ಮುಂಬೈ: ಅಮೆರಿಕಾದ ಶ್ರೀಮಂತ ಕಂಪನಿ ಆ್ಯಪಲ್ ವಿರುದ್ಧ ಬಾಲಿವುಡ್ ಸೆಲೆಬ್ರಿಟಿಗಳು ಅಸಮಾಧಾನ ವ್ಯಕ್ತಪಡಿಸುತಿದ್ದು, ಬಾಲಿವುಡ್ ನಟ ಹೃತಿಕ್ ರೋಷನ್ ಕೂಡ ಕಂಪನಿ ವಿರುದ್ಧ ಗರಂ ಆಗಿದ್ದಾರೆ. ಅಷ್ಟಕ್ಕೂ ಕಂಪನಿ ಮಾಡಿದ ತಪ್ಪೇನೆ? ಹೃತಿಕ್ ರೋಷನ್ ಅಸಮಾಧಾನ ಹೊರಹಾಕಲು ಕಾರಣ ಏನು? ಇಲ್ಲಿದೆ ಮಾಹಿತಿ.
ಆ್ಯಪಲ್ ಕಂಪನಿಯು ಒಂದು ಹೊಸ ಐಪ್ಯಾಡ್ ಜಾಹೀರಾತುನ್ನು ಬಿಡುಗಡೆ ಮಾಡಿದೆ. ಐಪ್ಯಾಡ್ ಪ್ರೋ ಎಷ್ಟು ಪವರ್ ಫುಲ್ ಆಗಿದೆ ಎಂಬುದನ್ನು ತಿಳಿಸಲು ಈ ಜಾಹಿರಾತನ್ನು ಸಿದ್ಧಪಡಿಸಲಾಗಿದೆ. ಈ ಜಾಹಿರಾತನ್ನು ನಟ ಹೃತಿಕ್ ರೋಷನ್ ಖಾರವಾಗಿ ಖಂಡಿಸಿದ್ದಾರೆ.
ಪುಸ್ತಕಗಳು, ಸಂಗೀತ, ಸಾಧನಗಳು, ಟಿ.ವಿ, ಗ್ರಾಮೋಫೋನ್, ಗೊಂಬೆ, ಪೇಂಟಿಂಗ್ಸ್, ಕಲಾಕೃತಿಗಳು, ಸ್ಪೀಕರ್, ಕ್ಯಾಮೆರಾ ಮುಂತಾದ ವಸ್ತುಗಳನ್ನು ದೊಡ್ಡ ಕ್ರಸರ್ ಮೂಲಕ ನಾಶಪಡಿಸುವ ದೃಶ್ಯ ಇದರಲ್ಲಿದೆ. ಆ ಎಲ್ಲಾ ಸಾಧನಗಳ ಕೆಲಸವನ್ನು ಕೇವಲ ಒಂದು ಐಪ್ಯಾಡ್ ಮಾಡುತ್ತದೆ ಎಂಬುದನ್ನು ಗ್ರಾಹಕರಿಗೆ ತಿಳಿಸುವುದು ಈ ಜಾಹೀರಾತಿನ ಉದ್ದೇಶವಾಗಿದೆ.
ಈ ಜಾಹೀರಾತು ನೋಡಿದ ಅನೇಕ ಸೆಲೆಬ್ರಿಟಿಗಳು ವಿರೋಧ ವ್ಯಕ್ತಪಡಿಸಿದ್ದು, ಈ ಜಾಹೀರಾತಿನಿಂದ ಸಿನಿಮಾ, ಸಂಗೀತ, ಚಿತ್ರಕಲೆ, ಬರವಣಿಗೆ ಮುಂತಾದ ವಿಷಯಗಳಿಗೆ ಅವಮಾನ ಮಾಡಲಾಗಿದೆ ಎಂದು ಹಾಲಿವುಡ್ನ ಸೆಲೆಬ್ರಿಟಿಗಳು ಕೂಡ ಅಭಿಪ್ರಾಯ ತಿಳಿಸಿದ್ದಾರೆ.
ಈ ಬಗ್ಗೆ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹೃತಿಕ್ ರೋಷನ್ ಬರೆದುಕೊಂಡಿದ್ದಾರೆ. ಆ್ಯಪಲ್ ಕಂಪನಿಯ ಹೊಸ ಜಾಹೀರಾತು ಎಷ್ಟು ಕಳಪೆ ಮತ್ತು ಅವೈಜ್ಞಾನಿಕದಿಂದ ಕೂಡಿದೆ ಎಂದು ಪೋಸ್ಟ್ ಮಾಡಿ ಕಂಪನಿ ವಿರುದ್ಧ ಗರಂ ಆಗಿದ್ದಾರೆ. ಆ್ಯಪಲ್ ಕಂಪನಿ ಈ ಜಾಹೀರಾತು ಕಲಾ ಪ್ರಕಾರಗಳಿಗೆ ಅವಮಾನ ಮಾಡಿದೆ ಎಂದು ನೆಟ್ಟಿಗರು ಕೂಡ ಕಮೆಂಟ್ ಮಾಡುತ್ತಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…