ಎಆರ್ಎಂ ಟೊವಿನೋ ಥಾಮಸ್ ಅವರ 50ನೇ ಚಿತ್ರ
ಮಿನ್ನಲ್ ಮುರಳಿ’ ಮತ್ತು ‘2018 – ಎವ್ರಿಒನ್ ಈಸ್ ಎ ಹೀರೋ’ ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್. ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ ನಟನೀಗ “ಎಆರ್ಎಂ” (Ajayante Randam Moshanam /ಅಜಯಂತೇ ರಂದಮ್ ಮೋಷನಂ) ಎಂಬ ಫ್ಯಾಂಟಸಿ ಪ್ಯಾನ್ ಇಂಡಿಯಾ ಚಿತ್ರದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ.
ಜಿತಿನ್ ಲಾಲ್ ನಿರ್ದೇಶನದ ಚೊಚ್ಚಲ ಚಿತ್ರ. ಸಿನಿಮಾ ಸಂಪೂರ್ಣವಾಗಿ 3ಡಿಯಲ್ಲಿ ತಯಾರಾಗಿದೆ. ಮಲಯಾಳಂ ಇತಿಹಾಸದಲ್ಲೇ ತಾಂತ್ರಿಕ ವಿಷಯದಲ್ಲಿ ಶ್ರೀಮಂತ ಚಿತ್ರಗಳಲ್ಲಿ ಒಂದಾಗಿದೆ. ಈಗಾಗಲೇ ಬಿಡುಗಡೆಯಾಗಿ
ಟ್ರೇಲರ್ ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಎಆರ್ಎಂ ಭರ್ಜರಿ ಆ್ಯಕ್ಷನ್ ಸೀನ್ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ನೀಡಲಿದೆ ಎಂಬ ಸುಳಿವನ್ನು ಈ ಟ್ರೇಲರ್ ಕೊಟ್ಟಿದೆ.
ಟೊವಿನೋ ಥಾಮಸ್ ಮೂರು ವಿಭಿನ್ನ ಪಾತ್ರಗಳನ್ನು ಚಿತ್ರಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.ಎಆರ್ಎಂ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…