ಮುಂಬೈ: ಅಮೆರಿಕಾದ ಶ್ರೀಮಂತ ಕಂಪನಿ ಆ್ಯಪಲ್ ವಿರುದ್ಧ ಬಾಲಿವುಡ್ ಸೆಲೆಬ್ರಿಟಿಗಳು ಅಸಮಾಧಾನ ವ್ಯಕ್ತಪಡಿಸುತಿದ್ದು, ಬಾಲಿವುಡ್ ನಟ ಹೃತಿಕ್ ರೋಷನ್ ಕೂಡ ಕಂಪನಿ ವಿರುದ್ಧ ಗರಂ ಆಗಿದ್ದಾರೆ. ಅಷ್ಟಕ್ಕೂ ಕಂಪನಿ ಮಾಡಿದ ತಪ್ಪೇನೆ? ಹೃತಿಕ್ ರೋಷನ್ ಅಸಮಾಧಾನ ಹೊರಹಾಕಲು ಕಾರಣ ಏನು? ಇಲ್ಲಿದೆ ಮಾಹಿತಿ.
ಆ್ಯಪಲ್ ಕಂಪನಿಯು ಒಂದು ಹೊಸ ಐಪ್ಯಾಡ್ ಜಾಹೀರಾತುನ್ನು ಬಿಡುಗಡೆ ಮಾಡಿದೆ. ಐಪ್ಯಾಡ್ ಪ್ರೋ ಎಷ್ಟು ಪವರ್ ಫುಲ್ ಆಗಿದೆ ಎಂಬುದನ್ನು ತಿಳಿಸಲು ಈ ಜಾಹಿರಾತನ್ನು ಸಿದ್ಧಪಡಿಸಲಾಗಿದೆ. ಈ ಜಾಹಿರಾತನ್ನು ನಟ ಹೃತಿಕ್ ರೋಷನ್ ಖಾರವಾಗಿ ಖಂಡಿಸಿದ್ದಾರೆ.
ಪುಸ್ತಕಗಳು, ಸಂಗೀತ, ಸಾಧನಗಳು, ಟಿ.ವಿ, ಗ್ರಾಮೋಫೋನ್, ಗೊಂಬೆ, ಪೇಂಟಿಂಗ್ಸ್, ಕಲಾಕೃತಿಗಳು, ಸ್ಪೀಕರ್, ಕ್ಯಾಮೆರಾ ಮುಂತಾದ ವಸ್ತುಗಳನ್ನು ದೊಡ್ಡ ಕ್ರಸರ್ ಮೂಲಕ ನಾಶಪಡಿಸುವ ದೃಶ್ಯ ಇದರಲ್ಲಿದೆ. ಆ ಎಲ್ಲಾ ಸಾಧನಗಳ ಕೆಲಸವನ್ನು ಕೇವಲ ಒಂದು ಐಪ್ಯಾಡ್ ಮಾಡುತ್ತದೆ ಎಂಬುದನ್ನು ಗ್ರಾಹಕರಿಗೆ ತಿಳಿಸುವುದು ಈ ಜಾಹೀರಾತಿನ ಉದ್ದೇಶವಾಗಿದೆ.
ಈ ಜಾಹೀರಾತು ನೋಡಿದ ಅನೇಕ ಸೆಲೆಬ್ರಿಟಿಗಳು ವಿರೋಧ ವ್ಯಕ್ತಪಡಿಸಿದ್ದು, ಈ ಜಾಹೀರಾತಿನಿಂದ ಸಿನಿಮಾ, ಸಂಗೀತ, ಚಿತ್ರಕಲೆ, ಬರವಣಿಗೆ ಮುಂತಾದ ವಿಷಯಗಳಿಗೆ ಅವಮಾನ ಮಾಡಲಾಗಿದೆ ಎಂದು ಹಾಲಿವುಡ್ನ ಸೆಲೆಬ್ರಿಟಿಗಳು ಕೂಡ ಅಭಿಪ್ರಾಯ ತಿಳಿಸಿದ್ದಾರೆ.
ಈ ಬಗ್ಗೆ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹೃತಿಕ್ ರೋಷನ್ ಬರೆದುಕೊಂಡಿದ್ದಾರೆ. ಆ್ಯಪಲ್ ಕಂಪನಿಯ ಹೊಸ ಜಾಹೀರಾತು ಎಷ್ಟು ಕಳಪೆ ಮತ್ತು ಅವೈಜ್ಞಾನಿಕದಿಂದ ಕೂಡಿದೆ ಎಂದು ಪೋಸ್ಟ್ ಮಾಡಿ ಕಂಪನಿ ವಿರುದ್ಧ ಗರಂ ಆಗಿದ್ದಾರೆ. ಆ್ಯಪಲ್ ಕಂಪನಿ ಈ ಜಾಹೀರಾತು ಕಲಾ ಪ್ರಕಾರಗಳಿಗೆ ಅವಮಾನ ಮಾಡಿದೆ ಎಂದು ನೆಟ್ಟಿಗರು ಕೂಡ ಕಮೆಂಟ್ ಮಾಡುತ್ತಿದ್ದಾರೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…