ಬೆಂಗಳೂರು: ದರ್ಶನ್ ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪದಡಿ ರೇಣುಕಾಸ್ವಾಮಿ ಅವರ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಬಂಧಿಸಲಾಗಿದೆ.
ಕೇವಲ ಮೆಸೇಜ್ ಮಾಡಿದ ಆರೋಪಕ್ಕೆ ಯುವಕನೋರ್ವನ ಪ್ರಾಣ ತೆಗೆದ ನಟ ದರ್ಶನ್ ಹಾಗೂ ಅವರ 10ಜನ ಅನುಯಾಯಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇದರ ಬೆನ್ನಲ್ಲೇ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ಪ್ರಕರಣ ಕುರಿತು ಮಾತನಾಡಿದ್ದು, ಕಾನೂನಿನಡಿ ಎಲ್ಲರೂ ಒಂದೇ ಎಂದು ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿರುವ ಅವರು, ಸಾಮಾಜಿಕ ಮಾಧ್ಯಮಗಳು ತೋರುವ ಮಾಹಿತಿ ಆಧರಿಸಿ ನಾವು ಕ್ರಮ ಕೈಗೊಳ್ಳಲು ಆಗುವುದಿಲ್ಲ. ಈ ಸಂಬಂಧ ಕಾನೂನು ಕ್ರಮದಲ್ಲಿ ದರ್ಶನ್ ಪ್ರಕರಣ ತನಿಖೆಯಾಗಬೇಕು. ದರ್ಶನ್ ಪರವಾಗಿ ಇಲ್ಲ ವಿರುದ್ಧವಾಗಿರುವ ಎಲ್ಲಾ ಮಾಹಿತಿಗಳನ್ನು ಕಲೆಹಾಕಿದ ಬಳಿಕ ಅವರ ಮೇಲೆ ಕ್ರಮ ಜರುಗಿಸಲಾಗುವುದು. ಕಾನೂನಿನ ಮುಂದೆ ಎಲ್ಲರೂ ಸಮಾನರು. ಇಲ್ಲಿ ಯಾರನ್ನು ರಕ್ಷಿಸುವ ಕೆಲಸ ಆಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…