ಮನರಂಜನೆ

ಆ್ಯಪಲ್ ಐಪ್ಯಾಡ್‌ ವಿರುದ್ಧ ಅಸಮಾಧಾನ ಹೊರಹಾಕಿದ ಹೃತಿಕ್ ರೋಷನ್‌

ಮುಂಬೈ: ಅಮೆರಿಕಾದ ಶ್ರೀಮಂತ ಕಂಪನಿ ಆ್ಯಪಲ್ ವಿರುದ್ಧ ಬಾಲಿವುಡ್ ಸೆಲೆಬ್ರಿಟಿಗಳು ಅಸಮಾಧಾನ ವ್ಯಕ್ತಪಡಿಸುತಿದ್ದು, ಬಾಲಿವುಡ್ ನಟ ಹೃತಿಕ್ ರೋಷನ್ ಕೂಡ ಕಂಪನಿ ವಿರುದ್ಧ ಗರಂ ಆಗಿದ್ದಾರೆ. ಅಷ್ಟಕ್ಕೂ ಕಂಪನಿ ಮಾಡಿದ ತಪ್ಪೇನೆ? ಹೃತಿಕ್ ರೋಷನ್ ಅಸಮಾಧಾನ ಹೊರಹಾಕಲು ಕಾರಣ ಏನು? ಇಲ್ಲಿದೆ ಮಾಹಿತಿ.

ಆ್ಯಪಲ್ ಕಂಪನಿಯು ಒಂದು ಹೊಸ ಐಪ್ಯಾಡ್ ಜಾಹೀರಾತುನ್ನು ಬಿಡುಗಡೆ ಮಾಡಿದೆ. ಐಪ್ಯಾಡ್ ಪ್ರೋ ಎಷ್ಟು ಪವರ್ ಫುಲ್ ಆಗಿದೆ ಎಂಬುದನ್ನು ತಿಳಿಸಲು ಈ ಜಾಹಿರಾತನ್ನು ಸಿದ್ಧಪಡಿಸಲಾಗಿದೆ. ಈ ಜಾಹಿರಾತನ್ನು ನಟ ಹೃತಿಕ್ ರೋಷನ್ ಖಾರವಾಗಿ ಖಂಡಿಸಿದ್ದಾರೆ.

ಪುಸ್ತಕಗಳು, ಸಂಗೀತ, ಸಾಧನಗಳು, ಟಿ.ವಿ, ಗ್ರಾಮೋಫೋನ್, ಗೊಂಬೆ, ಪೇಂಟಿಂಗ್ಸ್, ಕಲಾಕೃತಿಗಳು, ಸ್ಪೀಕರ್, ಕ್ಯಾಮೆರಾ ಮುಂತಾದ ವಸ್ತುಗಳನ್ನು ದೊಡ್ಡ ಕ್ರಸರ್ ಮೂಲಕ ನಾಶಪಡಿಸುವ ದೃಶ್ಯ ಇದರಲ್ಲಿದೆ. ಆ ಎಲ್ಲಾ ಸಾಧನಗಳ ಕೆಲಸವನ್ನು ಕೇವಲ ಒಂದು ಐಪ್ಯಾಡ್ ಮಾಡುತ್ತದೆ ಎಂಬುದನ್ನು ಗ್ರಾಹಕರಿಗೆ ತಿಳಿಸುವುದು ಈ ಜಾಹೀರಾತಿನ ಉದ್ದೇಶವಾಗಿದೆ.

ಈ ಜಾಹೀರಾತು ನೋಡಿದ ಅನೇಕ ಸೆಲೆಬ್ರಿಟಿಗಳು ವಿರೋಧ ವ್ಯಕ್ತಪಡಿಸಿದ್ದು, ಈ ಜಾಹೀರಾತಿನಿಂದ ಸಿನಿಮಾ, ಸಂಗೀತ, ಚಿತ್ರಕಲೆ, ಬರವಣಿಗೆ ಮುಂತಾದ ವಿಷಯಗಳಿಗೆ ಅವಮಾನ ಮಾಡಲಾಗಿದೆ ಎಂದು ಹಾಲಿವುಡ್‌ನ ಸೆಲೆಬ್ರಿಟಿಗಳು ಕೂಡ ಅಭಿಪ್ರಾಯ ತಿಳಿಸಿದ್ದಾರೆ.

ಈ ಬಗ್ಗೆ ಇನ್ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಹೃತಿಕ್ ರೋಷನ್ ಬರೆದುಕೊಂಡಿದ್ದಾರೆ. ಆ್ಯಪಲ್ ಕಂಪನಿಯ ಹೊಸ ಜಾಹೀರಾತು ಎಷ್ಟು ಕಳಪೆ ಮತ್ತು ಅವೈಜ್ಞಾನಿಕದಿಂದ ಕೂಡಿದೆ ಎಂದು ಪೋಸ್ಟ್ ಮಾಡಿ ಕಂಪನಿ ವಿರುದ್ಧ ಗರಂ ಆಗಿದ್ದಾರೆ. ಆ್ಯಪಲ್ ಕಂಪನಿ ಈ ಜಾಹೀರಾತು ಕಲಾ ಪ್ರಕಾರಗಳಿಗೆ ಅವಮಾನ ಮಾಡಿದೆ ಎಂದು ನೆಟ್ಟಿಗರು ಕೂಡ ಕಮೆಂಟ್ ಮಾಡುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

7 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

7 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

7 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

8 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

8 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

8 hours ago