ಮನರಂಜನೆ

‘ಬಿಗ್ ಬಾಸ್‍’ನಿಂದ ಎಷ್ಟು ಜನರಿಗೆ ಪ್ರಯೋಜನ ಆಯಿತು ಎಂಬುದು ಮುಖ್ಯ: ಸುದೀಪ್‍

ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮವಾದ ‘ಬಿಗ್‍ ಬಾಸ್‍ -ಸೀಸನ್‍ 11’ಕ್ಕೆ ದಿನಗಣನೆ ಪ್ರಾರಂಭವಾಗುತ್ತಿದೆ. ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮವು ಸೆ. 20ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದ್ದು, ಅಂದು ಸುದೀಪ್‍ ಸ್ಪರ್ಧಿಗಳನ್ನು ಮನೆಗೆ ಬಿಡಲಿದ್ದಾರೆ.

ಅಂದಹಾಗೆ, ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಆನ್‍ಲೈನ್‍ ರಮ್ಮಿ ಸಂಸ್ಥೆಯೊಂದು ಪಡೆದಿದೆ. ಈ ಹಿಂದೆ ರಮ್ಮಿ ಆನ್‍ಲೈನ್‍ ಗೇಮ್‍ಗೆ ಪ್ರಚಾರ ಮಾಡಿ, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದರು ಸುದೀಪ್‍. ಸಮಾಜದಲ್ಲಿ ಜವಾಬ್ದಾರಿ ಸ್ಥಾನದಲ್ಲಿರುವ ಅವರು, ರಮ್ಮಿ ಆಟಕ್ಕೆ ಪ್ರಚಾರ ನೀಡಬಾರದು, ಅದರಿಂದ ಸಾಕಷ್ಟು ಸಮಸ್ಯೆಗಳಾಗುತ್ತವೆ ಎಂಬ ಮಾತುಗಳು ಕೇಳಿ ಬಂದಿದ್ದವು. ಸಂಸ್ಥೇಯ ಪ್ರಚಾರದಿಂದ ಸುದೀಪ್‍ ದೂರ ಉಳಿದರೂ, ಇದೀಗ ‘ಬಿಗ್‍ ಬಾಸ್’ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಆನ್‍ಲೈನ್‍ ರಮ್ಮಿ ಗೇಮ್‍ ಪಡೆದಿದೆ.

ಸಾಮಾಜಿಕ ಜವಾಬ್ದಾರಿ ಇರುವ ನಟನೊಬ್ಬ ಸಮಾಜಕ್ಕೆ ಮಾರಕವಾಗಿರುವ ಆನ್‍ಲೈನ್‍ ರಮ್ಮಿ ಆಟವನ್ನು ಪ್ರಚಾರ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಉತ್ತರಿಸಿದ ಸುದೀಪ್‍, ‘ನಮ್ಮದು ತಿಳವಳಿಕೆ ಇರುವ ಒಂದು ಸಮಾಜ. ಇಲ್ಲಿ ಸಿಗರೇಟ್‍, ಕುಡಿತ, ಸಾಕಷ್ಟು ಇದೆ. ಎಲ್ಲಕ್ಕಿಂತ ಹೆಚ್ಚಾಗಿ ಮನೆಯಲ್ಲಿ ತಂದೆ-ತಾಯಿ ಇದ್ದಾರೆ. ನಮಗೆ ಏನು ಬೇಕೋ ಅದನ್ನು ನಾವು ಆಯ್ಕೆ ಮಾಡಬೇಕು. ಸರ್ಕಾರ ನಮ್ಮಿಂದ ಪಡೆಯುವ ತೆರಿಗೆ ತುಂಬಾ ದುಬಾರಿ ಎಂಬ ಅನಿಸಿಕೆ ಜನರಲ್ಲಿದೆ. ಆದರೆ, ಒಂದು ದೇಶ ನಡೆಸುವಾಗ, ಈ ತರಹದ ಹಣ ಅವಶ್ಯಕವಾಗಬಹುದು. ಅದೇ ತರಹ ಈ ತರಹದ ಕಾರ್ಯಕ್ರಮಗಳನ್ನು ರೂಪಿಸುವಾಗ, ಈ ತರಹದ ಜಾಹೀರಾತುಗಳು ಬೇಕಾಗಬಹುದು. ವರ್ಷದಿಂದ ವರ್ಷಕ್ಕೆ ಕಾರ್ಯಕ್ರಮದ ಖರ್ಚು ವೆಚ್ಚಗಳು ಹೆಚ್ಚಾಗುತ್ತವೆ. ಅದನ್ನು ಸರಿದೂಗಿಸುವುದಕ್ಕೆ ಈ ತರಹದ ಜಾಹೀರಾತುಗಳು ಬೇಕಾಗಬಹುದು. ಇದಕ್ಕೂ ನನಗೂ ಸಂಬಂಧವಿಲ್ಲ. ಇದು ಸಂಸ್ಥೆಗೆ ಬಿಟ್ಟ ವಿಷಯ’ ಎಂದರು.

ಇದೆಲ್ಲದರ ಹೊರತಾಗಿ ತಾವು ‘ಬಿಗ್‍ ಬಾಸ್‍’ನಿಂದ ಬಹಳಷ್ಟು ಜನರಿಗೆ ಉಪಯೋಗವಾಗುತ್ತಿದೆ ಎಂದ ಸುದೀಪ್‍, ‘ಬರೀ ರಮ್ಮಿ ಬಗ್ಗೆ ಮಾತ್ರವಲ್ಲ, ನಾನು ಅದನ್ನ ಮೀರಿ ನೋಡುತ್ತಿದ್ದೇನೆ. ‘ಬಿಗ್ ಬಾಸ್‍’ನಂತಹ ಕಾರ್ಯಕ್ರಮದಿಂದ ಎಷ್ಟೋ ಕುಟುಂಬಗಳಿಗೆ ಪ್ರಯೋಜನವಾಗಿವೆ, ಎಷ್ಟೋ ವ್ಯಕ್ತಿತ್ವಗಳು ಉದ್ಧಾರವಾಗಿವೆ, ಹಲವರಿಗೆ ಕೆಲಸ ಸಿಕ್ಕಿದೆ. ಕಾರ್ಯಕ್ರಮ ನೋಡಿದವರೆಲ್ಲಾ ರಮ್ಮಿ ಆಡುತ್ತಾರಾ? ಸಮಾಜದಲ್ಲಿ ತಿಳವಳಿಕೆ ಇರುವ ಪ್ರತಿಯೊಬ್ಬರೂ ತನ್ನ ಆಯ್ಕೆ ಏನಿರಬೇಕೆಂದು ಯೋಚಿಸುತ್ತಾರೆ’ಎಂದರು.

ಆನ್‍ಲೈನ್‍ ರಮ್ಮಿ ತಪ್ಪು ಎನ್ನುವವರು ಸಿದ್ದರಾಮಯ್ಯ ಅಥವಾ ಮೋದಿ ಅವರನ್ನು ಕೇಳಿ ಎನ್ನುವ ಸುದೀಪ್‍, ‘ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಹೋಗಿ, ಪ್ರಧಾನಿ ಮೋದಿ ಮನೆಗೆ ಹೋಗಿ ಇವೆಲ್ಲಾ ಬೇಡ ಎಂದು ಸ್ಟ್ರೈಕ್‍ ಮಾಡಿ. ನನಗೆ ಕೆಲವು ಪ್ರಶ್ನೆಗಳಿಗೆ ಉತ್ತರಿಸುವ ಶಕ್ತಿ ಇಲ್ಲ. ಮೋದಿ ಮತ್ತು ಸಿದ್ದರಾಮಯ್ಯನವರು ನನ್ನ ಹಿಡಿತದಲ್ಲಿದ್ದರೆ, ಬೇರೆ ವಿಷಯ. ಬಹುಶಃ ನಾನು ರಾಜಕಾರಣಿಯಾದರೆ, ನನಗೆ ಸಾಧ್ಯವಾಗಿದ್ದು ಮಾಡುತ್ತೇನೆ’ ಎಂದರು.

ಭೂಮಿಕಾ

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

13 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

16 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

16 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

20 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 days ago