ಮನರಂಜನೆ

ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್ಸ್!

ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರ

ಮಿನ್ನಲ್ ಮುರಳಿ’ ಮತ್ತು ‘2018 – ಎವ್ರಿಒನ್​​ ಈಸ್ ಎ ಹೀರೋ’ ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್.‌ ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ ನಟನೀಗ “ಎಆರ್​​ಎಂ​​” (Ajayante Randam Moshanam /ಅಜಯಂತೇ ರಂದಮ್ ಮೋಷನಂ) ಎಂಬ ಫ್ಯಾಂಟಸಿ ಪ್ಯಾನ್ ಇಂಡಿಯಾ ಚಿತ್ರದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ.

ಜಿತಿನ್ ಲಾಲ್ ನಿರ್ದೇಶನದ ಚೊಚ್ಚಲ ಚಿತ್ರ. ಸಿನಿಮಾ ಸಂಪೂರ್ಣವಾಗಿ 3ಡಿಯಲ್ಲಿ ತಯಾರಾಗಿದೆ. ಮಲಯಾಳಂ ಇತಿಹಾಸದಲ್ಲೇ ತಾಂತ್ರಿಕ ವಿಷಯದಲ್ಲಿ ಶ್ರೀಮಂತ ಚಿತ್ರಗಳಲ್ಲಿ ಒಂದಾಗಿದೆ. ಈಗಾಗಲೇ ಬಿಡುಗಡೆಯಾಗಿ
ಟ್ರೇಲರ್ ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಎಆರ್​​ಎಂ ಭರ್ಜರಿ ಆ್ಯಕ್ಷನ್​ ಸೀನ್​ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ನೀಡಲಿದೆ ಎಂಬ ಸುಳಿವನ್ನು ಈ ಟ್ರೇಲರ್​​ ಕೊಟ್ಟಿದೆ.

ಟೊವಿನೋ ಥಾಮಸ್​​​ ಮೂರು ವಿಭಿನ್ನ ಪಾತ್ರಗಳನ್ನು ಚಿತ್ರಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್​ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ‌. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್‌ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago