ಮನರಂಜನೆ

ಹಾಲಿವುಡ್‌ ನಿರ್ಮಾಪಕ ಜಾನ್‌ ಲ್ಯಾಂಡೊ ನಿಧನ

ವಾಷಿಂಗ್ಟನ್‌: ಹಾಲಿವುಡ್‌ನಲ್ಲಿ ಅವತಾರ್‌, ಟೈಟಾನಿಕ್‌ ನಂತಹ ಬ್ಲಾಕ್‌ ಬಾಸ್ಟರ್‌ ಸಿನಿಮಾಗಳಿಗೆ ನಿರೂಪಕರಾಗಿದ್ದ ಜಾನ್‌ ಲ್ಯಾಂಡೊ ಅವರು ಶನಿವಾರ (ಜುಲೈ. 6) ನಿಧನರಾಗಿದ್ದಾರೆ.

ಜುಲೈ 23, 1960ರಂದು ನ್ಯೂಯಾರ್ಕ್‌ನಲ್ಲಿ ಜನಿಸಿದ ಇವರು 1980ರಲ್ಲಿ ಪ್ರೋಡಕ್ಷನ್ ಮ್ಯಾನೇಜರ್‌ ಆಗಿ ವೃತ್ತಿ ಪ್ರಾರಂಭಿಸಿದ ಅವರು ನಂತರ ಟೈಟಾನಿಕ್‌, ಅವತಾರ್‌ ನಂತಹ ಜನಪ್ರಿಯ ಚಿತ್ರಗಳ ನಿರ್ಮಿಸಿ ಜನಮನ ಗೆದ್ದಿದ್ದರು.

ಡಿಸ್ನಿ ಎಂಟರ್‌ಡಟೈನ್‌ಮೆಂಟ್‌ ಸಹ ಅಧ್ಯಕ್ಷ ಅಲನ್‌ ಬರ್ಗ್‌ಮನ್‌ ಅವರು ನಿರ್ಮಾಪಕ ಲ್ಯಾಂಡೊ ನಿಧನ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಲ್ಯಾಂಡೊ ಅವರ ನಿರ್ಮಾಣದಲ್ಲಿ 1997ರಲ್ಲಿ ಮೂಡಿಬಂದ ಟೈಟಾನಿಕ್‌ ಚಿತ್ರ ಬರೋಬ್ಬರಿ 11 ಆಸ್ಕರ್‌ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು. 2009ರಲ್ಲಿ ಮೂಡಬಂದ ಅವತಾರ್‌ ಚಿತ್ರ ಪ್ರಪಂಚದಾದ್ಯಂತ ಸಿನಿ ರಸಿಕರನ್ನು ರಂಜಿಸಿ ಮನಗೆದ್ದಿತ್ತು. ಅವತಾರ್‌ ಚತ್ರದ ಸೀಕ್ವೆಲ್‌ ಅವತಾರ್‌ ದಿ ವೇ ಆಫ್‌ ವಾಟರ್‌ ಚಿತ್ರ ಇತ್ತೀಚೆಗೆ ತೆರೆಕಂಡು ಭರ್ಜರಿ ಕಲೆಕ್ಷನ್‌ ಮಾಡಿತ್ತು.

ಇನ್ನು ಲ್ಯಾಂಡೊ ನಿಧನದ ಬಗ್ಗೆ ಅವತಾರ್‌ ಅಕೌಂಟ್‌ನಿಂದ ಅಧಿಕೃತ ಮಾಹಿತಿ ಬಂದಿದ್ದು, ಜಿಮ್‌ ಕ್ಯಾಮರೋನ್‌ ಅವರು ಲ್ಯಾಂಡೊ ನಿಧನಕ್ಕೆ ಕಂಬನಿ ಮಿಡಿದ್ದಾರೆ. ಈ ಸಂಬಂಧ ಫೋಟೋ ಒಂದನ್ನು ಹಂಚಿಕೊಂಡು ಟ್ವೀಟ್‌ ಮಾಡಿದ್ದು, “ನಮ್ಮ ಸ್ನೇಹಿತ ಮತ್ತು ನಾಯಕ ಜಾನ್ ಲ್ಯಾಂಡೊ ಅವರ ನಷ್ಟದಿಂದ ಅವತಾರ್ ಕುಟುಂಬವು ದುಃಖಿತವಾಗಿದೆ. ಅವರ ವಿವೇಕಯುತ ಹಾಸ್ಯ, ವೈಯಕ್ತಿಕ ಕಾಂತೀಯತೆ, ಉತ್ಸಾಹದ ಮಹಾನ್ ಉದಾರತೆ ಮತ್ತು ಉಗ್ರತೆಯು ನಮ್ಮ ಅವತಾರ್ ಸಮೂಹವನ್ನು ಸುಮಾರು ಎರಡು ದಶಕಗಳವರೆಗೆ ಹಿಡಿದಿಟ್ಟುಕೊಂಡಿತ್ತು.

ಅವರು ಉತ್ತಮ ಚಲನಚಿತ್ರಗಳನ್ನು ನಿರ್ಮಿಸಿದರು. ಅವರು ನಮಗೆಲ್ಲರಿಗೂ ಪ್ರತಿದಿನವೂ ನಮ್ಮ ಅತ್ಯುತ್ತಮವಾದದ್ದನ್ನು ತರಲು ಸ್ಫೂರ್ತಿ ನೀಡಿದರು. ನಾನು ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಮತ್ತು 31 ವರ್ಷಗಳ ನನ್ನ ಹತ್ತಿರದ ಸಹಯೋಗಿ. ನನ್ನ ಒಂದು ಭಾಗವು ಹರಿದುಹೋಗಿದೆ” ಎಂದು ಜಿಮ್ ಕ್ಯಾಮೆರಾನ್ ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

39 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

44 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

1 hour ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

14 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

16 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

19 hours ago