ಮನರಂಜನೆ

ನಾಲ್ಕು ಗೋಡೆ ಮಧ್ಯೆಯಿದ್ದು ಎಲ್ಲವನ್ನು ಕಲಿತೆ: ಸೋನು ಗೌಡ!

ಅಕ್ರಮ ದತ್ತು ಮಗು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ರೀಲ್ಸ್‌ ಸ್ಟಾರ್‌ ಸೋನು ಗೌಡ ತಮ್ಮ ಜೈಲಿನ ದಿನಗಳ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ.

ನನ್ನನ್ನು ಕಾನೂನಾತ್ಮಕವಾಗಿ ವಿಚಾರಣೆ ಮಾಡಿ, ಬಳಿಕ ನನ್ನನ್ನು ನ್ಯಾಯಾಂಗ ಬಂಧನಕ್ಕೆ ನೀಡಿದರು. ನಾಲ್ಕು ಗೋಡೆ, ಅಲ್ಲಿನ ಜನ ನೋಡಿ ನನಗೆ ಇದೆಲ್ಲ ಬೇಕಿತ್ತಾ ಅನಿಸಿತು. ಬೇರೆ ಬೇರೆ ಪ್ರಕರಣ ಮಾಡಿದವರು ಅಲ್ಲಿದ್ದರು ಅದನ್ನು ನೋಡು ಬೇಸರ ತಂದಿತ್ತು. ಮೂರು ದಿನಕ್ಕೆ ಒಮ್ಮೆ ಫೋನ್ ಕೊಡ್ತಾರೆ. 3-4 ನಿಮಿಷ ಮಾತನಾಡಲು ಮೂರು ದಿನ ಕಾಯುವುದು ಎನ್ನುವುದನ್ನು ಕಂಡಾಗ ವ್ಯಕ್ತಿಯ ಬೆಲೆ ಗೊತ್ತಾಗುತ್ತದೆ. ನಾಲ್ಕು ಗೋಡೆ ಮಧ್ಯೆ ಇದ್ದು ಎಲ್ಲವೂ ಕಲಿತೆ ಎಂದು ಸೋನುಗೌಡ ಹೇಳಿದ್ದಾರೆ.

ಜೈಲಿನಲ್ಲಿ ತುಂಬಾನೇ ಸೊಳ್ಳೆ. ಆ ಜೀವನವೇ ಬೇರೆ. 23ನೇ ವಯಸ್ಸಿಗೆ ಜೈಲು ನೋಡಿದ್ನಲ್ಲ ಅನ್ನೋದು ಬೇಸರದ ವಿಚಾರ. ಆದರೆ, ಕೆಟ್ಟದ್ದಿರಲಿ ಒಳ್ಳೆಯದಿರಲಿ ಜೀವನದಲ್ಲಿ ಎಲ್ಲವನ್ನೂ ಅನುಭವಿಸಬೇಕು ಎಂಬ ಬಗ್ಗೆ ನನಗೆ ಖುಷಿ ಇದೆ ಎಂದು ಸೋನುಗೌಡ ತಮ್ಮ ಅಂದಿನ ದಿನಗಳ ಬಗ್ಗೆ ಮಾತನಾಡಿದ್ದಾರೆ.

ಜೊತೆಗೆ ತಾವು ಜೈಲಿನಲ್ಲಿದ್ದಾಗ ತಮ್ಮ ಪರವಾಗಿ ಟ್ರೋಲ್‌ ಪೇಜ್‌ಗಳು ಬೆಂಬಲ ಸೂಚಿಸಿದರ ಬಗ್ಗೆ ಹೆಮ್ಮೆಯಿದೆ ಎಂದು ಹೊಗಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

17 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

18 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

18 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

18 hours ago