ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವು ಮೊದಲ ವಾರ 26 ಕೋಟಿ ರೂ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಉಪೇಂದ್ರ ಮತ್ತು ‘UI’ ಚಿತ್ರತಂಡದವರು ಖುಷಿಯಾಗಿದ್ದಾರೆ. ಇದೇ ಸಂಭ್ರಮದಲ್ಲಿ ಕೇಕು ಕತ್ತರಿಸಿ ಸಂಭ್ರಮಿಸಿದ್ದಾರೆ.
‘UI’ ಚಿತ್ರವನ್ನು ನೋಡಿದವರು, ಸಹಜವಾಗಿಯೇ ಚಿತ್ರವನ್ನು ಉಪೇಂದ್ರ ಅವರ ಹಿಂದಿನ ಚಿತ್ರಗಳ ಜೊತೆಗೆ ಹೋಲಿಕೆ ಮಾಡುತ್ತಿದ್ದಾರೆ. ಈ ಹೋಲಿಕೆಗಳು ಸಹಜ ಎನ್ನುವ ಉಪೇಂದ್ರ, ‘ಸಾಮಾನ್ಯವಾಗಿ ಯಾರೇ ಚಿತ್ರಗಳನ್ನು ಮಾಡಲಿ. ಅವರ ಹಿಂದಿನ ಯಶಸ್ವಿ ಚಿತ್ರಗಳ ಜೊತೆಗೆ ಹೋಲಿಕೆ ಮಾಡಲಾಗುತ್ತದೆ. ಅದೇ ತರಹದ ಹೋಲಿಕೆ ಇದ್ದರೆ, ಇದನ್ನು ಬಿಟ್ಟು ಇವನಿಗೆ ಬೇರೆ ಮಾಡುವುದಕ್ಕೆ ಬರುವುದಿಲ್ಲ ಎನ್ನುತ್ತಾರೆ. ಬೇರೆ ಮಾಡಿದರೆ, ಹಿಂದಿನ ಚಿತ್ರದ ತರಹ ಇಲ್ಲ ಎನ್ನುತ್ತಾರೆ. ಹಾಗಾದರೆ, ಯಾವ ತರಹದ ಚಿತ್ರಗಳನ್ನು ಮಾಡಬೇಕು?’ ಎಂಬುದು ಅವರ ಪ್ರಶ್ನೆ.
ಪ್ರತಿಯೊಂದು ಕಥೆಗೂ ಅದರದ್ದೇ ಹರಿವು ಇರುತ್ತದೆ ಎನ್ನುವ ಉಪೇಂದ್ರ, ‘ಒಂದು ಚಿತ್ರದಲ್ಲಿ ಒಂದು ಅಂಶ ಗೆದ್ದಿತು ಎಂದರೆ, ಈ ಚಿತ್ರದಲ್ಲಿ ತುರುಕೋಕೆ ಆಗಲ್ಲ. ಏಕೆಂದರೆ, ಇದು ಬೇರೆಯದೇ ಕಥೆ. ಯಾವುದೇ ಕಥೆ ಆಗಲಿ, ಅದನ್ನು ಅದರ ಫ್ಲೋ ಪ್ರಕಾರ ಬೆಳೆಸಬೇಕೇ ಹೊರತು, ಸುಮ್ಮನೆ ತುರುಕುವುದಕ್ಕೆ ಸಾಧ್ಯವಿಲ್ಲ. ನಾನು ಇಲ್ಲಿ ಏನೋ ತಲೆ ಉಪಯೋಗಿಸಿ ಬರೆದೆ ಎಂದರೆ ತಪ್ಪಾಗುತ್ತದೆ. ಐಡಿಯ ಬಂತು ಬಳಸಿಕೊಂಡೆ. ಯಾವುದೇ ಪ್ಲಾನ್ ಮಾಡಿಕೊಂಡು ಮಾಡಲಿಲ್ಲ. ಧಿಕ್ಕಾರ ಸಂಭಾಷಣೆ ಸಹ ಅದಾಗಿಯೇ ಬಂತೇ ಹೊರತು, ನಾನು ಅದನ್ನು ಉದ್ದೇಶಪೂರ್ವಕವಾಗಿ ಸೇರಿಸಿಲ್ಲ’ ಎಂದರು.
ತಾನಂದುಕೊಂಡಂತೆ ಪ್ರೇಕ್ಷಕರು ಚಿತ್ರವನ್ನು ಚೆನ್ನಾಗಿಯೇ ಡೀಕೋಡ್ ಮಾಡಿದ್ದಾರೆ ಎನ್ನುವ ಉಪೇಂದ್ರ, ‘ಕನ್ನಡಕ್ಕಿಂತ ಬೇರೆ ಭಾಷೆಗಳಲ್ಲಿ ಜನ ಚೆನ್ನಾಗಿ ಡೀಕೋಡ್ ಮಾಡುತ್ತಿದ್ದಾರೆ. ಚಿತ್ರದ ಕೊನೆಯ ಶಾಟ್ ಬಗ್ಗೆ ಒಬ್ಬರು ಮಾತ್ರ ಮಾತನಾಡಿದ್ದಾರೆ. ಈ ಚಿತ್ರದಿಂದ ಏನೇನು ಅರ್ಥವಾಯ್ತು ಎಂಬುದು ಅವರವರಿಗೆ ಬಿಟ್ಟಿದ್ದು. ಅವರವರ ಗ್ರಹಿಕೆಯ ಮೇಲೆ ಚಿತ್ರವು ಬೇರೆಬೇರೆ ರೀತಿ ಅರ್ಥವಾಗುತ್ತಾ ಹೋಗುತ್ತದೆ. ಹಾಗೆ ನೋಡಿದರೆ, ಇಲ್ಲಿ ತಲೆಗೆ ಹುಳ ಬಿಡುವಂತದ್ದೇನ್ನೂ ಇಲ್ಲ. ಎಲ್ಲವೂ ನೇರವಾಗಿಯೇ ಇದೆ. ಆದರೆ, ಇಂಥ ಚಿತ್ರಗಳಿಗೆ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲ ಎಂಬ ಸರ್ವಾನುಮತದ ಅಭಿಪ್ರಾಯ ಸಿಗುವುದಿಲ್ಲ. ಒಬ್ಬೊಬ್ಬರು ಒಂದೊಂದು ರೀತಿ ಗ್ರಹಿಸುತ್ತಾರೆ ಮತ್ತು ತಾವು ಅರ್ಥ ಮಾಡಿಕೊಂಡಿದ್ದನ್ನು ಹೇಳುತ್ತಾರೆ’ ಎಂದರು ಉಪೇಂದ್ರ.
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…