ಬೆಂಗಳೂರು: ದರ್ಶನ್ ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪದಡಿ ರೇಣುಕಾಸ್ವಾಮಿ ಅವರ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಬಂಧಿಸಲಾಗಿದೆ.
ಕೇವಲ ಮೆಸೇಜ್ ಮಾಡಿದ ಆರೋಪಕ್ಕೆ ಯುವಕನೋರ್ವನ ಪ್ರಾಣ ತೆಗೆದ ನಟ ದರ್ಶನ್ ಹಾಗೂ ಅವರ 10ಜನ ಅನುಯಾಯಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇದರ ಬೆನ್ನಲ್ಲೇ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ಪ್ರಕರಣ ಕುರಿತು ಮಾತನಾಡಿದ್ದು, ಕಾನೂನಿನಡಿ ಎಲ್ಲರೂ ಒಂದೇ ಎಂದು ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿರುವ ಅವರು, ಸಾಮಾಜಿಕ ಮಾಧ್ಯಮಗಳು ತೋರುವ ಮಾಹಿತಿ ಆಧರಿಸಿ ನಾವು ಕ್ರಮ ಕೈಗೊಳ್ಳಲು ಆಗುವುದಿಲ್ಲ. ಈ ಸಂಬಂಧ ಕಾನೂನು ಕ್ರಮದಲ್ಲಿ ದರ್ಶನ್ ಪ್ರಕರಣ ತನಿಖೆಯಾಗಬೇಕು. ದರ್ಶನ್ ಪರವಾಗಿ ಇಲ್ಲ ವಿರುದ್ಧವಾಗಿರುವ ಎಲ್ಲಾ ಮಾಹಿತಿಗಳನ್ನು ಕಲೆಹಾಕಿದ ಬಳಿಕ ಅವರ ಮೇಲೆ ಕ್ರಮ ಜರುಗಿಸಲಾಗುವುದು. ಕಾನೂನಿನ ಮುಂದೆ ಎಲ್ಲರೂ ಸಮಾನರು. ಇಲ್ಲಿ ಯಾರನ್ನು ರಕ್ಷಿಸುವ ಕೆಲಸ ಆಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…