ಮನರಂಜನೆ

ಶಂಕರನ‌ ಮಗ ಹಾಗೂ ಸಿಂಬನ ಕಥೆಯೇ ‘ನಾನು ಮತ್ತು ಗುಂಡ 2’

‘ನಾನು ಮತ್ತು ಗುಂಡ’ ಎಂಬ ಚಿತ್ರ ಐದು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದು ನೆನಪಿರಬಹುದು. ರಘು ಹಾಸನ್‍ ನಿರ್ಮಾಣದ ಈ ಚಿತ್ರವನ್ನು ಶ್ರೀನಿವಾಸ್‍ ತಿಮ್ಮಯ್ಯ ನಿರ್ದೇಶನ ಮಾಡಿದ್ದು ಶಿವರಾಜ್‍ ಕೆ.ಆರ್‍.ಪೇಟೆ ಮತ್ತು ಸಿಂಬ ಎಂಬ ಶ್ವಾನವು ‘ನಾನು ಮತ್ತು ಗುಂಡ’ನಾಗಿ ಅಭಿನಯಿಸಿದ್ದರು.

ಈಗ ಆ ಚಿತ್ರದ ಮುಂದುವರೆದ ಭಾಗ ಬಿಡುಗಡೆಯಾಗುವುದಕ್ಕೆ ಸಿದ್ಧವಾಗಿದೆ. ಇತ್ತೀಚೆಗೆ ಈ ಚಿತ್ರದ ಟೀಸರನ್ನು ‘ಕೆ.ಜಿ.ಎಫ್’ ಖ್ಯಾತಿಯ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಪತ್ನಿ ಶೈಲಜಾ ಕಿರಗಂದೂರು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಚಿತ್ರದಲ್ಲಿ ರಾಕೇಶ್ ಆಡಿಗ ನಾಯಕನಾಗಿದ್ದು, ರಚನಾ ಇಂದರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ-ನಿರ್ದೇಶಕ ರಘು ಹಾಸನ್, ‘ರಾಕೇಶ್ ಅಡಿಗ ಈ ಚಿತ್ರದಲ್ಲಿ ಶಿವರಾಜ್ ಅವರ ಮಗನಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಕಾಪಿ ರೆಡಿಯಾಗಿದ್ದು, ಸದ್ಯದಲ್ಲೇ ಸೆನ್ಸಾರ್ ಆಗಲಿದೆ. ಮೊದಲ ಭಾಗ ಮಾಡುವಾಗಲೇ ಮುಂದುವರೆದ ಭಾಗದ ಕಥೆ ರೆಡಿ ಮಾಡಿಕೊಂಡಿದ್ದೆ. ಸಾಮಾಜಿಕ ಕಳಕಳಿ ಜೊತೆಗೆ ದೈವಿಕ ಅಂಗಳಿರುವ ಈ ಚಿತ್ರಕ್ಕೆ ಊಟಿ, ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ’ ಎಂದರು.

ಮೇ ವೇಳೆಗೆ ಚಿತ್ರವನ್ನು ರಿಲೀಸ್ ಮಾಡುವ ಯೋಚನೆ ಇದೆ ಎಂದ ರಘು, ‘ಚಿತ್ರದಲ್ಲಿ ಒಟ್ಟು ಆರು ಹಾಡುಗಳಿದ್ದು, ಆರ್.ಪಿ. ಪಟ್ನಾಯಕ್ ಸಂಗೀತ ಸಂಯೋಜಿಸಿದ್ದಾರೆ. ತನ್ವಿಕ್ ಅದ್ಭುತವಾಗಿ ಚಿತ್ರವನ್ನು ಸೆರೆ ಹಿಡಿದಿದ್ದಾರೆ. ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ’ ಎಂದು ಹೇಳಿದರು.

ಮೊದಲ ಚಿತ್ರದಲ್ಲಿ ನಟಸಿದ್ದ ಸಿಂಬ (ಶ್ವಾನ) ನಾಲ್ಕು ದಿನಗಳ ಕಾಲ ನಟಿಸಿದ ನಂತರ ನಿಧನ ಹೊಂದಿತಂತೆ. ಆ ನಂತರ ಅದರ ಮಗ ಈ ಚಿತ್ರದಲ್ಲಿ ನಟಿಸಿದೆ. ಶಂಕರನ‌ ಮಗ ಹಾಗೂ ಶ್ವಾನದ ಪಾತ್ರದ ಮೂಲಕ ಸಿನಿಮಾ ಮುಂದುವರೆಯಲಿದೆ. ಅಲ್ಲದೆ ಸಿಂಬ ಜೊತೆ ಬಂಟಿ ಎಂಬ ಇನ್ನೊಂದು ಶ್ವಾನವೂ ಅಭಿನಯಿಸಿದೆ.

ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ನಾನು ಮತ್ತು ಗುಂಡ 2’ ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಸಂಗೀತ ಸಂಯೋಜಿಸಿದ್ದು, ಕೆ.ಎಂ.ಪ್ರಕಾಶ್‍ ಅವರ ಸಂಕಲನವಿದೆ. ಚಿತ್ರದಲ್ಲಿ ರಾಕೇಶ್‍ ಅಡಿಗ ಮತ್ತು ರಚನಾ ಇಂದರ್ ಜೊತೆಗೆ ಯುವನ್‍ ಸಾಯಿ, ಗೋವಿಂದೇಗೌಡ, ಸಾಧು ಕೋಕಿಲ, ಅವಿನಾಶ್‍ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

5 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

5 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

6 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

6 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

7 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

9 hours ago