ಮನರಂಜನೆ

ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್ಸ್!

ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರ

ಮಿನ್ನಲ್ ಮುರಳಿ’ ಮತ್ತು ‘2018 – ಎವ್ರಿಒನ್​​ ಈಸ್ ಎ ಹೀರೋ’ ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್.‌ ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ ನಟನೀಗ “ಎಆರ್​​ಎಂ​​” (Ajayante Randam Moshanam /ಅಜಯಂತೇ ರಂದಮ್ ಮೋಷನಂ) ಎಂಬ ಫ್ಯಾಂಟಸಿ ಪ್ಯಾನ್ ಇಂಡಿಯಾ ಚಿತ್ರದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ.

ಜಿತಿನ್ ಲಾಲ್ ನಿರ್ದೇಶನದ ಚೊಚ್ಚಲ ಚಿತ್ರ. ಸಿನಿಮಾ ಸಂಪೂರ್ಣವಾಗಿ 3ಡಿಯಲ್ಲಿ ತಯಾರಾಗಿದೆ. ಮಲಯಾಳಂ ಇತಿಹಾಸದಲ್ಲೇ ತಾಂತ್ರಿಕ ವಿಷಯದಲ್ಲಿ ಶ್ರೀಮಂತ ಚಿತ್ರಗಳಲ್ಲಿ ಒಂದಾಗಿದೆ. ಈಗಾಗಲೇ ಬಿಡುಗಡೆಯಾಗಿ
ಟ್ರೇಲರ್ ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಎಆರ್​​ಎಂ ಭರ್ಜರಿ ಆ್ಯಕ್ಷನ್​ ಸೀನ್​ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ನೀಡಲಿದೆ ಎಂಬ ಸುಳಿವನ್ನು ಈ ಟ್ರೇಲರ್​​ ಕೊಟ್ಟಿದೆ.

ಟೊವಿನೋ ಥಾಮಸ್​​​ ಮೂರು ವಿಭಿನ್ನ ಪಾತ್ರಗಳನ್ನು ಚಿತ್ರಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್​ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ‌. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್‌ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.

andolana

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

18 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

18 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

18 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

18 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

18 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

18 hours ago