ಮನರಂಜನೆ

ಪೃಥ್ವಿರಾಜ್‍ ಸುಕುಮಾರನ್‍ ಹೊಸ ಚಿತ್ರಕ್ಕೆ ಹೊಂಬಾಳೆ ಫಿಲಂಸ್‍ ಬೆಂಬಲ

ಮಲಯಾಳಂನ ಜನಪ್ರಿಯ ನಟ ಪೃಥ್ವಿರಾಜ್‍ ಸುಕುಮಾರನ್ ಅಭಿನಯದಲ್ಲಿ ‘ಟೈಸನ್‍’ ಎಂಬ ಪ್ಯಾನ್‍ ಇಂಡಿಯಾದ ಚಿತ್ರವನ್ನು ನಿರ್ಮಿಸುವುದಾಗಿ ಹೊಂಬಾಳೆ ಫಿಲಂಸ್‍ ಘೋಷಿಸಿತ್ತು. ಆದರೆ, ಆ ಚಿತ್ರದ ಚಿತ್ರೀಕರಣ ಇನ್ನೂ ಪ್ರಾರಂಭವಾಗಿಲ್ಲ.

ಈ ಮಧ್ಯೆ, ಪೃಥ್ವಿರಾಜ್‍ ಸುಕುಮಾರನ್‍ ನಿರ್ದೇಶನದ ‘L2E: ಎಂಪುರಾನ್’ ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್‍ ಸಂಸ್ಥೆಯು ವಿತರಿಸುತ್ತಿದೆ. ಈ ಚಿತ್ರ ಮಾರ್ಚ್.27ರಂದು ಮಲಯಾಳಂ ಅಲ್ಲದೆ, ಕನ್ನಡ, ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

‘L2E: ಎಂಪುರಾನ್’ ಚಿತ್ರವು 2019ರಲ್ಲಿ ಬಿಡುಗಡೆಯಾದ ‘ಲೂಸಿಫರ್‍’ ಚಿತ್ರದ ಮುಂದುವರೆದ ಭಾಗವಾಗಿದ್ದು, ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ನಟ ಪೃಥ್ವಿರಾಜ್‍ ಸುಕುಮಾರನ್‍ ಮೊದಲ ಬಾರಿಗೆ ನಿರ್ದೇಶಕರಾದರು. ಈ ಚಿತ್ರದ ಯಶಸ್ಸಿನಿಂದ ಪ್ರೇರಿತರಾದ ಪೃಥ್ವಿರಾಜ್‍, ಈ ಚಿತ್ರದ ಮುಂದುರೆದ ಭಾಗವನ್ನು ‍ಘೋಷಿಸಿದ್ದರು.

ಈ ಚಿತ್ರದಲ್ಲಿ ಮೋಹನ್ ಲಾಲ್, ಪೃಥ್ವಿರಾಜ್ ಸುಕುಮಾರನ್, ಟೋವಿನೋ ಥಾಮಸ್, ಮಂಜು ವಾರಿಯರ್‍, ಇಂದ್ರಜಿತ್‍ ಸುಕುಮಾರನ್‍, ಅಭಿಮನ್ಯು ಸಿಂಗ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸ್ವತಃ ಪೃಥ್ವಿರಾಜ್ ಸುಕುಮಾರನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ವಿಶೇಷವೆಂದರೆ, ಹೊಂಬಾಳೆ ಫಿಲಂಸ್‍ ನಿರ್ಮಾಣದ ‘ಕೆಜಿಎಫ್‍ 1’, ‘ಕೆಜಿಎಫ್‍ 2’ ಮತ್ತು ‘ಕಾಂತಾರ’ ಚಿತ್ರಗಳನ್ನು ಕೇರಳದಲ್ಲಿ ಪೃಥ್ವಿರಾಜ್‍ ಸುಕುಮಾರನ್‍ ವಿತರಿಸಿದ್ದರು. ಅದಕ್ಕೆ ಪ್ರತಿಯಾಗಿ ಪೃಥ್ವಿರಾಜ್‌ ಅಭಿನಯದ ‘ಆಡುಜೀವಿತಂ’ (ದಿ ಗೋಟ್‌ ಲೈಫ್‌) ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್‌ ವಿತರಣೆ ಮಾಡಿತು. ಈಗ ‘L2E: ಎಂಪುರಾನ್’ ಚಿತ್ರವನ್ನು ಕರ್ನಾಟಕದಲ್ಲಿ ವಿತರಿಸುತ್ತಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

11 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

11 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

11 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

11 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

11 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

12 hours ago