ಮನರಂಜನೆ

ಶಂಕರನ‌ ಮಗ ಹಾಗೂ ಸಿಂಬನ ಕಥೆಯೇ ‘ನಾನು ಮತ್ತು ಗುಂಡ 2’

‘ನಾನು ಮತ್ತು ಗುಂಡ’ ಎಂಬ ಚಿತ್ರ ಐದು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದು ನೆನಪಿರಬಹುದು. ರಘು ಹಾಸನ್‍ ನಿರ್ಮಾಣದ ಈ ಚಿತ್ರವನ್ನು ಶ್ರೀನಿವಾಸ್‍ ತಿಮ್ಮಯ್ಯ ನಿರ್ದೇಶನ ಮಾಡಿದ್ದು ಶಿವರಾಜ್‍ ಕೆ.ಆರ್‍.ಪೇಟೆ ಮತ್ತು ಸಿಂಬ ಎಂಬ ಶ್ವಾನವು ‘ನಾನು ಮತ್ತು ಗುಂಡ’ನಾಗಿ ಅಭಿನಯಿಸಿದ್ದರು.

ಈಗ ಆ ಚಿತ್ರದ ಮುಂದುವರೆದ ಭಾಗ ಬಿಡುಗಡೆಯಾಗುವುದಕ್ಕೆ ಸಿದ್ಧವಾಗಿದೆ. ಇತ್ತೀಚೆಗೆ ಈ ಚಿತ್ರದ ಟೀಸರನ್ನು ‘ಕೆ.ಜಿ.ಎಫ್’ ಖ್ಯಾತಿಯ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಪತ್ನಿ ಶೈಲಜಾ ಕಿರಗಂದೂರು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಚಿತ್ರದಲ್ಲಿ ರಾಕೇಶ್ ಆಡಿಗ ನಾಯಕನಾಗಿದ್ದು, ರಚನಾ ಇಂದರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ-ನಿರ್ದೇಶಕ ರಘು ಹಾಸನ್, ‘ರಾಕೇಶ್ ಅಡಿಗ ಈ ಚಿತ್ರದಲ್ಲಿ ಶಿವರಾಜ್ ಅವರ ಮಗನಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಕಾಪಿ ರೆಡಿಯಾಗಿದ್ದು, ಸದ್ಯದಲ್ಲೇ ಸೆನ್ಸಾರ್ ಆಗಲಿದೆ. ಮೊದಲ ಭಾಗ ಮಾಡುವಾಗಲೇ ಮುಂದುವರೆದ ಭಾಗದ ಕಥೆ ರೆಡಿ ಮಾಡಿಕೊಂಡಿದ್ದೆ. ಸಾಮಾಜಿಕ ಕಳಕಳಿ ಜೊತೆಗೆ ದೈವಿಕ ಅಂಗಳಿರುವ ಈ ಚಿತ್ರಕ್ಕೆ ಊಟಿ, ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ’ ಎಂದರು.

ಮೇ ವೇಳೆಗೆ ಚಿತ್ರವನ್ನು ರಿಲೀಸ್ ಮಾಡುವ ಯೋಚನೆ ಇದೆ ಎಂದ ರಘು, ‘ಚಿತ್ರದಲ್ಲಿ ಒಟ್ಟು ಆರು ಹಾಡುಗಳಿದ್ದು, ಆರ್.ಪಿ. ಪಟ್ನಾಯಕ್ ಸಂಗೀತ ಸಂಯೋಜಿಸಿದ್ದಾರೆ. ತನ್ವಿಕ್ ಅದ್ಭುತವಾಗಿ ಚಿತ್ರವನ್ನು ಸೆರೆ ಹಿಡಿದಿದ್ದಾರೆ. ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ’ ಎಂದು ಹೇಳಿದರು.

ಮೊದಲ ಚಿತ್ರದಲ್ಲಿ ನಟಸಿದ್ದ ಸಿಂಬ (ಶ್ವಾನ) ನಾಲ್ಕು ದಿನಗಳ ಕಾಲ ನಟಿಸಿದ ನಂತರ ನಿಧನ ಹೊಂದಿತಂತೆ. ಆ ನಂತರ ಅದರ ಮಗ ಈ ಚಿತ್ರದಲ್ಲಿ ನಟಿಸಿದೆ. ಶಂಕರನ‌ ಮಗ ಹಾಗೂ ಶ್ವಾನದ ಪಾತ್ರದ ಮೂಲಕ ಸಿನಿಮಾ ಮುಂದುವರೆಯಲಿದೆ. ಅಲ್ಲದೆ ಸಿಂಬ ಜೊತೆ ಬಂಟಿ ಎಂಬ ಇನ್ನೊಂದು ಶ್ವಾನವೂ ಅಭಿನಯಿಸಿದೆ.

ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ನಾನು ಮತ್ತು ಗುಂಡ 2’ ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಸಂಗೀತ ಸಂಯೋಜಿಸಿದ್ದು, ಕೆ.ಎಂ.ಪ್ರಕಾಶ್‍ ಅವರ ಸಂಕಲನವಿದೆ. ಚಿತ್ರದಲ್ಲಿ ರಾಕೇಶ್‍ ಅಡಿಗ ಮತ್ತು ರಚನಾ ಇಂದರ್ ಜೊತೆಗೆ ಯುವನ್‍ ಸಾಯಿ, ಗೋವಿಂದೇಗೌಡ, ಸಾಧು ಕೋಕಿಲ, ಅವಿನಾಶ್‍ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

10 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago