ಮನರಂಜನೆ

ಫ್ಲೋ ಪ್ರಕಾರ ಹೋಗುವವನು ನಾನು: ‘UI’ ಕುರಿತು ಉಪೇಂದ್ರ ಮಾತು

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವು ಮೊದಲ ವಾರ 26 ಕೋಟಿ ರೂ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಉಪೇಂದ್ರ ಮತ್ತು ‘UI’ ಚಿತ್ರತಂಡದವರು ಖುಷಿಯಾಗಿದ್ದಾರೆ. ಇದೇ ಸಂಭ್ರಮದಲ್ಲಿ ಕೇಕು ಕತ್ತರಿಸಿ ಸಂಭ್ರಮಿಸಿದ್ದಾರೆ.

‘UI’ ಚಿತ್ರವನ್ನು ನೋಡಿದವರು, ಸಹಜವಾಗಿಯೇ ಚಿತ್ರವನ್ನು ಉಪೇಂದ್ರ ಅವರ ಹಿಂದಿನ ಚಿತ್ರಗಳ ಜೊತೆಗೆ ಹೋಲಿಕೆ ಮಾಡುತ್ತಿದ್ದಾರೆ. ಈ ಹೋಲಿಕೆಗಳು ಸಹಜ ಎನ್ನುವ ಉಪೇಂದ್ರ, ‘ಸಾಮಾನ್ಯವಾಗಿ ಯಾರೇ ಚಿತ್ರಗಳನ್ನು ಮಾಡಲಿ. ಅವರ ಹಿಂದಿನ ಯಶಸ್ವಿ ಚಿತ್ರಗಳ ಜೊತೆಗೆ ಹೋಲಿಕೆ ಮಾಡಲಾಗುತ್ತದೆ. ಅದೇ ತರಹದ ಹೋಲಿಕೆ ಇದ್ದರೆ, ಇದನ್ನು ಬಿಟ್ಟು ಇವನಿಗೆ ಬೇರೆ ಮಾಡುವುದಕ್ಕೆ ಬರುವುದಿಲ್ಲ ಎನ್ನುತ್ತಾರೆ. ಬೇರೆ ಮಾಡಿದರೆ, ಹಿಂದಿನ ಚಿತ್ರದ ತರಹ ಇಲ್ಲ ಎನ್ನುತ್ತಾರೆ. ಹಾಗಾದರೆ, ಯಾವ ತರಹದ ಚಿತ್ರಗಳನ್ನು ಮಾಡಬೇಕು?’ ಎಂಬುದು ಅವರ ಪ್ರಶ್ನೆ.

ಪ್ರತಿಯೊಂದು ಕಥೆಗೂ ಅದರದ್ದೇ ಹರಿವು ಇರುತ್ತದೆ ಎನ್ನುವ ಉಪೇಂದ್ರ, ‘ಒಂದು ಚಿತ್ರದಲ್ಲಿ ಒಂದು ಅಂಶ ಗೆದ್ದಿತು ಎಂದರೆ, ಈ ಚಿತ್ರದಲ್ಲಿ ತುರುಕೋಕೆ ಆಗಲ್ಲ. ಏಕೆಂದರೆ, ಇದು ಬೇರೆಯದೇ ಕಥೆ. ಯಾವುದೇ ಕಥೆ ಆಗಲಿ, ಅದನ್ನು ಅದರ ಫ್ಲೋ ಪ್ರಕಾರ ಬೆಳೆಸಬೇಕೇ ಹೊರತು, ಸುಮ್ಮನೆ ತುರುಕುವುದಕ್ಕೆ ಸಾಧ್ಯವಿಲ್ಲ. ನಾನು ಇಲ್ಲಿ ಏನೋ ತಲೆ ಉಪಯೋಗಿಸಿ ಬರೆದೆ ಎಂದರೆ ತಪ್ಪಾಗುತ್ತದೆ. ಐಡಿಯ ಬಂತು ಬಳಸಿಕೊಂಡೆ. ಯಾವುದೇ ಪ್ಲಾನ್‍ ಮಾಡಿಕೊಂಡು ಮಾಡಲಿಲ್ಲ. ಧಿಕ್ಕಾರ ಸಂಭಾಷಣೆ ಸಹ ಅದಾಗಿಯೇ ಬಂತೇ ಹೊರತು, ನಾನು ಅದನ್ನು ಉದ್ದೇಶಪೂರ್ವಕವಾಗಿ ಸೇರಿಸಿಲ್ಲ’ ಎಂದರು.

ತಾನಂದುಕೊಂಡಂತೆ ಪ್ರೇಕ್ಷಕರು ಚಿತ್ರವನ್ನು ಚೆನ್ನಾಗಿಯೇ ಡೀಕೋಡ್‍ ಮಾಡಿದ್ದಾರೆ ಎನ್ನುವ ಉಪೇಂದ್ರ, ‘ಕನ್ನಡಕ್ಕಿಂತ ಬೇರೆ ಭಾಷೆಗಳಲ್ಲಿ ಜನ ಚೆನ್ನಾಗಿ ಡೀಕೋಡ್‍ ಮಾಡುತ್ತಿದ್ದಾರೆ. ಚಿತ್ರದ ಕೊನೆಯ ಶಾಟ್‍ ಬಗ್ಗೆ ಒಬ್ಬರು ಮಾತ್ರ ಮಾತನಾಡಿದ್ದಾರೆ. ಈ ಚಿತ್ರದಿಂದ ಏನೇನು ಅರ್ಥವಾಯ್ತು ಎಂಬುದು ಅವರವರಿಗೆ ಬಿಟ್ಟಿದ್ದು. ಅವರವರ ಗ್ರಹಿಕೆಯ ಮೇಲೆ ಚಿತ್ರವು ಬೇರೆಬೇರೆ ರೀತಿ ಅರ್ಥವಾಗುತ್ತಾ ಹೋಗುತ್ತದೆ. ಹಾಗೆ ನೋಡಿದರೆ, ಇಲ್ಲಿ ತಲೆಗೆ ಹುಳ ಬಿಡುವಂತದ್ದೇನ್ನೂ ಇಲ್ಲ. ಎಲ್ಲವೂ ನೇರವಾಗಿಯೇ ಇದೆ. ಆದರೆ, ಇಂಥ ಚಿತ್ರಗಳಿಗೆ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲ ಎಂಬ ಸರ್ವಾನುಮತದ ಅಭಿಪ್ರಾಯ ಸಿಗುವುದಿಲ್ಲ. ಒಬ್ಬೊಬ್ಬರು ಒಂದೊಂದು ರೀತಿ ಗ್ರಹಿಸುತ್ತಾರೆ ಮತ್ತು ತಾವು ಅರ್ಥ ಮಾಡಿಕೊಂಡಿದ್ದನ್ನು ಹೇಳುತ್ತಾರೆ’ ಎಂದರು ಉಪೇಂದ್ರ.

 

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

2 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

2 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

3 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

3 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

5 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

6 hours ago