ಮನರಂಜನೆ

ನಾಲ್ಕು ಗೋಡೆ ಮಧ್ಯೆಯಿದ್ದು ಎಲ್ಲವನ್ನು ಕಲಿತೆ: ಸೋನು ಗೌಡ!

ಅಕ್ರಮ ದತ್ತು ಮಗು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ರೀಲ್ಸ್‌ ಸ್ಟಾರ್‌ ಸೋನು ಗೌಡ ತಮ್ಮ ಜೈಲಿನ ದಿನಗಳ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ.

ನನ್ನನ್ನು ಕಾನೂನಾತ್ಮಕವಾಗಿ ವಿಚಾರಣೆ ಮಾಡಿ, ಬಳಿಕ ನನ್ನನ್ನು ನ್ಯಾಯಾಂಗ ಬಂಧನಕ್ಕೆ ನೀಡಿದರು. ನಾಲ್ಕು ಗೋಡೆ, ಅಲ್ಲಿನ ಜನ ನೋಡಿ ನನಗೆ ಇದೆಲ್ಲ ಬೇಕಿತ್ತಾ ಅನಿಸಿತು. ಬೇರೆ ಬೇರೆ ಪ್ರಕರಣ ಮಾಡಿದವರು ಅಲ್ಲಿದ್ದರು ಅದನ್ನು ನೋಡು ಬೇಸರ ತಂದಿತ್ತು. ಮೂರು ದಿನಕ್ಕೆ ಒಮ್ಮೆ ಫೋನ್ ಕೊಡ್ತಾರೆ. 3-4 ನಿಮಿಷ ಮಾತನಾಡಲು ಮೂರು ದಿನ ಕಾಯುವುದು ಎನ್ನುವುದನ್ನು ಕಂಡಾಗ ವ್ಯಕ್ತಿಯ ಬೆಲೆ ಗೊತ್ತಾಗುತ್ತದೆ. ನಾಲ್ಕು ಗೋಡೆ ಮಧ್ಯೆ ಇದ್ದು ಎಲ್ಲವೂ ಕಲಿತೆ ಎಂದು ಸೋನುಗೌಡ ಹೇಳಿದ್ದಾರೆ.

ಜೈಲಿನಲ್ಲಿ ತುಂಬಾನೇ ಸೊಳ್ಳೆ. ಆ ಜೀವನವೇ ಬೇರೆ. 23ನೇ ವಯಸ್ಸಿಗೆ ಜೈಲು ನೋಡಿದ್ನಲ್ಲ ಅನ್ನೋದು ಬೇಸರದ ವಿಚಾರ. ಆದರೆ, ಕೆಟ್ಟದ್ದಿರಲಿ ಒಳ್ಳೆಯದಿರಲಿ ಜೀವನದಲ್ಲಿ ಎಲ್ಲವನ್ನೂ ಅನುಭವಿಸಬೇಕು ಎಂಬ ಬಗ್ಗೆ ನನಗೆ ಖುಷಿ ಇದೆ ಎಂದು ಸೋನುಗೌಡ ತಮ್ಮ ಅಂದಿನ ದಿನಗಳ ಬಗ್ಗೆ ಮಾತನಾಡಿದ್ದಾರೆ.

ಜೊತೆಗೆ ತಾವು ಜೈಲಿನಲ್ಲಿದ್ದಾಗ ತಮ್ಮ ಪರವಾಗಿ ಟ್ರೋಲ್‌ ಪೇಜ್‌ಗಳು ಬೆಂಬಲ ಸೂಚಿಸಿದರ ಬಗ್ಗೆ ಹೆಮ್ಮೆಯಿದೆ ಎಂದು ಹೊಗಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

2 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

6 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

6 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

6 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

6 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

6 hours ago