ಮನರಂಜನೆ

ಪೃಥ್ವಿರಾಜ್‍ ಸುಕುಮಾರನ್‍ ಹೊಸ ಚಿತ್ರಕ್ಕೆ ಹೊಂಬಾಳೆ ಫಿಲಂಸ್‍ ಬೆಂಬಲ

ಮಲಯಾಳಂನ ಜನಪ್ರಿಯ ನಟ ಪೃಥ್ವಿರಾಜ್‍ ಸುಕುಮಾರನ್ ಅಭಿನಯದಲ್ಲಿ ‘ಟೈಸನ್‍’ ಎಂಬ ಪ್ಯಾನ್‍ ಇಂಡಿಯಾದ ಚಿತ್ರವನ್ನು ನಿರ್ಮಿಸುವುದಾಗಿ ಹೊಂಬಾಳೆ ಫಿಲಂಸ್‍ ಘೋಷಿಸಿತ್ತು. ಆದರೆ, ಆ ಚಿತ್ರದ ಚಿತ್ರೀಕರಣ ಇನ್ನೂ ಪ್ರಾರಂಭವಾಗಿಲ್ಲ.

ಈ ಮಧ್ಯೆ, ಪೃಥ್ವಿರಾಜ್‍ ಸುಕುಮಾರನ್‍ ನಿರ್ದೇಶನದ ‘L2E: ಎಂಪುರಾನ್’ ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್‍ ಸಂಸ್ಥೆಯು ವಿತರಿಸುತ್ತಿದೆ. ಈ ಚಿತ್ರ ಮಾರ್ಚ್.27ರಂದು ಮಲಯಾಳಂ ಅಲ್ಲದೆ, ಕನ್ನಡ, ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

‘L2E: ಎಂಪುರಾನ್’ ಚಿತ್ರವು 2019ರಲ್ಲಿ ಬಿಡುಗಡೆಯಾದ ‘ಲೂಸಿಫರ್‍’ ಚಿತ್ರದ ಮುಂದುವರೆದ ಭಾಗವಾಗಿದ್ದು, ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ನಟ ಪೃಥ್ವಿರಾಜ್‍ ಸುಕುಮಾರನ್‍ ಮೊದಲ ಬಾರಿಗೆ ನಿರ್ದೇಶಕರಾದರು. ಈ ಚಿತ್ರದ ಯಶಸ್ಸಿನಿಂದ ಪ್ರೇರಿತರಾದ ಪೃಥ್ವಿರಾಜ್‍, ಈ ಚಿತ್ರದ ಮುಂದುರೆದ ಭಾಗವನ್ನು ‍ಘೋಷಿಸಿದ್ದರು.

ಈ ಚಿತ್ರದಲ್ಲಿ ಮೋಹನ್ ಲಾಲ್, ಪೃಥ್ವಿರಾಜ್ ಸುಕುಮಾರನ್, ಟೋವಿನೋ ಥಾಮಸ್, ಮಂಜು ವಾರಿಯರ್‍, ಇಂದ್ರಜಿತ್‍ ಸುಕುಮಾರನ್‍, ಅಭಿಮನ್ಯು ಸಿಂಗ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸ್ವತಃ ಪೃಥ್ವಿರಾಜ್ ಸುಕುಮಾರನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ವಿಶೇಷವೆಂದರೆ, ಹೊಂಬಾಳೆ ಫಿಲಂಸ್‍ ನಿರ್ಮಾಣದ ‘ಕೆಜಿಎಫ್‍ 1’, ‘ಕೆಜಿಎಫ್‍ 2’ ಮತ್ತು ‘ಕಾಂತಾರ’ ಚಿತ್ರಗಳನ್ನು ಕೇರಳದಲ್ಲಿ ಪೃಥ್ವಿರಾಜ್‍ ಸುಕುಮಾರನ್‍ ವಿತರಿಸಿದ್ದರು. ಅದಕ್ಕೆ ಪ್ರತಿಯಾಗಿ ಪೃಥ್ವಿರಾಜ್‌ ಅಭಿನಯದ ‘ಆಡುಜೀವಿತಂ’ (ದಿ ಗೋಟ್‌ ಲೈಫ್‌) ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್‌ ವಿತರಣೆ ಮಾಡಿತು. ಈಗ ‘L2E: ಎಂಪುರಾನ್’ ಚಿತ್ರವನ್ನು ಕರ್ನಾಟಕದಲ್ಲಿ ವಿತರಿಸುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago