ಮನರಂಜನೆ

ಹಳ್ಳಿ ಪರನಿಂತ ‘ಹುಲಿಬೀರ’: ಉತ್ತರ ಕರ್ನಾಟಕ ಸೊಗಡಿನ ಕಥೆ

ಈ ಹಿಂದೆ ಕೃಷ್ಣ ಅಭಿನಯದಲ್ಲಿ ‘ಮದರಂಗಿ’ ಚಿತ್ರವನ್ನು ನಿರ್ದೇಶಿಸಿದ್ದ ಮಲ್ಲಿಕಾರ್ಜುನ ಮುತ್ತಲಗೇರಿ, ಈಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಹುಲಿಬೀರ’ ಎಂಬ ಉತ್ತರ ಕರ್ನಾಟಕದ ಸೊಗಡಿನ ಕಥೆಯೊಂದಿಗೆ ವಾಪಸ್ಸಾಗಿದ್ದು, ಉತ್ತರ ಕರ್ನಾಟಕದ ಭಾಗದಲ್ಲಿ ‘ರೂರಲ್‍ ಸ್ಟಾರ್’ ಎಂದೇ ಜನಪ್ರಿಯವಾಗಿರುವ ಅಂಜನ್‍ ಈ ಚಿತ್ರದಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

ಸಾಯಿ ಸ್ಟಾರ್ ಸಿನಿಮಾಸ್ ಮೂಲಕ ದಾವಲ ಸಾಹೇಬ ಹುಣಶೀಮರದ, ಅಶೋಕ್ ಎನ್ ಹಾಗೂ ಸುಜಾತ ಗಿರೀಶ್ ಸೇರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮಲ್ಲಿಕಾರ್ಜುನ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

‘ಹುಲಿ ಬೀರ’ ಚಿತ್ರದ ಕುರಿತು ಮಾತನಾಡುವ ಮಲ್ಲಿಕಾರ್ಜುನ, ‘ಇದು ನನ್ನ ನಿರ್ದೇಶನದ ಐದನೇ ಚಿತ್ರ. ಹುಲಿಬೀರ ನಾಯಕನ ಹೆಸರು. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಎಲ್ಲದಕ್ಕೂ ಧೈರ್ಯದಿಂದ ಮುನ್ನುಗ್ಗುವ ಹುಡುಗರನ್ನು ಹುಲಿ ಅನ್ನುತ್ತಾರೆ, ನಾಯಕ ಬೀರ ಹಳ್ಳಿಯ ಯಾವುದೇ ಸಮಸ್ಯೆ ಇರಲಿ‌ ಮುಂದೆ ನಿಂತು ಕೆಲಸ ಮಾಡುತ್ತಾನೆ. ಆತನನ್ನು ಹಳ್ಳಿಯ ಜನರೆಲ್ಲ ‘ಹುಲಿಬೀರ’ ಎಂದು ಕರೆಯುತ್ತಿರುತ್ತಾರೆ’ ಎಂದು ಮಾಹಿತಿ ಕೊಡುತ್ತಾರೆ.

ಚಿತ್ರದಲ್ಲೊಂದು ಒಳ್ಳೆಯ ಸಂದೇಶವಿದೆ ಎನ್ನುವ ಅವರು, ‘ವಿದ್ಯಾವಂತ ಯುವಕ, ಯುವತಿಯರೆಲ್ಲ ಕೆಲಸ ಎಂದು ಸಿಟಿಗೆ ಹೋದರೆ ಆ ಹಳ್ಳಿಗಳನ್ನು ಬೆಳೆಸೋರು ಯಾರು? ಈ ಸಮಸ್ಯೆಯನ್ನು ಬೀರ ಹೇಗೆ ಬಗೆಹರಿಸುತ್ತಾನೆ. ಅವರೆಲ್ಲಾ ಮತ್ತೆ ಹೇಗೆ ಹಳ್ಳಿಗೆ ಮರಳುವಂತೆ ಮಾಡಿ, ಹಳ್ಳಿಯನ್ನು ಉದ್ದರಿಸುತ್ತಾನೆ. ಕಾಮಿಡಿ, ಸೆಂಟಿಮೆಂಟ್, ಮನರಂಜನೆಯ ಜತೆಗೆ ಒಂದೊಳ್ಳೆಯ ಸಂದೇಶವನ್ನು ಈ ಚಿತ್ರದ ಮೂಲಕ ಹೇಳಲು ಪ್ರಯತ್ನಿಸಿದ್ದೇವೆ. ಬಾದಾಮಿ ಸುತ್ತಮುತ್ತಲ ಗ್ರಾಮಗಳಲ್ಲಿ ಎರಡು ಹಂತಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ರಂಗಾಯಣ ರಘು ಅವರು ಗ್ರಾಮದ ಹಿರಿಯನ ಪಾತ್ರ ಮಾಡಿದ್ದಾರೆ. ಚಿತ್ರವೀಗ ಡಬ್ಬಿಂಗ್ ಹಂತದಲ್ಲಿದ್ದು ನವೆಂಬರ್ ವೇಳೆಗೆ ಚಿತ್ರ ಬಿಡುಗಡೆ ಮಾಡುವ ಯೋಚನೆ ಇದೆ’ ಎಂದರು.

ನಾಯಕ ಅಂಜನ್ ಮಾತನಾಡಿ, ‘ನಾನು ಉತ್ತರ ಕರ್ನಾಟಕದ ಕುಂದಗೋಳ ಎಂಬ ಪುಟ್ಟ ಗ್ರಾಮದವನು. ರೀಲ್ಸ್, ಶಾರ್ಟ್ ಫಿಲಂ ಮಾಡುತ್ತಾ, ಸೋಷಿಯಲ್ ಮೀಡಿಯಾ ಮೂಲಕ ಜನರಿಂದ ಗುರುತಿಸಿಕೊಂಡಿದ್ದೇನೆ. ಇದಕ್ಕೂ ಮೊದಲು ‘ಯರ್ರಾಬಿರ್ರಿ’ ಚಿತ್ರದ ಮೂಲಕ ನಾಯಕನಾದೆ. ನಾವು ಮೊದಲು ನಮ್ಮ ಊರು, ಹಳ್ಳಿಗಳನ್ನು ಕಾಪಾಡಬೇಕು ಎಂಬ ಸಂದೇಶ ಇಟ್ಟುಕೊಂಡು ಮಾಡಿದ ಚಿತ್ರವಿದು’ ಎಂದರು.

ನಾಯಕಿ ಚೈತ್ರ ತೋಟದ ಇದಕ್ಕೂ ಮೊದಲು ‘ಬ್ರಹ್ಮರಾಕ್ಷಸ’, ‘ವಿಧುರ’, ‘ಚೌಕಿದಾರ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರಂತೆ. ‘ಈ ಚಿತ್ರದಲ್ಲಿ ನಾಯಕನ ಅಕ್ಕನ ಮಗಳ ಪಾತ್ರ ಮಾಡಿದ್ದೇನೆ’ ಎಂದರು. ಅವರ ಜೊತೆಗೆ ವನು ಪಾಟೀಲ್ ಹಾಗೂ ಅಂಜಲಿ ಚಿತ್ರದ ಉಳಿದ ನಾಯಕಿಯರಾಗಿ ನಟಿಸಿದ್ದಾರೆ.

‘ಹುಲಿಬೀರ’ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ಮತ್ತು ಧರ್ಮ ವಿಶ್‍ ಹಿನ್ನೆಲೆ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

33 mins ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

2 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

3 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

4 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

5 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

6 hours ago