ಮನರಂಜನೆ

‘ಬಿಗ್ ಬಾಸ್‍’ನಿಂದ ಎಷ್ಟು ಜನರಿಗೆ ಪ್ರಯೋಜನ ಆಯಿತು ಎಂಬುದು ಮುಖ್ಯ: ಸುದೀಪ್‍

ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮವಾದ ‘ಬಿಗ್‍ ಬಾಸ್‍ -ಸೀಸನ್‍ 11’ಕ್ಕೆ ದಿನಗಣನೆ ಪ್ರಾರಂಭವಾಗುತ್ತಿದೆ. ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮವು ಸೆ. 20ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದ್ದು, ಅಂದು ಸುದೀಪ್‍ ಸ್ಪರ್ಧಿಗಳನ್ನು ಮನೆಗೆ ಬಿಡಲಿದ್ದಾರೆ.

ಅಂದಹಾಗೆ, ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಆನ್‍ಲೈನ್‍ ರಮ್ಮಿ ಸಂಸ್ಥೆಯೊಂದು ಪಡೆದಿದೆ. ಈ ಹಿಂದೆ ರಮ್ಮಿ ಆನ್‍ಲೈನ್‍ ಗೇಮ್‍ಗೆ ಪ್ರಚಾರ ಮಾಡಿ, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದರು ಸುದೀಪ್‍. ಸಮಾಜದಲ್ಲಿ ಜವಾಬ್ದಾರಿ ಸ್ಥಾನದಲ್ಲಿರುವ ಅವರು, ರಮ್ಮಿ ಆಟಕ್ಕೆ ಪ್ರಚಾರ ನೀಡಬಾರದು, ಅದರಿಂದ ಸಾಕಷ್ಟು ಸಮಸ್ಯೆಗಳಾಗುತ್ತವೆ ಎಂಬ ಮಾತುಗಳು ಕೇಳಿ ಬಂದಿದ್ದವು. ಸಂಸ್ಥೇಯ ಪ್ರಚಾರದಿಂದ ಸುದೀಪ್‍ ದೂರ ಉಳಿದರೂ, ಇದೀಗ ‘ಬಿಗ್‍ ಬಾಸ್’ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಆನ್‍ಲೈನ್‍ ರಮ್ಮಿ ಗೇಮ್‍ ಪಡೆದಿದೆ.

ಸಾಮಾಜಿಕ ಜವಾಬ್ದಾರಿ ಇರುವ ನಟನೊಬ್ಬ ಸಮಾಜಕ್ಕೆ ಮಾರಕವಾಗಿರುವ ಆನ್‍ಲೈನ್‍ ರಮ್ಮಿ ಆಟವನ್ನು ಪ್ರಚಾರ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಉತ್ತರಿಸಿದ ಸುದೀಪ್‍, ‘ನಮ್ಮದು ತಿಳವಳಿಕೆ ಇರುವ ಒಂದು ಸಮಾಜ. ಇಲ್ಲಿ ಸಿಗರೇಟ್‍, ಕುಡಿತ, ಸಾಕಷ್ಟು ಇದೆ. ಎಲ್ಲಕ್ಕಿಂತ ಹೆಚ್ಚಾಗಿ ಮನೆಯಲ್ಲಿ ತಂದೆ-ತಾಯಿ ಇದ್ದಾರೆ. ನಮಗೆ ಏನು ಬೇಕೋ ಅದನ್ನು ನಾವು ಆಯ್ಕೆ ಮಾಡಬೇಕು. ಸರ್ಕಾರ ನಮ್ಮಿಂದ ಪಡೆಯುವ ತೆರಿಗೆ ತುಂಬಾ ದುಬಾರಿ ಎಂಬ ಅನಿಸಿಕೆ ಜನರಲ್ಲಿದೆ. ಆದರೆ, ಒಂದು ದೇಶ ನಡೆಸುವಾಗ, ಈ ತರಹದ ಹಣ ಅವಶ್ಯಕವಾಗಬಹುದು. ಅದೇ ತರಹ ಈ ತರಹದ ಕಾರ್ಯಕ್ರಮಗಳನ್ನು ರೂಪಿಸುವಾಗ, ಈ ತರಹದ ಜಾಹೀರಾತುಗಳು ಬೇಕಾಗಬಹುದು. ವರ್ಷದಿಂದ ವರ್ಷಕ್ಕೆ ಕಾರ್ಯಕ್ರಮದ ಖರ್ಚು ವೆಚ್ಚಗಳು ಹೆಚ್ಚಾಗುತ್ತವೆ. ಅದನ್ನು ಸರಿದೂಗಿಸುವುದಕ್ಕೆ ಈ ತರಹದ ಜಾಹೀರಾತುಗಳು ಬೇಕಾಗಬಹುದು. ಇದಕ್ಕೂ ನನಗೂ ಸಂಬಂಧವಿಲ್ಲ. ಇದು ಸಂಸ್ಥೆಗೆ ಬಿಟ್ಟ ವಿಷಯ’ ಎಂದರು.

ಇದೆಲ್ಲದರ ಹೊರತಾಗಿ ತಾವು ‘ಬಿಗ್‍ ಬಾಸ್‍’ನಿಂದ ಬಹಳಷ್ಟು ಜನರಿಗೆ ಉಪಯೋಗವಾಗುತ್ತಿದೆ ಎಂದ ಸುದೀಪ್‍, ‘ಬರೀ ರಮ್ಮಿ ಬಗ್ಗೆ ಮಾತ್ರವಲ್ಲ, ನಾನು ಅದನ್ನ ಮೀರಿ ನೋಡುತ್ತಿದ್ದೇನೆ. ‘ಬಿಗ್ ಬಾಸ್‍’ನಂತಹ ಕಾರ್ಯಕ್ರಮದಿಂದ ಎಷ್ಟೋ ಕುಟುಂಬಗಳಿಗೆ ಪ್ರಯೋಜನವಾಗಿವೆ, ಎಷ್ಟೋ ವ್ಯಕ್ತಿತ್ವಗಳು ಉದ್ಧಾರವಾಗಿವೆ, ಹಲವರಿಗೆ ಕೆಲಸ ಸಿಕ್ಕಿದೆ. ಕಾರ್ಯಕ್ರಮ ನೋಡಿದವರೆಲ್ಲಾ ರಮ್ಮಿ ಆಡುತ್ತಾರಾ? ಸಮಾಜದಲ್ಲಿ ತಿಳವಳಿಕೆ ಇರುವ ಪ್ರತಿಯೊಬ್ಬರೂ ತನ್ನ ಆಯ್ಕೆ ಏನಿರಬೇಕೆಂದು ಯೋಚಿಸುತ್ತಾರೆ’ಎಂದರು.

ಆನ್‍ಲೈನ್‍ ರಮ್ಮಿ ತಪ್ಪು ಎನ್ನುವವರು ಸಿದ್ದರಾಮಯ್ಯ ಅಥವಾ ಮೋದಿ ಅವರನ್ನು ಕೇಳಿ ಎನ್ನುವ ಸುದೀಪ್‍, ‘ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಹೋಗಿ, ಪ್ರಧಾನಿ ಮೋದಿ ಮನೆಗೆ ಹೋಗಿ ಇವೆಲ್ಲಾ ಬೇಡ ಎಂದು ಸ್ಟ್ರೈಕ್‍ ಮಾಡಿ. ನನಗೆ ಕೆಲವು ಪ್ರಶ್ನೆಗಳಿಗೆ ಉತ್ತರಿಸುವ ಶಕ್ತಿ ಇಲ್ಲ. ಮೋದಿ ಮತ್ತು ಸಿದ್ದರಾಮಯ್ಯನವರು ನನ್ನ ಹಿಡಿತದಲ್ಲಿದ್ದರೆ, ಬೇರೆ ವಿಷಯ. ಬಹುಶಃ ನಾನು ರಾಜಕಾರಣಿಯಾದರೆ, ನನಗೆ ಸಾಧ್ಯವಾಗಿದ್ದು ಮಾಡುತ್ತೇನೆ’ ಎಂದರು.

ಭೂಮಿಕಾ

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

2 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

2 hours ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

2 hours ago