ಮನರಂಜನೆ

‘ಕಾಂತಾರ ಚಾಪ್ಟರ್ 1’ ಚಿತ್ರಕ್ಕಾಗಿ ರಿಷಭ್‍ ಶೆಟ್ಟಿ ಪಡೆದ ಸಂಭಾವನೆ ಎಷ್ಟು?

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ಬಹು ನಿರೀಕ್ಷಿತ ‘ಕಾಂತಾರ ಅಧ್ಯಾಯ 1’ ಚಿತ್ರವು ಅಕ್ಟೋಬರ್.02ರಂದು ಬಿಡಗುಡೆಯಾಗುತ್ತಿದ್ದು, ಅಡ್ವಾನ್ಸ್ ಬುಕ್ಕಿಂಗ್‍ ಮೂಲಕ ಭರ್ಜರಿ ಟಿಕೆಟ್‍ಗಳು ಮಾರಾಟವಾಗುತ್ತಿವೆ.

ಈ ಚಿತ್ರಕ್ಕೆ ರಿಷಭ್‍ ಶೆಟ್ಟಿ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ, ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ಜವಾಬ್ದಾರಿಗಳಿಗೆ ಅವರು ಪಡೆದಿರುವ ಸಂಭಾವನೆ ಎಷ್ಟು? ಒಂದು ರೂಪಾಯಿಯೂ ಪಡೆದಿಲ್ಲ ಎಂಬ ಸುದ್ದಿಯೊಂದು ರಾಷ್ಟ್ರೀಯ ಮಾಧ್ಯಮಗಳಿಂದ ಕೇಳಿಬರುತ್ತಿದೆ. ಅದರ ಪ್ರಕಾರ, ರಿಷಭ್‍ ಈ ಚಿತ್ರಕ್ಕೆ ಸಂಭಾವನೆ ಪಡೆಯುವುದರ ಬದಲು ಪ್ರಾಫಿಟ್‍ ಶೇರಿಂಗ್‍ ಆಯ್ಕೆ ಮಾಡಿಕೊಂಡಿದ್ದಾರಂತೆ. ಅಂದರೆ, ಚಿತ್ರದಲ್ಲಿ ಬರುವ ಲಾಭದಲ್ಲಿ ಇಷ್ಟು ಪರ್ಸಂಟೇಜ್‍ ಎಂದು ಅವರು ಸಂಭಾವನೆ ಪಡೆಯಲಿದ್ದಾರೆ. ಚಿತ್ರ ಎಷ್ಟು ಲಾಭ ಮಾಡುತ್ತದೋ, ಅವರ ಗಳಿಕೆ ಸಹ ಹೆಚ್ಚಾಗುತ್ತಾ ಹೋಗುತ್ತದೆ.

ಇದನ್ನು ಓದಿ: ‘ದಿ ರಾಜಾಸಾಬ್’ ಟ್ರೈಲರ್ ಬಿಡುಗಡೆ: 2026ರ ಜನವರಿ 09ಕ್ಕೆ ಚಿತ್ರ

‘ಕಾಂತಾರ – ಚಾಪ್ಟರ್ 1’ ಚಿತ್ರವು ಭಾರತದಲ್ಲಿ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಕಾಂತಾರ – ಚಾಪ್ಟರ್ 1’ ಬಿಡುಗಡೆ ಆಗಲಿದೆ. ಜಗತ್ತಿನ 30 ದೇಶಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಇದೇ ಮೊದಲ ಬಾರಿಗೆ ಸ್ಪಾನಿಶ್‍ ಭಾಷೆಗೆ ಡಬ್‍ ಆಗುತ್ತಿದ್ದು, ಸ್ಪಾನಿಶ್‍ ಭಾಷೆಗೆ ಡಬ್‍ ಆಗಿ ಬಿಡುಗಡೆಯಾಗುತ್ತಿರುವ ಮೊದಲ ಕನ್ನಡದ ಚಿತ್ರ ಎಂಬ ಹೆಗ್ಗಳಿಕೆಗೆ ಚಿತ್ರ ಪಾತ್ರವಾಗುತ್ತಿದೆ. ಕನ್ನಡ ಚಿತ್ರಗಳು ಉತ್ತರ ಅಮೇರಿಕಾದಲ್ಲಿ ಬಿಡಗುಡೆಯಾಗುವುದು ಹೊಸದೇನಲ್ಲ. ದಕ್ಷಿಣ ಅಮೇರಿಕಾದಲ್ಲಿ, ಅದರಲ್ಲೂ ಮೆಕ್ಸಿಕೋ ಮುಂತಾದ ದೇಶಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ.

‘ಕಾಂತಾರ ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದು, ಚಿತ್ರವು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago