ಮನರಂಜನೆ

ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್ಸ್!

ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರ

ಮಿನ್ನಲ್ ಮುರಳಿ’ ಮತ್ತು ‘2018 – ಎವ್ರಿಒನ್​​ ಈಸ್ ಎ ಹೀರೋ’ ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್.‌ ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ ನಟನೀಗ “ಎಆರ್​​ಎಂ​​” (Ajayante Randam Moshanam /ಅಜಯಂತೇ ರಂದಮ್ ಮೋಷನಂ) ಎಂಬ ಫ್ಯಾಂಟಸಿ ಪ್ಯಾನ್ ಇಂಡಿಯಾ ಚಿತ್ರದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ.

ಜಿತಿನ್ ಲಾಲ್ ನಿರ್ದೇಶನದ ಚೊಚ್ಚಲ ಚಿತ್ರ. ಸಿನಿಮಾ ಸಂಪೂರ್ಣವಾಗಿ 3ಡಿಯಲ್ಲಿ ತಯಾರಾಗಿದೆ. ಮಲಯಾಳಂ ಇತಿಹಾಸದಲ್ಲೇ ತಾಂತ್ರಿಕ ವಿಷಯದಲ್ಲಿ ಶ್ರೀಮಂತ ಚಿತ್ರಗಳಲ್ಲಿ ಒಂದಾಗಿದೆ. ಈಗಾಗಲೇ ಬಿಡುಗಡೆಯಾಗಿ
ಟ್ರೇಲರ್ ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಎಆರ್​​ಎಂ ಭರ್ಜರಿ ಆ್ಯಕ್ಷನ್​ ಸೀನ್​ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ನೀಡಲಿದೆ ಎಂಬ ಸುಳಿವನ್ನು ಈ ಟ್ರೇಲರ್​​ ಕೊಟ್ಟಿದೆ.

ಟೊವಿನೋ ಥಾಮಸ್​​​ ಮೂರು ವಿಭಿನ್ನ ಪಾತ್ರಗಳನ್ನು ಚಿತ್ರಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್​ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ‌. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್‌ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.

andolana

Recent Posts

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

25 mins ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

36 mins ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

52 mins ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಸುಪ್ರೀಂನಲ್ಲೂ ಬಿಗ್‌ ಶಾಕ್‌

ನವದೆಹಲಿ: ರೌಡಿಶೀಟರ್‌ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…

1 hour ago

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

2 hours ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

2 hours ago