ಮನರಂಜನೆ

‘ಟಾಕ್ಸಿಕ್’ ಚಿತ್ರಕ್ಕೆ ಹಾಲಿವುಡ್‍ ಸಾಹಸ ನಿರ್ದೇಶಕ ಜೆ.ಜೆ. ಪೆರ್ರಿ ಎಂಟ್ರಿ

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರಕ್ಕೆ ಹಾಲಿವುಡ್‍ನ ಜನಪ್ರಿಯ ಸಾಹಸ ನಿರ್ದೇಶಕ ಜೆ.ಜೆ. ಪೆರ್ರಿ ಸಾಹಸ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಅದೀಗ ನಿಜವಾಗಿದೆ. ಭಾರತೀಯ ಚಿತ್ರರಂಗದ ಖ್ಯಾತ ಸ್ಟಂಟ್‍ ತಂಡದ ಜೊತೆಗೂಡಿ 45 ದಿನಗಳ ಸಾಹಸ ದೃಶ್ಯಗಳ ಚಿತ್ರೀಕರಣಕ್ಕೆ ಪೆರ್ರಿ ಸಜ್ಜಾಗಿದ್ದಾರೆ.

ಪೆರ್ರಿ ಇದಕ್ಕೂ ಮೊದಲು ಹಾಲಿವುಡ್‍ನ ಜನಪ್ರಿಯ ಚಿತ್ರಗಳಾದ ‘ಜಾನ್‍ ವಿಕ್‍’, ‘ಫಾಸ್ಟ್ ಆ್ಯಂಡ್ ಫ್ಯೂರಿಯಸ್‍’, ‘ಡೇ ಶಿಫ್ಟ್’ ಮುಂತಾದ ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿ ಜನಪ್ರಿಯರಾಗಿದ್ದಾರೆ. ಈಗ ಮೊದಲ ಬಾರಿಗೆ ಭಾರತೀಯ ಚಿತ್ರವೊಂದಕ್ಕೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಹಾಲಿವುಡ್‍ಗೆ ಸೆಡ್ಡು ಹೊಡೆಯುವಂತಹ ಸಾಹಸ ದೃಶ್ಯಗಳು ಇರಲಿವೆ ಎಂದು ಹೇಳಲಾಗುತ್ತಿದೆ.

ಕಳೆದ 35 ವರ್ಷಗಳಲ್ಲಿ ಸುಮಾರು 39 ದೇಶಗಳಲ್ಲಿ ಕೆಲಸ ಮಾಡಿರುವ ಪೆರ್ರಿ, ಭಾರತೀಯ ಚಿತ್ರರಂಗದಲ್ಲಿ ಕೆಲಸ ಮಾಡಿರಲಿಲ್ಲ. ‘ಟಾಕ್ಸಿಕ್‍’ ಚಿತ್ರತಂಡದ ಜೊತೆಗೆ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದು ಪೆರ್ರಿ ಹೇಳಿಕೊಂಡಿದ್ದಾರೆ.

‘ಟಾಕ್ಸಿಕ್‍’ ಚಿತ್ರವನ್ನು KVN ಪ್ರೊಡಕ್ಷನ್ಸ್ ಮತ್ತು ಯಶ್‍ ಅವರ ಮಾನ್‍ಸ್ಟರ್ ಮೈಂಡ್‍ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತೂ ಮೋಹನ್‍ ದಾಸ್‍ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಯಶ್‍, ಕಿಯಾರಾ ಅಡ್ವಾಣಿ, ನಯನತಾರಾ, ಹಾಲಿವುಡ್‍ ನಟ ಕೈಲ್‍ ಪಾಲ್‍, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್‍, ಅನಿಲ್‍ ಕಪೂರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

‘ಟಾಕ್ಸಿಕ್‍’ ಒಂದು ಪ್ಯಾನ್‍ ವರ್ಲ್ಡ್ ಚಿತ್ರವಾಗಿದ್ದು, 2026ರ ಮಾರ್ಚ್ 19ರಂದು ಬಿಡುಗಡೆಯಾಗಲಿದೆ. ಚಿತ್ರವನ್ನು ಜಾಗತಿಕ ಮಟ್ಟದಲ್ಲಿ ಕೊಂಡೊಯ್ಯುವ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ಚಿತ್ರೀಕರಿಸಲಾಗುತ್ತಿದೆ. ಬಳಿಕ ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

3 mins ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

46 mins ago

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

5 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

5 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

5 hours ago