ಮನರಂಜನೆ

ARM ಟ್ರೈಲರ್‌ಗೆ ಮೆಚ್ಚುಗೆ

ಸೆಪ್ಟೆಂಬರ್ 12ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ARM ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಈಗಾಗಲೇ ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಟೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್‌ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರು ಕೂಡ ಟ್ರೈಲರ್ ನೋಡಿ ಸಂತಸಪಟ್ಟಿದ್ದಾರೆ.
ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ  ಸೆಪ್ಟೆಂಬರ್‌ 12ರಂದು ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲ್ಮ್ಸ್ ಬಿಡುಗಡೆ ಮಾಡಲಿದೆ.

ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್  ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ.

ದಿಬು ನೈನನ್ ಥಾಮಸ್ಚಿ ತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್‌ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ , ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ, ರೋಹಿಣಿ ಚಿತ್ರದಲ್ಲಿದ್ದಾರೆ.

ಸುಜಿತ್ ನಂಬಿಯಾರ್ಚಿ  ಕಥೆ ಬರೆದಿದ್ದಾರೆ. ಅವರ ಜತೆಗೆ ದೀಪು ಪ್ರದೀಪ್ ಸಾಥ್‌ ನೀಡಿದ್ದಾರೆ. ವಿಕ್ರಮ್ ಮೂರ್, ಫೀನಿಕ್ಸ್ ಪ್ರಭು ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.

andolana

Recent Posts

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

1 hour ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

3 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

4 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

4 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

7 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

10 hours ago