ಮನರಂಜನೆ

ಹಾಲಿವುಡ್‌ ನಿರ್ಮಾಪಕ ಜಾನ್‌ ಲ್ಯಾಂಡೊ ನಿಧನ

ವಾಷಿಂಗ್ಟನ್‌: ಹಾಲಿವುಡ್‌ನಲ್ಲಿ ಅವತಾರ್‌, ಟೈಟಾನಿಕ್‌ ನಂತಹ ಬ್ಲಾಕ್‌ ಬಾಸ್ಟರ್‌ ಸಿನಿಮಾಗಳಿಗೆ ನಿರೂಪಕರಾಗಿದ್ದ ಜಾನ್‌ ಲ್ಯಾಂಡೊ ಅವರು ಶನಿವಾರ (ಜುಲೈ. 6) ನಿಧನರಾಗಿದ್ದಾರೆ.

ಜುಲೈ 23, 1960ರಂದು ನ್ಯೂಯಾರ್ಕ್‌ನಲ್ಲಿ ಜನಿಸಿದ ಇವರು 1980ರಲ್ಲಿ ಪ್ರೋಡಕ್ಷನ್ ಮ್ಯಾನೇಜರ್‌ ಆಗಿ ವೃತ್ತಿ ಪ್ರಾರಂಭಿಸಿದ ಅವರು ನಂತರ ಟೈಟಾನಿಕ್‌, ಅವತಾರ್‌ ನಂತಹ ಜನಪ್ರಿಯ ಚಿತ್ರಗಳ ನಿರ್ಮಿಸಿ ಜನಮನ ಗೆದ್ದಿದ್ದರು.

ಡಿಸ್ನಿ ಎಂಟರ್‌ಡಟೈನ್‌ಮೆಂಟ್‌ ಸಹ ಅಧ್ಯಕ್ಷ ಅಲನ್‌ ಬರ್ಗ್‌ಮನ್‌ ಅವರು ನಿರ್ಮಾಪಕ ಲ್ಯಾಂಡೊ ನಿಧನ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಲ್ಯಾಂಡೊ ಅವರ ನಿರ್ಮಾಣದಲ್ಲಿ 1997ರಲ್ಲಿ ಮೂಡಿಬಂದ ಟೈಟಾನಿಕ್‌ ಚಿತ್ರ ಬರೋಬ್ಬರಿ 11 ಆಸ್ಕರ್‌ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು. 2009ರಲ್ಲಿ ಮೂಡಬಂದ ಅವತಾರ್‌ ಚಿತ್ರ ಪ್ರಪಂಚದಾದ್ಯಂತ ಸಿನಿ ರಸಿಕರನ್ನು ರಂಜಿಸಿ ಮನಗೆದ್ದಿತ್ತು. ಅವತಾರ್‌ ಚತ್ರದ ಸೀಕ್ವೆಲ್‌ ಅವತಾರ್‌ ದಿ ವೇ ಆಫ್‌ ವಾಟರ್‌ ಚಿತ್ರ ಇತ್ತೀಚೆಗೆ ತೆರೆಕಂಡು ಭರ್ಜರಿ ಕಲೆಕ್ಷನ್‌ ಮಾಡಿತ್ತು.

ಇನ್ನು ಲ್ಯಾಂಡೊ ನಿಧನದ ಬಗ್ಗೆ ಅವತಾರ್‌ ಅಕೌಂಟ್‌ನಿಂದ ಅಧಿಕೃತ ಮಾಹಿತಿ ಬಂದಿದ್ದು, ಜಿಮ್‌ ಕ್ಯಾಮರೋನ್‌ ಅವರು ಲ್ಯಾಂಡೊ ನಿಧನಕ್ಕೆ ಕಂಬನಿ ಮಿಡಿದ್ದಾರೆ. ಈ ಸಂಬಂಧ ಫೋಟೋ ಒಂದನ್ನು ಹಂಚಿಕೊಂಡು ಟ್ವೀಟ್‌ ಮಾಡಿದ್ದು, “ನಮ್ಮ ಸ್ನೇಹಿತ ಮತ್ತು ನಾಯಕ ಜಾನ್ ಲ್ಯಾಂಡೊ ಅವರ ನಷ್ಟದಿಂದ ಅವತಾರ್ ಕುಟುಂಬವು ದುಃಖಿತವಾಗಿದೆ. ಅವರ ವಿವೇಕಯುತ ಹಾಸ್ಯ, ವೈಯಕ್ತಿಕ ಕಾಂತೀಯತೆ, ಉತ್ಸಾಹದ ಮಹಾನ್ ಉದಾರತೆ ಮತ್ತು ಉಗ್ರತೆಯು ನಮ್ಮ ಅವತಾರ್ ಸಮೂಹವನ್ನು ಸುಮಾರು ಎರಡು ದಶಕಗಳವರೆಗೆ ಹಿಡಿದಿಟ್ಟುಕೊಂಡಿತ್ತು.

ಅವರು ಉತ್ತಮ ಚಲನಚಿತ್ರಗಳನ್ನು ನಿರ್ಮಿಸಿದರು. ಅವರು ನಮಗೆಲ್ಲರಿಗೂ ಪ್ರತಿದಿನವೂ ನಮ್ಮ ಅತ್ಯುತ್ತಮವಾದದ್ದನ್ನು ತರಲು ಸ್ಫೂರ್ತಿ ನೀಡಿದರು. ನಾನು ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಮತ್ತು 31 ವರ್ಷಗಳ ನನ್ನ ಹತ್ತಿರದ ಸಹಯೋಗಿ. ನನ್ನ ಒಂದು ಭಾಗವು ಹರಿದುಹೋಗಿದೆ” ಎಂದು ಜಿಮ್ ಕ್ಯಾಮೆರಾನ್ ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

1 hour ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

4 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

4 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

5 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

5 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

5 hours ago