ಮನರಂಜನೆ

‘ಟಾಕ್ಸಿಕ್’ ಚಿತ್ರಕ್ಕೆ ಹಾಲಿವುಡ್‍ ಸಾಹಸ ನಿರ್ದೇಶಕ ಜೆ.ಜೆ. ಪೆರ್ರಿ ಎಂಟ್ರಿ

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರಕ್ಕೆ ಹಾಲಿವುಡ್‍ನ ಜನಪ್ರಿಯ ಸಾಹಸ ನಿರ್ದೇಶಕ ಜೆ.ಜೆ. ಪೆರ್ರಿ ಸಾಹಸ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಅದೀಗ ನಿಜವಾಗಿದೆ. ಭಾರತೀಯ ಚಿತ್ರರಂಗದ ಖ್ಯಾತ ಸ್ಟಂಟ್‍ ತಂಡದ ಜೊತೆಗೂಡಿ 45 ದಿನಗಳ ಸಾಹಸ ದೃಶ್ಯಗಳ ಚಿತ್ರೀಕರಣಕ್ಕೆ ಪೆರ್ರಿ ಸಜ್ಜಾಗಿದ್ದಾರೆ.

ಪೆರ್ರಿ ಇದಕ್ಕೂ ಮೊದಲು ಹಾಲಿವುಡ್‍ನ ಜನಪ್ರಿಯ ಚಿತ್ರಗಳಾದ ‘ಜಾನ್‍ ವಿಕ್‍’, ‘ಫಾಸ್ಟ್ ಆ್ಯಂಡ್ ಫ್ಯೂರಿಯಸ್‍’, ‘ಡೇ ಶಿಫ್ಟ್’ ಮುಂತಾದ ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿ ಜನಪ್ರಿಯರಾಗಿದ್ದಾರೆ. ಈಗ ಮೊದಲ ಬಾರಿಗೆ ಭಾರತೀಯ ಚಿತ್ರವೊಂದಕ್ಕೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಹಾಲಿವುಡ್‍ಗೆ ಸೆಡ್ಡು ಹೊಡೆಯುವಂತಹ ಸಾಹಸ ದೃಶ್ಯಗಳು ಇರಲಿವೆ ಎಂದು ಹೇಳಲಾಗುತ್ತಿದೆ.

ಕಳೆದ 35 ವರ್ಷಗಳಲ್ಲಿ ಸುಮಾರು 39 ದೇಶಗಳಲ್ಲಿ ಕೆಲಸ ಮಾಡಿರುವ ಪೆರ್ರಿ, ಭಾರತೀಯ ಚಿತ್ರರಂಗದಲ್ಲಿ ಕೆಲಸ ಮಾಡಿರಲಿಲ್ಲ. ‘ಟಾಕ್ಸಿಕ್‍’ ಚಿತ್ರತಂಡದ ಜೊತೆಗೆ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದು ಪೆರ್ರಿ ಹೇಳಿಕೊಂಡಿದ್ದಾರೆ.

‘ಟಾಕ್ಸಿಕ್‍’ ಚಿತ್ರವನ್ನು KVN ಪ್ರೊಡಕ್ಷನ್ಸ್ ಮತ್ತು ಯಶ್‍ ಅವರ ಮಾನ್‍ಸ್ಟರ್ ಮೈಂಡ್‍ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತೂ ಮೋಹನ್‍ ದಾಸ್‍ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಯಶ್‍, ಕಿಯಾರಾ ಅಡ್ವಾಣಿ, ನಯನತಾರಾ, ಹಾಲಿವುಡ್‍ ನಟ ಕೈಲ್‍ ಪಾಲ್‍, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್‍, ಅನಿಲ್‍ ಕಪೂರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

‘ಟಾಕ್ಸಿಕ್‍’ ಒಂದು ಪ್ಯಾನ್‍ ವರ್ಲ್ಡ್ ಚಿತ್ರವಾಗಿದ್ದು, 2026ರ ಮಾರ್ಚ್ 19ರಂದು ಬಿಡುಗಡೆಯಾಗಲಿದೆ. ಚಿತ್ರವನ್ನು ಜಾಗತಿಕ ಮಟ್ಟದಲ್ಲಿ ಕೊಂಡೊಯ್ಯುವ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ಚಿತ್ರೀಕರಿಸಲಾಗುತ್ತಿದೆ. ಬಳಿಕ ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

53 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

2 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

4 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

8 hours ago