ಮನರಂಜನೆ

ಹಾಲಿವುಡ್‌ ನಿರ್ಮಾಪಕ ಜಾನ್‌ ಲ್ಯಾಂಡೊ ನಿಧನ

ವಾಷಿಂಗ್ಟನ್‌: ಹಾಲಿವುಡ್‌ನಲ್ಲಿ ಅವತಾರ್‌, ಟೈಟಾನಿಕ್‌ ನಂತಹ ಬ್ಲಾಕ್‌ ಬಾಸ್ಟರ್‌ ಸಿನಿಮಾಗಳಿಗೆ ನಿರೂಪಕರಾಗಿದ್ದ ಜಾನ್‌ ಲ್ಯಾಂಡೊ ಅವರು ಶನಿವಾರ (ಜುಲೈ. 6) ನಿಧನರಾಗಿದ್ದಾರೆ.

ಜುಲೈ 23, 1960ರಂದು ನ್ಯೂಯಾರ್ಕ್‌ನಲ್ಲಿ ಜನಿಸಿದ ಇವರು 1980ರಲ್ಲಿ ಪ್ರೋಡಕ್ಷನ್ ಮ್ಯಾನೇಜರ್‌ ಆಗಿ ವೃತ್ತಿ ಪ್ರಾರಂಭಿಸಿದ ಅವರು ನಂತರ ಟೈಟಾನಿಕ್‌, ಅವತಾರ್‌ ನಂತಹ ಜನಪ್ರಿಯ ಚಿತ್ರಗಳ ನಿರ್ಮಿಸಿ ಜನಮನ ಗೆದ್ದಿದ್ದರು.

ಡಿಸ್ನಿ ಎಂಟರ್‌ಡಟೈನ್‌ಮೆಂಟ್‌ ಸಹ ಅಧ್ಯಕ್ಷ ಅಲನ್‌ ಬರ್ಗ್‌ಮನ್‌ ಅವರು ನಿರ್ಮಾಪಕ ಲ್ಯಾಂಡೊ ನಿಧನ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಲ್ಯಾಂಡೊ ಅವರ ನಿರ್ಮಾಣದಲ್ಲಿ 1997ರಲ್ಲಿ ಮೂಡಿಬಂದ ಟೈಟಾನಿಕ್‌ ಚಿತ್ರ ಬರೋಬ್ಬರಿ 11 ಆಸ್ಕರ್‌ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು. 2009ರಲ್ಲಿ ಮೂಡಬಂದ ಅವತಾರ್‌ ಚಿತ್ರ ಪ್ರಪಂಚದಾದ್ಯಂತ ಸಿನಿ ರಸಿಕರನ್ನು ರಂಜಿಸಿ ಮನಗೆದ್ದಿತ್ತು. ಅವತಾರ್‌ ಚತ್ರದ ಸೀಕ್ವೆಲ್‌ ಅವತಾರ್‌ ದಿ ವೇ ಆಫ್‌ ವಾಟರ್‌ ಚಿತ್ರ ಇತ್ತೀಚೆಗೆ ತೆರೆಕಂಡು ಭರ್ಜರಿ ಕಲೆಕ್ಷನ್‌ ಮಾಡಿತ್ತು.

ಇನ್ನು ಲ್ಯಾಂಡೊ ನಿಧನದ ಬಗ್ಗೆ ಅವತಾರ್‌ ಅಕೌಂಟ್‌ನಿಂದ ಅಧಿಕೃತ ಮಾಹಿತಿ ಬಂದಿದ್ದು, ಜಿಮ್‌ ಕ್ಯಾಮರೋನ್‌ ಅವರು ಲ್ಯಾಂಡೊ ನಿಧನಕ್ಕೆ ಕಂಬನಿ ಮಿಡಿದ್ದಾರೆ. ಈ ಸಂಬಂಧ ಫೋಟೋ ಒಂದನ್ನು ಹಂಚಿಕೊಂಡು ಟ್ವೀಟ್‌ ಮಾಡಿದ್ದು, “ನಮ್ಮ ಸ್ನೇಹಿತ ಮತ್ತು ನಾಯಕ ಜಾನ್ ಲ್ಯಾಂಡೊ ಅವರ ನಷ್ಟದಿಂದ ಅವತಾರ್ ಕುಟುಂಬವು ದುಃಖಿತವಾಗಿದೆ. ಅವರ ವಿವೇಕಯುತ ಹಾಸ್ಯ, ವೈಯಕ್ತಿಕ ಕಾಂತೀಯತೆ, ಉತ್ಸಾಹದ ಮಹಾನ್ ಉದಾರತೆ ಮತ್ತು ಉಗ್ರತೆಯು ನಮ್ಮ ಅವತಾರ್ ಸಮೂಹವನ್ನು ಸುಮಾರು ಎರಡು ದಶಕಗಳವರೆಗೆ ಹಿಡಿದಿಟ್ಟುಕೊಂಡಿತ್ತು.

ಅವರು ಉತ್ತಮ ಚಲನಚಿತ್ರಗಳನ್ನು ನಿರ್ಮಿಸಿದರು. ಅವರು ನಮಗೆಲ್ಲರಿಗೂ ಪ್ರತಿದಿನವೂ ನಮ್ಮ ಅತ್ಯುತ್ತಮವಾದದ್ದನ್ನು ತರಲು ಸ್ಫೂರ್ತಿ ನೀಡಿದರು. ನಾನು ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಮತ್ತು 31 ವರ್ಷಗಳ ನನ್ನ ಹತ್ತಿರದ ಸಹಯೋಗಿ. ನನ್ನ ಒಂದು ಭಾಗವು ಹರಿದುಹೋಗಿದೆ” ಎಂದು ಜಿಮ್ ಕ್ಯಾಮೆರಾನ್ ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

36 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

41 mins ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

1 hour ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

1 hour ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

2 hours ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

2 hours ago