ಮನರಂಜನೆ

ಶಂಕರನ‌ ಮಗ ಹಾಗೂ ಸಿಂಬನ ಕಥೆಯೇ ‘ನಾನು ಮತ್ತು ಗುಂಡ 2’

‘ನಾನು ಮತ್ತು ಗುಂಡ’ ಎಂಬ ಚಿತ್ರ ಐದು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದು ನೆನಪಿರಬಹುದು. ರಘು ಹಾಸನ್‍ ನಿರ್ಮಾಣದ ಈ ಚಿತ್ರವನ್ನು ಶ್ರೀನಿವಾಸ್‍ ತಿಮ್ಮಯ್ಯ ನಿರ್ದೇಶನ ಮಾಡಿದ್ದು ಶಿವರಾಜ್‍ ಕೆ.ಆರ್‍.ಪೇಟೆ ಮತ್ತು ಸಿಂಬ ಎಂಬ ಶ್ವಾನವು ‘ನಾನು ಮತ್ತು ಗುಂಡ’ನಾಗಿ ಅಭಿನಯಿಸಿದ್ದರು.

ಈಗ ಆ ಚಿತ್ರದ ಮುಂದುವರೆದ ಭಾಗ ಬಿಡುಗಡೆಯಾಗುವುದಕ್ಕೆ ಸಿದ್ಧವಾಗಿದೆ. ಇತ್ತೀಚೆಗೆ ಈ ಚಿತ್ರದ ಟೀಸರನ್ನು ‘ಕೆ.ಜಿ.ಎಫ್’ ಖ್ಯಾತಿಯ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಪತ್ನಿ ಶೈಲಜಾ ಕಿರಗಂದೂರು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಚಿತ್ರದಲ್ಲಿ ರಾಕೇಶ್ ಆಡಿಗ ನಾಯಕನಾಗಿದ್ದು, ರಚನಾ ಇಂದರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ-ನಿರ್ದೇಶಕ ರಘು ಹಾಸನ್, ‘ರಾಕೇಶ್ ಅಡಿಗ ಈ ಚಿತ್ರದಲ್ಲಿ ಶಿವರಾಜ್ ಅವರ ಮಗನಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಕಾಪಿ ರೆಡಿಯಾಗಿದ್ದು, ಸದ್ಯದಲ್ಲೇ ಸೆನ್ಸಾರ್ ಆಗಲಿದೆ. ಮೊದಲ ಭಾಗ ಮಾಡುವಾಗಲೇ ಮುಂದುವರೆದ ಭಾಗದ ಕಥೆ ರೆಡಿ ಮಾಡಿಕೊಂಡಿದ್ದೆ. ಸಾಮಾಜಿಕ ಕಳಕಳಿ ಜೊತೆಗೆ ದೈವಿಕ ಅಂಗಳಿರುವ ಈ ಚಿತ್ರಕ್ಕೆ ಊಟಿ, ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ’ ಎಂದರು.

ಮೇ ವೇಳೆಗೆ ಚಿತ್ರವನ್ನು ರಿಲೀಸ್ ಮಾಡುವ ಯೋಚನೆ ಇದೆ ಎಂದ ರಘು, ‘ಚಿತ್ರದಲ್ಲಿ ಒಟ್ಟು ಆರು ಹಾಡುಗಳಿದ್ದು, ಆರ್.ಪಿ. ಪಟ್ನಾಯಕ್ ಸಂಗೀತ ಸಂಯೋಜಿಸಿದ್ದಾರೆ. ತನ್ವಿಕ್ ಅದ್ಭುತವಾಗಿ ಚಿತ್ರವನ್ನು ಸೆರೆ ಹಿಡಿದಿದ್ದಾರೆ. ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ’ ಎಂದು ಹೇಳಿದರು.

ಮೊದಲ ಚಿತ್ರದಲ್ಲಿ ನಟಸಿದ್ದ ಸಿಂಬ (ಶ್ವಾನ) ನಾಲ್ಕು ದಿನಗಳ ಕಾಲ ನಟಿಸಿದ ನಂತರ ನಿಧನ ಹೊಂದಿತಂತೆ. ಆ ನಂತರ ಅದರ ಮಗ ಈ ಚಿತ್ರದಲ್ಲಿ ನಟಿಸಿದೆ. ಶಂಕರನ‌ ಮಗ ಹಾಗೂ ಶ್ವಾನದ ಪಾತ್ರದ ಮೂಲಕ ಸಿನಿಮಾ ಮುಂದುವರೆಯಲಿದೆ. ಅಲ್ಲದೆ ಸಿಂಬ ಜೊತೆ ಬಂಟಿ ಎಂಬ ಇನ್ನೊಂದು ಶ್ವಾನವೂ ಅಭಿನಯಿಸಿದೆ.

ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ನಾನು ಮತ್ತು ಗುಂಡ 2’ ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಸಂಗೀತ ಸಂಯೋಜಿಸಿದ್ದು, ಕೆ.ಎಂ.ಪ್ರಕಾಶ್‍ ಅವರ ಸಂಕಲನವಿದೆ. ಚಿತ್ರದಲ್ಲಿ ರಾಕೇಶ್‍ ಅಡಿಗ ಮತ್ತು ರಚನಾ ಇಂದರ್ ಜೊತೆಗೆ ಯುವನ್‍ ಸಾಯಿ, ಗೋವಿಂದೇಗೌಡ, ಸಾಧು ಕೋಕಿಲ, ಅವಿನಾಶ್‍ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

46 seconds ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

36 mins ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

2 hours ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

2 hours ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

2 hours ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

5 hours ago