ಬೆಂಗಳೂರು : ತೆರೆಗೆ ಸಿದ್ಧವಾಗಿರುವ ಕಾಂತಾರ 1 ಚಿತ್ರದ ಟ್ರೇಲರ್ ರಿಲೀಸ್ ಆಗಿ ಹಿಟ್ ಆಗಿದೆ. ನಟ ನಿರ್ದೇಶಕ ರಿಷಬ್ ಕೂಡಾ ಖುಷಿಯಾಗಿದ್ದಾರೆ. ಇದೇ ಖುಷಿಯಲ್ಲಿ ಸಿನಿಮಾ ಕುರಿತಾದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಎದುರಿಸಿದ ಅಡೆತಡೆಗಳನ್ನು ವಿವರಿಸಿದ್ದಾರೆ.
ಕಾಂತಾರ ಅದೊಂದು ಅದ್ಭುತ ಜರ್ನಿ. ಈ ಸಿನಿಮಾ ಸಾಕಷ್ಟು ಅಡೆ ತಡೆಗಳನ್ನು ಎದುರಿಸಿ ಈಗ ಬಿಡುಗಡೆಗೆ ಬಂದಿದೆ. ಈ ಸಿನಿಮಾ ಮುಗಿಯೋದೇ ಕಷ್ಟ ಅನ್ನೋ ತರಹ ಇತ್ತು. ಪ್ರಗತಿ ಈ ಚಿತ್ರಕ್ಕಾಗಿ ಸಾಕಷ್ಟು ಹರಕೆ ಕಟ್ಟಿಕೊಂಡಳು. ಕೆಲವು ದೃಶ್ಯಗಳ ಚಿತ್ರೀಕರಣಕ್ಕೆ ಅವಳನ್ನು ಬರೋದು ಬೇಡ ಎನ್ನುತ್ತಿದ್ದೆ. 15 ದಿನದಿಂದ ಬೆಂಗಳೂರಿನಲ್ಲಿ ಇದ್ದೇನೆ. ಜನ ಹೇಗಿದ್ದೀರ ಎಂದು ಕೇಳಿದರೆ ಅಳು ಬರುತ್ತದೆ. ಇದೊಂದು ಎಮೋಶನಲ್ ಜರ್ನಿ. ಸಿನಿಮಾ ಪ್ರೀತಿಯಿಂದ ಕೆಲಸ ಮಾಡಿದ್ದೇವೆ. ಕಳೆದ 3 ತಿಂಗಳಿನಿಂದ ದಿನಕ್ಕೆ 3 ಗಂಟೆ ನಿದ್ದೆ ಮಾಡಿದರೆ ಹೆಚ್ಚು. ಇದು ರಿಷಬ್ ಶೆಟ್ಟಿ ಸಿನಿಮಾ ಎಂದು ಕೆಲಸ ಮಾಡಿಲ್ಲ. ನಮ್ಮ ಸಿನಿಮಾ ಎಂದು ಮಾಡಿದ್ದಾರೆ. ಒಟ್ಟೊಟ್ಟಿಗೆ 36 ಗಂಟೆ ಕೆಲಸ ಮಾಡಿದ್ದೂ ಇದೆ ಎಂದು ಸ್ಮರಿಸಿಕೊಂಡರು.
ಇದನ್ನೂ ಓದಿ :-ಸಾಧಕರನ್ನು ಗುರುತಿಸಿ ಸನ್ಮಾನಿಸುವುದೇ ದೊಡ್ಡ ಸಾಧನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಇದು ನಾನು ಬಾಲ್ಯದಲ್ಲಿ ಕೇಳಿದ ಜನಪದ, ಪಾಡ್ದನದ ಮೂಲ. ಅದನ್ನಿಟ್ಟುಕೊಂಡು ಹಾಗೂ ಮೂಲ ಕಥೆಯನ್ನಿಟ್ಟುಕೊಂಡು ಅದನ್ನು ಆಯಾ ಕ್ಷೇತ್ರದ ತಜ್ಞರಿಂದ ಡೆವಲಪ್ ಮಾಡಿಸಿದ್ದೇವೆ. ಸಾಕಷ್ಟು ಇಂಪ್ರೂವ್ ಮಾಡುತ್ತಾ ಸಿನಿಮಾ ಮಾಡಿದ್ದೇವೆ. ನಾನು ನಿರ್ಮಾಪಕರಿಗೆ 15ಕ್ಕೂ ಹೆಚ್ಚು ಬಾರಿ ನರೇಶನ್ ಕೊಟ್ಟಿದ್ದೇನೆ. ಕೊನೇ ಕ್ಷಣದವರೆಗೆ ಕೆಲಸ ಮಾಡುತ್ತಲೇ ಇದ್ದೇವೆ ಎಂದಿದ್ದಾರೆ.
ಕಾಂತಾರ ಅವಘಡಗಳ ಬಗ್ಗೆ ಹೇಳಿದ್ದೇನು?
ಇವತ್ತು ನಾನು ಬದುಕಿದ್ದೇನೆ ಎಂದರೆ ಅದಕ್ಕೆ ಕಾರಣ ದೈವ. ಲೆಕ್ಕ ಹಾಕಿದರೆ ನಾನು ಮೂರು- ನಾಲ್ಕು ಸಾರಿ ಹೋಗಿ ಬಿಡಬೇಕಿತ್ತು. ಆದರೆ, ಇವತ್ತು ನಿಮ್ಮಮುಂದೆ ನಿಂತು ಮಾತನಾಡುತ್ತಿದ್ದೇನೆ ಎಂದರೆ ಅದಕ್ಕೆ ಕಾರಣ ನಾವು ನಂಬಿರುವ ದೈವ. ಆ ದೈವವೇ ನಮ್ಮ ತಂಡಕ್ಕೆ ಆಶೀರ್ವಾದ ಮಾಡಿದೆ.
ಬುಹುತೇಕ ಶೂಟಿಂಗ್ ಕುಂದಾಪುರದಲ್ಲೇ
ಬಹುತೇಕ ಎಲ್ಲಾ ಕಲಾವಿದರು ಕುಂದಾಪುರಕ್ಕೆ ಬಂದಿದ್ದರು. ಅದೊಂದು ಮಿನಿ ಫಿಲಂ ಸಿಟಿ ತರಹ ಆಗೋಗಿತ್ತು. ಇನ್ನು ಎಷ್ಟು ಸಿನಿಮಾ ಬೇಕಾದರೂ ಶೂಟಿಂಗ್ ಮಾಡಬಹುದು ಎಂದಿದ್ದಾರೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…