರಲ್ಲಿ ಬೇರೆಬೇರೆ ಪಾತ್ರಗಳ, ಬೇರೆಬೇರೆ ಕಥೆಗಳಿವೆ. ಅವು ರೂಪಾಂತರಗೊಳ್ಳುವುದೇ ಈ ಚಿತ್ರದ ಕಥೆ. ಜೀವನದ ಒಂದು ಮಗ್ಗುಲಲ್ಲಿ ಅವರಲ್ಲಿ ರೂಪಾಂತರವಾಗುವ ಕಥೆ ಇದೆ. ಎಲ್ಲಾ ಕಥೆಗಳು ಸಮಾನಾಂತರವಾಗಿ ಸಾಗುತ್ತಿರುತ್ತದೆ. ಒಂದು ಹಂತದಲ್ಲಿ ಅವರೆಲ್ಲಾ ಭೇಟಿಯಾಗುತ್ತಾರೆ. ಒಬ್ಬನ ರೂಪಾಂತರಕ್ಕೆ ಇನ್ನೊಬ್ಬರ ಕೊಡುಗೆ ಇರುತ್ತದೆ’ ಎಂದರು.

ಈ ಚಿತ್ರವನ್ನು ಮಿಥಿಲೇಶ್ ಎಡವಲತ್ ನಿರ್ದೇಶಿಸಿದ್ದಾರೆ. ಅವರು ಮೂಲತಃ ಕೇರಳದವರು. ಬಹಳ ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವುದರ ಜೊತೆಗೆ ಕಥೆ ಬರೆದು ಕನ್ನಡದಲ್ಲಿ ನಿರ್ದೇಶನ ಮಾಡಿದ್ದಾರೆ. ‘ಬೆಂಗಳೂರಿನಲ್ಲಿ ನಾನು ನೋಡಿ, ಸ್ಫೂರ್ತಿಗೊಂಡ ಜನರ ಕಥೆ ಇದು. ಐದು ಪ್ರಮುಖ ಪಾತ್ರಗಳ ಸುತ್ತ ಈ ಕಥೆ ಸುತ್ತತ್ತದೆ’ ಎಂದು ಹೇಳಿಕೊಂಡರು ಮಿಥಿಲೇಶ್.

ನಿರ್ಮಾಪಕ ಸುಹಾನ್ ಪ್ರಸಾದ್‍ ಇದಕ್ಕೂ ಮೊದಲು ‘ಒಂದು ಮೊಟ್ಟೆಯ ಕಥೆ’ ನಿರ್ಮಿಸಿದ್ದರು. ಈ ಚಿತ್ರದ ಮೂಲಕ ತಾವೂ ರೂಪಾಂತರಗೊಂಡಿರುವ ಕುರಿತು ಹೇಳಿದ ಅವರು, ‘ನಾವು ಇಷ್ಟು ದಿನ ಮಂಗಳೂರಿನ ಭಾಷೆ ಮತ್ತು ಸೊಗಡು ಇಟ್ಟುಕೊಂಡು ಚಿತ್ರ ಮಾಡುತ್ತಿದ್ದೆವು. ಹೊರಗೆ ಬಂದು ಬೇರೆ ತರಹದ ಸಿನಿಮಾ ಮಾಡೋಣ ಎಂಬ ಆಸೆ ಇತ್ತು. ಕಾರಣಾಂತರಗಳಿಂದ ಅದು ನಿಧಾನವಾಯ್ತು. ಈ ಚಿತ್ರದಿಂದ ಅದು ಸಾಧ್ಯವಾಗಿದೆ. ಇಲ್ಲಿ ಮಂಗಳೂರಿನ ಸೊಗಡಿಲ್ಲ. ಅಲ್ಲಿ ಚಿತ್ರೀಕರಣವನ್ನೂ ಮಾಡಿಲ್ಲ. ರಾಜ್ಯದ ಬೇರೆಬೇರೆ ಮೂಲೆಗಳ ಸಾಕಷ್ಟು ಕಲಾವಿದರು ಚಿತ್ರದಲ್ಲಿದ್ದಾರೆ. ಒಂದರ್ಥದಲ್ಲಿ ನಾವು ಸಹ ಈ ಚಿತ್ರದ ಮೂಲಕ ‘ರೂಪಾಂತರ’ ಆಗಿದ್ದೇವೆ’ ಎಂದರು.

ಮಿಥುನ್‍ ಮುಕುಂದನ್‍ ಸಂಗೀತ ಮತ್ತು ಪ್ರವೀಣ್‍ ಶ್ರೀಯಾನ್‍ ಛಾಯಾಗ್ರಹಣವಿರುವ ‘ರೂಪಾಂತರ’ ಚಿತ್ರದಲ್ಲಿ ರಾಜ್‍ ಬಿ. ಶೆಟ್ಟಿ ಜೊತೆಗೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

45 mins ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

3 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago