ಮನರಂಜನೆ

ಕಾಲ್ಪನಿಕ, ಪೌರಾಣಿಕ ನಂತರ ಐತಿಹಾಸಿಕ ಚಿತ್ರದಲ್ಲಿ ರಿಷಭ್‍ ಶೆಟ್ಟಿ

ರಿಷಭ್‍ ಶೆಟ್ಟಿ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ‘ಕಾಂತಾರ – ಅಧ್ಯಾಯ 1’ ಚಿತ್ರದಲ್ಲಿ ಅವರು ಭಕ್ತಿ ಮತ್ತು ಪೌರಾಣಿಕ ಅಂಶಗಳ ಕಾಲ್ಪನಿಕ ಕಥೆ ಹೇಳಿದರೆ, ‘ಜೈ ಹನುಮಾನ್‍’ ಚಿತ್ರದಲ್ಲಿ ಅವರು ಪೌರಾಣಿಕ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ಅವರು ಇದೇ ಮೊದಲ ಬಾರಿಗೆ ಐತಿಹಾಸಿಕ ಚಿತ್ರವೊಂದರಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದಾರೆ.

ಈ ಬಾರಿ ಅವರು ಛತ್ರಪತಿ ಶಿವಾಜಿ ಕುರಿತ ‘ದಿ ಪ್ರೈಡ್‍ ಆಫ್‍ ಭಾರತ್‍ – ಛತ್ರಪತಿ ಶಿವಾಜಿ ಮಹಾರಾಜ್‍’ ಎಂಬ ಚಿತ್ರದಲ್ಲಿ ಶಿವಾಜಿ ಮಹಾರಾಜರ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಘೋಷಣೆ ಮಂಗಳವಾರ ಅಧಿಕೃತವಾಗಿ ಆಗಿದೆ.

ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿರುವ ರಿಷಭ್‍ ಶೆಟ್ಟಿ, ‘ಭಾರತದ ಹೆಮ್ಮೆಯ ಪುತ್ರ ಶಿವಾಜಿ ಮಹಾರಾಜ್‍ ಕುರಿತು ಚಿತ್ರ ಘೋಷಿಸುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇದೊಂದು ಚಿತ್ರವಷ್ಟೇ ಅಲ್ಲ, ಬಲಿಷ್ಠ ಮೊಘಲ್ ಸಾಮ್ರಾಜ್ಯದ ವಿರುದ್ಧ ಹೋರಾಡಿದ ಒಬ್ಬ ವೀರ ಯೋಧನ ಕಥೆ. ಈ ಅಪ್ರತಿಮ ಯೋಧನ ಕಥೆಯನ್ನು ನೋಡಲು ಸಿದ್ಧರಾಗಿ. ಚಿತ್ರವು ಜಾಗತಿಕವಾಗಿ 2027ರ ಜನವರಿ.21ರಂದು ಬಿಡುಗಡೆ ಆಗಲಿದೆ’ ಎಂದು ಹೇಳಿಕೊಂಡಿದ್ದಾರೆ.

‘ದಿ ಪ್ರೈಡ್‍ ಆಫ್‍ ಭಾರತ್‍ – ಛತ್ರಪತಿ ಶಿವಾಜಿ ಮಹಾರಾಜ್‍’ ಚಿತ್ರವನ್ನು ಸಂದೀಪ್‍ ಸಿಂಗ್ ‍ನಿರ್ದೇಶಿಸುತ್ತಿದ್ದಾರೆ. ಸಂದೀಪ್‍ ಸಿಂಗ್ ಇದಕ್ಕೂ ಮೊದಲು ‘ಅಲಿಘರ್‍’, ‘ಸರ್ಬ್ಜಿತ್‍’, ‘ಭೂಮಿ’, ‘ಪಿಎಂ ನರೇಂದ್ರ ಮೋಧಿ’, ‘ಝುಂಡ್‍’, ‘ಮೇ ಅಟಲ್‍ ಹೂಂ’ ಮತ್ತು ‘ಸವಾತಂತ್ರ್ಯ ವೀರ್‍ ಸಾವರ್ಕರ್‍’ ಚಿತ್ರಗಳನ್ನು ನಿರ್ಮಿಸಿದ್ದರು. ಇದು ಅವರ ನಿರ್ದೇಶನದ ಎರಡನೇ ಚಿತ್ರ. ಕಳೆದ ವರ್ಷ ಬಿಡಗಡೆಯಾದ ‘ಸಫೇದ್‍’ ಎಂಬ ಚಿತ್ರವನ್ನು ಅವರು ನಿರ್ದೇಶಿಸಿದ್ದರು.

‘ದಿ ಪ್ರೈಡ್‍ ಆಫ್‍ ಭಾರತ್‍ – ಛತ್ರಪತಿ ಶಿವಾಜಿ ಮಹಾರಾಜ್‍’ ಘೋಷಣೆಯ ದಿನವೇ ಬಿಡುಗಡೆ ದಿನಾಂಕವನ್ನೂ ಘೋಷಿಸಲಾಗಿದೆ. ಚಿತ್ರವನ್ನು 2027ರ ಜನವರಿ 21ರಂದು ಬಿಡುಗಡೆ ಮಾಡಲಾಗುತ್ತದಂತೆ. ‘ಕಾಂತಾರ – ಅಧ್ಯಾಯ 1’ ಚಿತ್ರವು 2025ರ ಅಕ್ಟೋಬರ್‍ 02ರಂದು ಬಿಡುಗಡೆಯಾಗದರೆ, ‘ಜೈ ಹನುಮಾನ್‍’ ಚಿತ್ರವು 2026ರಲ್ಲಿ ಬಿಡುಗಡೆಯಾಗಲಿದೆ. 2027ರಲ್ಲಿ ‘ದಿ ಪ್ರೈಡ್‍ ಆಫ್‍ ಭಾರತ್‍ – ಛತ್ರಪತಿ ಶಿವಾಜಿ ಮಹಾರಾಜ್‍’ ತೆರೆಗೆ ಬರಲಿದೆ.

ಆಂದೋಲನ ಡೆಸ್ಕ್

Recent Posts

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ವಿಧಿವಶ

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…

4 hours ago

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

13 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

1 day ago