ಮನರಂಜನೆ

‘ಬಿಗ್ ಬಾಸ್‍’ನಿಂದ ಎಷ್ಟು ಜನರಿಗೆ ಪ್ರಯೋಜನ ಆಯಿತು ಎಂಬುದು ಮುಖ್ಯ: ಸುದೀಪ್‍

ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮವಾದ ‘ಬಿಗ್‍ ಬಾಸ್‍ -ಸೀಸನ್‍ 11’ಕ್ಕೆ ದಿನಗಣನೆ ಪ್ರಾರಂಭವಾಗುತ್ತಿದೆ. ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮವು ಸೆ. 20ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದ್ದು, ಅಂದು ಸುದೀಪ್‍ ಸ್ಪರ್ಧಿಗಳನ್ನು ಮನೆಗೆ ಬಿಡಲಿದ್ದಾರೆ.

ಅಂದಹಾಗೆ, ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಆನ್‍ಲೈನ್‍ ರಮ್ಮಿ ಸಂಸ್ಥೆಯೊಂದು ಪಡೆದಿದೆ. ಈ ಹಿಂದೆ ರಮ್ಮಿ ಆನ್‍ಲೈನ್‍ ಗೇಮ್‍ಗೆ ಪ್ರಚಾರ ಮಾಡಿ, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದರು ಸುದೀಪ್‍. ಸಮಾಜದಲ್ಲಿ ಜವಾಬ್ದಾರಿ ಸ್ಥಾನದಲ್ಲಿರುವ ಅವರು, ರಮ್ಮಿ ಆಟಕ್ಕೆ ಪ್ರಚಾರ ನೀಡಬಾರದು, ಅದರಿಂದ ಸಾಕಷ್ಟು ಸಮಸ್ಯೆಗಳಾಗುತ್ತವೆ ಎಂಬ ಮಾತುಗಳು ಕೇಳಿ ಬಂದಿದ್ದವು. ಸಂಸ್ಥೇಯ ಪ್ರಚಾರದಿಂದ ಸುದೀಪ್‍ ದೂರ ಉಳಿದರೂ, ಇದೀಗ ‘ಬಿಗ್‍ ಬಾಸ್’ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಆನ್‍ಲೈನ್‍ ರಮ್ಮಿ ಗೇಮ್‍ ಪಡೆದಿದೆ.

ಸಾಮಾಜಿಕ ಜವಾಬ್ದಾರಿ ಇರುವ ನಟನೊಬ್ಬ ಸಮಾಜಕ್ಕೆ ಮಾರಕವಾಗಿರುವ ಆನ್‍ಲೈನ್‍ ರಮ್ಮಿ ಆಟವನ್ನು ಪ್ರಚಾರ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಉತ್ತರಿಸಿದ ಸುದೀಪ್‍, ‘ನಮ್ಮದು ತಿಳವಳಿಕೆ ಇರುವ ಒಂದು ಸಮಾಜ. ಇಲ್ಲಿ ಸಿಗರೇಟ್‍, ಕುಡಿತ, ಸಾಕಷ್ಟು ಇದೆ. ಎಲ್ಲಕ್ಕಿಂತ ಹೆಚ್ಚಾಗಿ ಮನೆಯಲ್ಲಿ ತಂದೆ-ತಾಯಿ ಇದ್ದಾರೆ. ನಮಗೆ ಏನು ಬೇಕೋ ಅದನ್ನು ನಾವು ಆಯ್ಕೆ ಮಾಡಬೇಕು. ಸರ್ಕಾರ ನಮ್ಮಿಂದ ಪಡೆಯುವ ತೆರಿಗೆ ತುಂಬಾ ದುಬಾರಿ ಎಂಬ ಅನಿಸಿಕೆ ಜನರಲ್ಲಿದೆ. ಆದರೆ, ಒಂದು ದೇಶ ನಡೆಸುವಾಗ, ಈ ತರಹದ ಹಣ ಅವಶ್ಯಕವಾಗಬಹುದು. ಅದೇ ತರಹ ಈ ತರಹದ ಕಾರ್ಯಕ್ರಮಗಳನ್ನು ರೂಪಿಸುವಾಗ, ಈ ತರಹದ ಜಾಹೀರಾತುಗಳು ಬೇಕಾಗಬಹುದು. ವರ್ಷದಿಂದ ವರ್ಷಕ್ಕೆ ಕಾರ್ಯಕ್ರಮದ ಖರ್ಚು ವೆಚ್ಚಗಳು ಹೆಚ್ಚಾಗುತ್ತವೆ. ಅದನ್ನು ಸರಿದೂಗಿಸುವುದಕ್ಕೆ ಈ ತರಹದ ಜಾಹೀರಾತುಗಳು ಬೇಕಾಗಬಹುದು. ಇದಕ್ಕೂ ನನಗೂ ಸಂಬಂಧವಿಲ್ಲ. ಇದು ಸಂಸ್ಥೆಗೆ ಬಿಟ್ಟ ವಿಷಯ’ ಎಂದರು.

ಇದೆಲ್ಲದರ ಹೊರತಾಗಿ ತಾವು ‘ಬಿಗ್‍ ಬಾಸ್‍’ನಿಂದ ಬಹಳಷ್ಟು ಜನರಿಗೆ ಉಪಯೋಗವಾಗುತ್ತಿದೆ ಎಂದ ಸುದೀಪ್‍, ‘ಬರೀ ರಮ್ಮಿ ಬಗ್ಗೆ ಮಾತ್ರವಲ್ಲ, ನಾನು ಅದನ್ನ ಮೀರಿ ನೋಡುತ್ತಿದ್ದೇನೆ. ‘ಬಿಗ್ ಬಾಸ್‍’ನಂತಹ ಕಾರ್ಯಕ್ರಮದಿಂದ ಎಷ್ಟೋ ಕುಟುಂಬಗಳಿಗೆ ಪ್ರಯೋಜನವಾಗಿವೆ, ಎಷ್ಟೋ ವ್ಯಕ್ತಿತ್ವಗಳು ಉದ್ಧಾರವಾಗಿವೆ, ಹಲವರಿಗೆ ಕೆಲಸ ಸಿಕ್ಕಿದೆ. ಕಾರ್ಯಕ್ರಮ ನೋಡಿದವರೆಲ್ಲಾ ರಮ್ಮಿ ಆಡುತ್ತಾರಾ? ಸಮಾಜದಲ್ಲಿ ತಿಳವಳಿಕೆ ಇರುವ ಪ್ರತಿಯೊಬ್ಬರೂ ತನ್ನ ಆಯ್ಕೆ ಏನಿರಬೇಕೆಂದು ಯೋಚಿಸುತ್ತಾರೆ’ಎಂದರು.

ಆನ್‍ಲೈನ್‍ ರಮ್ಮಿ ತಪ್ಪು ಎನ್ನುವವರು ಸಿದ್ದರಾಮಯ್ಯ ಅಥವಾ ಮೋದಿ ಅವರನ್ನು ಕೇಳಿ ಎನ್ನುವ ಸುದೀಪ್‍, ‘ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಹೋಗಿ, ಪ್ರಧಾನಿ ಮೋದಿ ಮನೆಗೆ ಹೋಗಿ ಇವೆಲ್ಲಾ ಬೇಡ ಎಂದು ಸ್ಟ್ರೈಕ್‍ ಮಾಡಿ. ನನಗೆ ಕೆಲವು ಪ್ರಶ್ನೆಗಳಿಗೆ ಉತ್ತರಿಸುವ ಶಕ್ತಿ ಇಲ್ಲ. ಮೋದಿ ಮತ್ತು ಸಿದ್ದರಾಮಯ್ಯನವರು ನನ್ನ ಹಿಡಿತದಲ್ಲಿದ್ದರೆ, ಬೇರೆ ವಿಷಯ. ಬಹುಶಃ ನಾನು ರಾಜಕಾರಣಿಯಾದರೆ, ನನಗೆ ಸಾಧ್ಯವಾಗಿದ್ದು ಮಾಡುತ್ತೇನೆ’ ಎಂದರು.

ಭೂಮಿಕಾ

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago