ಮನರಂಜನೆ

ಸಮಸ್ಯೆ ಇದ್ದರೆ ಚಿತ್ರ ಮುಗಿಯುವುದಕ್ಕೆ ಹೇಗೆ ಸಾಧ್ಯ?: ‘ಮ್ಯಾಕ್ಸ್’ ಕುರಿತು ಸುದೀಪ್‍ ಪ್ರಶ್ನೆ

ಕಳೆದ ಡಿಸೆಂಬರ್‍ನಲ್ಲೇ ಸಾಧ್ಯವಾದಷ್ಟು ‘ಮ್ಯಾಕ್ಸ್’ ಚಿತ್ರವನ್ನು ಬಿಡುಗಡೆ ಮಾಡಬೇಕು ಎಂದು ಆಸೆ ವ್ಯಕ್ತಪಡಿಸಿದ್ದರು ಸುದೀಪ್‍. ಆ ನಂತರ ಬಿಡುಗಡೆ ಏಪ್ರಿಲ್‍ಗೆ ಹೋಯಿತು. ಇನ್ನೊಂದು ಸಮಾರಂಭದಲ್ಲಿ ಸಿಕ್ಕಾಗ, ಬಹುಶಃ ಆಗಸ್ಟ್ನಲ್ಲಿ ಬಿಡುಗಡೆ ಎಂದು ಸುದೀಪ್‍ ಹೇಳಿದ್ದರು. ಈಗ ಸೆಪ್ಟೆಂಬರ್‍ ಮುಗಿಯುತ್ತಾ ಬಂದರು ‘ಮ್ಯಾಕ್ಸ್’ ಸುದ್ದಿಯೇ ಇಲ್ಲ.

ಇಷ್ಟಕ್ಕೂ ‘ಮ್ಯಾಕ್ಸ್’ ಯಾಕೆ ಮುಗಿಯುತ್ತಿಲ್ಲ? ಹೊರಗೆ ಸೋಷಿಯಲ್‍ ಮೀಡಿಯಾದಲ್ಲಿ ಈ ವಿಷಯವಾಗಿ ಸಾಕಷ್ಟು ಚರ್ಚೆಗಳಾಗುತ್ತಿವೆ. ಮೂಲಗಳ ಪ್ರಕಾರ, ನಿರ್ಮಾಪಕ ಕಲೈಪುಲಿ ಎಸ್‍. ಧನು ಮತ್ತು ಚಿತ್ರತಂಡದವರ ನಡುವೆ ಸಂಬಂಧ ಹಳಸಿದೆಯಂತೆ. ಚಿತ್ರ ಪ್ರಾರಂಭವಾಗುವುದಕ್ಕೂ ಮೊದಲು ಅವರೊಂದು ಬಜೆಟ್‍ ಕೊಟ್ಟಿದ್ದರಂತೆ. ಬಜೆಟ್‍ ಹೆಚ್ಚಾಗಿದ್ದಷ್ಟೇ ಅಲ್ಲ, ಚಿತ್ರವೂ ಸಾಕಷ್ಟು ವಿಳಂಬವೂ ಆಗಿದೆ. ಹಾಗಾಗಿ, ಅವರು ತಾವು ಕಮಿಟ್‍ ಆದ ದುಡ್ಡು ಕೊಟ್ಟು, ಮಿಕ್ಕಿದ್ದು ಹೊಂದಿಸಿಕೊಳ್ಳಿ ಎಂದು ಹೇಳಿದ್ದಾರಂತೆ. ಚಿತ್ರದ ಸ್ಯಾಟಿಲೈಟ್‍ ಹಾಗೂ ಡಿಜಿಟಲ್‍ ಹಕ್ಕುಗಳು ಮಾರಾಟವಾಗದಿರುವುದರಿಂದ, ಹೆಚ್ಚಿನ ಹಣ ಸಿಗದೇ ಚಿತ್ರವನ್ನು ಮುಂದುವರೆಸಲಾಗುತ್ತಿಲ್ಲ ಎಂಬೆಲ್ಲಾ ಕಥೆಗಳು ಕೇಳಿಬರುತ್ತಿವೆ. ಅದೇ ಕಾರಣಕ್ಕೆ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ ಎಂಬ ಮಾತೂ ಇದೆ.

ಈ ಕುರಿತು ‘ಬಿಗ್‍ ಬಾಸ್‍ 11’ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸುದೀಪ್‍, ತಮ್ಮ ನಡುವೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ. ‘ನಿರ್ಮಾಣ ಸಂಸ್ಥೆ ತಮಿಳುನಾಡಿದು. ಅವರಿಗೆ ಅವರದ್ದೇ ಆದಂತಹ ಕೆಲವು ಸಮಸ್ಯೆಗಳಿವೆ. ನನ್ನ ಕಡೆಯಿಂದ ಏನಾಗಬೇಕೋ ಅದನ್ನು ಮುಗಿಸಿ ಕೊಟ್ಟಿದ್ದೇನೆ. ಪ್ಯಾನ್‍ ಇಂಡಿಯಾ ಚಿತ್ರವಾದ್ದರಿಂದ ಸ್ವಲ್ಪ ತಡವಾಗುತ್ತಿದೆ. ಅದನ್ನು ಹೊರತುಪಡಿಸಿದರೆ ನಮ್ಮ ನಡುವೆ ಯಾವುದೇ ಸಮಸ್ಯೆ ಇಲ್ಲ. ಚಿತ್ರ ಮುಗಿದಿದೆ. ನಾನು ಸಹ ಈ ಚಿತ್ರಕ್ಕೆ ಪಾಲುದಾರ. ಪಾಲುದಾರರ ಮಧ್ಯೆ ಸಮಸ್ಯೆ ಇದ್ದರೆ ಚಿತ್ರ ಹೇಗೆ ಮುಗಿಯುವುದಕ್ಕೆ ಸಾಧ್ಯ?’ ಎಂಬುದು ಅವರ ಪ್ರಶ್ನೆ.

‘ಮ್ಯಾಕ್ಸ್’ ನಿಂತಿರುವ ಬಗ್ಗೆ ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯಾಗುತ್ತಿರುವ ಕುರಿತು ಮಾತನಾಡಿದ ಅವರು, ‘ನೆಗೆಟಿವಿ ಪ್ರಚಾರ ಸಹ ಪ್ರಚಾರವೇ. ಅವರು ಸಹ ದುಡ್ಡ ಹಾಕಿದ್ದಾರೆ. ಸಿನಿಮಾ ಹೊರಗೆ ಬಂದರೆ ಅವರಿಗೂ ದುಡ್ಡು ಬರುತ್ತದೆ. ಅವರಿಗೆ ಅವರದ್ದೇ ಆದ ಸಮಸ್ಯೆಗಳಿವೆ ಮತ್ತು ಅದನ್ನು ನಾವು ಒಪ್ಪಿಕೊಳ್ಳಬೇಕು. ಇಲ್ಲಿ ಬೇರೆ ಏನೂ ಇಲ್ಲ. ಇಡೀ ಚಿತ್ರವನ್ನೇ ಒಟ್ಟಿಗೆ ನಡೆಸಿಕೊಂಡು ಬಂದಿದ್ದೇವೆ. ಸಿನಿಮಾ ನಿಂತು ಹೋಗಿದ್ದರೆ, ಇಷ್ಟು ದೂರ ಸಾಗಿಬರುವುದಕ್ಕೆ ಸಾಧ್ಯವೇ ಇರಲಿಲ್ಲ’ ಎಂದರು.

‘ಮ್ಯಾಕ್ಸ್’ ಚಿತ್ರವನ್ನು ವಿ ಕ್ರಿಯೇಷನ್ಸ್ ಬ್ಯಾನರ್‍ನಡಿ ಕಲೈಪುಲಿ ಎಸ್ ಧನು ಮತ್ತು ಕಿಚ್ಚ ಕ್ರಿಯೇಷನ್ಸ್ ಸಂಸ್ಥೆಯಡಿ ಸುದೀಪ್‍ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಚಿತ್ರದಲ್ಲಿ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಶೇಖರ್‍ ಚಂದ್ರ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

13 mins ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

24 mins ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

44 mins ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

2 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

2 hours ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

2 hours ago