ಮನರಂಜನೆ

‘ಈ ವಿಷಯ ಇಷ್ಟೊಂದು ದೊಡ್ಡದಾಗುತ್ತದೆ ಎಂದು ಗೊತ್ತಿರಲಿಲ್ಲ’; ಕ್ಷಮೆಯಾಚಿಸಿದ ವಿನಯ್‍ ಗೌಡ

ಲಾಂಗ್‍ ಹಿಡಿದು ರೀಲ್ಸ್ ಮಾಡಿದ ಕಾರಣಕ್ಕೆ ಬಂಧನಕ್ಕೊಳಗಾಗಿದ್ದ ವಿನಯ್‍ ಗೌಡ, ಜಾಮೀನಿನ ಮೇಲೆ ಹೊರಬಂದ ನಂತರ ತಾವು ಮಾಡಿದ ತಪ್ಪಿಗೆ ಕ್ಷಮೆ ಯಾಚಿಸಿದ್ದಾರೆ. ಅಷ್ಟೇ ಅಲ್ಲ, ಈ ಪ್ರಕರಣ ಇಷ್ಟು ದೊಡ್ಡದಾಗುತ್ತದೆ ಎಂದು ತಮಗೆ ಗೊತ್ತಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ.

ಕಳೆದ ವಾರ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ಕಾರ್ಯಕ್ರಮವೊಂದರಲ್ಲಿ ‘ಬಿಗ್‍ ಬಾಸ್‍’ ಸ್ಪರ್ಧಿಗಳಾದ ರಜತ್‍ ಮತ್ತು ವಿನಯ್‍ ಗೌಡ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ಶಸ್ತ್ರಾಸ್ತ್ರ ಕಾಯ್ದೆಯಡಿ ವಿನಯ್ ಹಾಗೂ ರಜತ್‌ರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಲಯವು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಬೇಲ್ ಪ್ರತಿ ಪೊಲೀಸರಿಗೆ ತಡವಾಗಿ ಸಿಕ್ಕ ಹಿನ್ನೆಲೆಯಲ್ಲಿ ರಜತ್‍ ಮತ್ತು ವಿನಯ್‍ ಜೈಲಿನಲ್ಲೇ ಒಂದು ದಿನ ಇದ್ದು, ಹೊರಬಂದಿದ್ದಾರೆ.

ಬಿಡುಗಡೆಯ ನಂತರ ವೀಡಿಯೋ ಮಾಡಿ ಕ್ಷಮೆಯಾಚಿಸಿರುವ ವಿನಯ್‍, ಅದನ್ನು ತಮ್ಮ ಇನ್‍ಸ್ಟಾಗ್ರಾಂ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ವಿನಯ್‍, ‘ಕರ್ನಾಟಕದ ಪ್ರತಿಯೊಬ್ಬರಲ್ಲೂ ನಾನು ಕ್ಷಮೆ ಕೇಳಬೇಕಿತ್ತು. ನನ್ನನ್ನು ಕ್ಷಮಿಸಿ. ನನ್ನಿಂದ ನನ್ನ ಹೆಂಡತಿಗೆ, ಮಗನಿಗೆ ತೊಂದರೆಯಾಗಿದೆ. ನನ್ನ ಸ್ನೇಹಿತರಿಗೂ ಸಮಸ್ಯೆಯಾಗಿದ್ದು, ಆದರೂ ಜೊತೆಗೆ ಪೊಲೀಸ್‍ ಸ್ಟೇಷನ್‍ ಎದುರು ಕಾದು ನಿಂತಿದ್ದಾರೆ. ನನಗೆ ತುಂಬಾ ಸಹಾಯ ಮಾಡಿದ್ದಾರೆ’ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮದವರಲ್ಲೂ ಕ್ಷಮೆ ಕೋರಿರುವ ಅವರು, ‘ನನ್ನಿಂದ ತಪ್ಪಾಗಿದೆ. ಮಚ್ಚು ಇಟ್ಟುಕೊಂಡು ವೀಡಿಯೋ ಮಾಡಿದ್ದು ಎಲ್ಲರಿಗೂ ನೋವಾಗಿದೆ. ನಾನು ಹೀಗೆ ಮಾಡಬಾರದಾಗಿತ್ತು. ಎಲ್ಲರಿಗೂ ತೊಂದರೆ ಕೊಟ್ಟಿದ್ದೇನೆ. ಈ ವಿಷಯ ಇಷ್ಟೊಂದು ದೊಡ್ಡದಾಗುತ್ತದೆ ಎಂದು ಗೊತ್ತಿರಲಿಲ್ಲ. ಇದರಲ್ಲಿ ನನ್ನದೂ ತಪ್ಪಿದೆ. ನನ್ನ ಎಚ್ಚರಿಕೆಯಲ್ಲಿ ನಾನು ಇರಬೇಕಿತ್ತು. ನಾನು ಈ ತರಹ ಮಾಡಬಾರದಿತ್ತು’ ಎಂದಿದ್ದಾರೆ.

ಪೊಲೀಸ್‍ ಇಲಾಖೆಯವರ ಕಾರ್ಯವೈಖರಿಯನ್ನು ಮೆಚ್ಚಿರುವ ಅವರು, ‘ಪೊಲೀಸ್‍ ಇಲಾಖೆಯವರು ತುಂಬಾ ಚೆನ್ನಾಗಿ ಕೆಲಸ ಮಾಡಿದ್ದಾರೆ. ಒಬ್ಬ ಸೆಲೆಬ್ರಿಟಿ ಮತ್ತು ಸಾಮಾನ್ಯ ಮನುಷ್ಯ ಎಂದು ವ್ಯತ್ಯಾಸ ತೋರಿಸದೆ, ಕಾನೂನಿನ ಪ್ರಕಾರ ಕೆಲಸ ಮಾಡಿದ್ದಾರೆ. ಒಬ್ಬ ಸಾಮಾನ್ಯ ಮನುಷ್ಯನನ್ನು ಹೇಗೆ ನೋಡಿಕೊಳ್ಳಬೇಕೋ, ಹಾಗೆ ನೋಡಿಕೊಂಡಿದ್ದಾರೆ. ದಯವಿಟ್ಟು ಅವರ ಮೇಲೆ ಯಾವುದೇ ಆರೋಪಗಳನ್ನು ಮಾಡಬೇಡಿ’ ಎಂದು ಮನವಿ ಮಾಡಿದ್ದಾರೆ.

ಕಳೆದ ವರ್ಷ ‘ಬಿಗ್‍ ಬಾಸ್‍’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿನಯ್, ಸದ್ಯ ವಿನೋದ್‍ ಪ್ರಭಾಕರ್‍ ಅಭಿನಯದ ‘ಬಲರಾಮನ ದಿನಗಳು’ ಮತ್ತು ಕೋಮಲ್‍ ಅಭಿನಯದ ‘ಕೋಣ’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

5 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

5 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

6 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

7 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

7 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

7 hours ago