ಮನರಂಜನೆ

ರಾವಣ ಅಲ್ಲದೆ ಬೇರೆ ಪಾತ್ರವಾಗಿದ್ದರೆ ಮಾಡುತ್ತಿರಲಿಲ್ಲ ಎಂದ ಯಶ್‍

ನಿತೀಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದಲ್ಲಿ ಯಶ್‍, ರಾವಣನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಂಡಿರುವ ವಿಷಯ ಗೊತ್ತಿರಬಹುದು. ಡಿಸೆಂಬರ್‍ ತಿಂಗಳಿನಿಂದ ಯಶ್‍ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ ಎಂಬ ಸುದ್ದಿ ಇದೆ. ಈ ಮಧ್ಯೆ, ಈ ಚಿತ್ರವನ್ನು ಒಪ್ಪಿಕೊಂಡಿದ್ದೇಕೆ ಎಂದು ಯಶ್‍ ಇದೇ ಮೊದಲ ಬಾರಿಗೆ ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ‘ದಿ ಹಾಲಿವುಡ್‍ ರಿಪೋರ್ಟರ್’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ‘ಅದೊಂದು ಅದ್ಭುತವಾದ ಪಾತ್ರ. ಅದೇ ಕಾರಣಕ್ಕೆ ನಾನು ಆ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡೆ. ಬಹುಶಃ ಅದಲ್ಲದೆ ಬೇರೆ ಯಾವುದಾದರೂ ಪಾತ್ರವನ್ನು ಮಾಡುವುದಕ್ಕೆ ಒಪ್ಪುತ್ತಿದ್ದಿರಾ? ಎಂಬ ಪ್ರಶ್ನೆಯನ್ನು ಕೇಳಬಹುದು. ಇಲ್ಲ, ರಾವಣನ ಪಾತ್ರಕ್ಕೆ ಹಲವು ಮಜಲುಗಳಿವೆ ಮತ್ತು ಒಬ್ಬ ನಟನಾಗಿ ಆ ತರಹದ ಪಾತ್ರ ಮಾಡುವುದು ಬಹಳ ಇಷ್ಟ. ಆ ಪಾತ್ರಕ್ಕೆ ಸಾಕಷ್ಟು ಸ್ಕೋಪ್‍ ಇದೆ ಮತ್ತು ಒಬ್ಬ ನಟನಾಗಿ ಆ ಪಾತ್ರ ನಿರ್ವಹಿಸಲು ಕಾತುರದಿಂದ ಕಾಯುತ್ತಿದ್ದೇನೆ’ ಎಂದು ಯಶ್‍ ಹೇಳಿದ್ದಾರೆ.

ಈ ಚಿತ್ರದ ಭಾಗವಾಗಿರುವುದರ ಕುರಿತು ಮಾತನಾಡಿರುವ ಯಶ್‍, ‘ನಾನು ‘ಟಾಕ್ಸಿಕ್‍’ ಚಿತ್ರದ ವಿಎಫ್‍ಎಕ್ಸ್ ಕೆಲಸ ಕುರಿತು ಓಡಾಡುತ್ತಿದ್ದಾಗ, DNEG ಮತ್ತು ಪ್ರೈಮ್‍ ಫೋಕಸ್‍ ಸಂಸ್ಥೆಗಳ ನಮಿತ್‍ ಮಲ್ಹೋತ್ರಾ ಅವರನ್ನು ಭೇಟಿ ಮಾಡುವ ಸಂದರ್ಭ ಬಂತು. ಆಗ ನಮಿತ್‍, ರಾಮಾಯಣ ಚಿತ್ರದ ಬಗ್ಗೆ ಹೇಳಿದರು. ನಮಿತ್‍ ಅವರ ದೃಷ್ಟಿಕೋನ ಇಷ್ಟವಾಯಿತು. ಚಿತ್ರವನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಮುಟ್ಟಿಸಬೇಕು ಎಂಬ ಅವರ ಕಲ್ಪನೆಗೆ ಕೈಜೋಡಿಸಬೇಕು ಎಂದನಿಸಿತು. ಹಾಗಾಗಿ, ‘ರಾಮಾಯಣ’ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡೆ’ ಎಂದು ಯಶ್‍ ಹೇಳಿದ್ದಾರೆ.

‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ತಯಾರಾಗಲಿದ್ದು, ಈ ಹಿಂದೆ ‘ದಂಗಲ್‍’ ಚಿತ್ರವನ್ನು ನಿರ್ದೇಶಿಸಿದ್ದ ನಿತೀಶ್‍ ತಿವಾರಿ, ಈ ‘ರಾಮಾಯಣ’ ಚಿತ್ರದ ನಿರ್ದೇಶಕರು. ರಾಮನಾಗಿ ರಣಬೀರ್ ‍ಕಪೂರ್‍ ನಟಿಸುತ್ತಿದ್ದರೆ, ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಸನ್ನಿ ಡಿಯೋಲ್‍, ಆಂಜನೇಯನಾಗಿ ಕಾಣಿಸಿಕೊಳ್ಳುತ್ತಿದ್ದು, ಯಶ್‍ ಈ ಚಿತ್ರದಲ್ಲಿ ರಾವಣನಾಗಿ ನಟಿಸಲಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

14 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

14 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

14 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

14 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

14 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

17 hours ago