ಮನರಂಜನೆ

ನಾನು ಬದುಕಿದ್ದೆ ಹೆಚ್ಚು, 3-4 ಬಾರಿ ನಾನು ಹೋಗಿ ಬಿಡಬೇಕಿತ್ತು : ಕಾಂತಾರ ಜರ್ನಿ ಬಿಚ್ಚಿಟ್ಟ ರಿಷಾಬ್‌

ಬೆಂಗಳೂರು : ತೆರೆಗೆ ಸಿದ್ಧವಾಗಿರುವ ಕಾಂತಾರ 1 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿ ಹಿಟ್‌ ಆಗಿದೆ. ನಟ ನಿರ್ದೇಶಕ ರಿಷಬ್‌ ಕೂಡಾ ಖುಷಿಯಾಗಿದ್ದಾರೆ. ಇದೇ ಖುಷಿಯಲ್ಲಿ ಸಿನಿಮಾ ಕುರಿತಾದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಎದುರಿಸಿದ ಅಡೆತಡೆಗಳನ್ನು ವಿವರಿಸಿದ್ದಾರೆ.

ಕಾಂತಾರ ಅದೊಂದು ಅದ್ಭುತ ಜರ್ನಿ. ಈ ಸಿನಿಮಾ ಸಾಕಷ್ಟು ಅಡೆ ತಡೆಗಳನ್ನು ಎದುರಿಸಿ ಈಗ ಬಿಡುಗಡೆಗೆ ಬಂದಿದೆ. ಈ ಸಿನಿಮಾ ಮುಗಿಯೋದೇ ಕಷ್ಟ ಅನ್ನೋ ತರಹ ಇತ್ತು. ಪ್ರಗತಿ ಈ ಚಿತ್ರಕ್ಕಾಗಿ ಸಾಕಷ್ಟು ಹರಕೆ ಕಟ್ಟಿಕೊಂಡಳು. ಕೆಲವು ದೃಶ್ಯಗಳ ಚಿತ್ರೀಕರಣಕ್ಕೆ ಅವಳನ್ನು ಬರೋದು ಬೇಡ ಎನ್ನುತ್ತಿದ್ದೆ. 15 ದಿನದಿಂದ ಬೆಂಗಳೂರಿನಲ್ಲಿ ಇದ್ದೇನೆ. ಜನ ಹೇಗಿದ್ದೀರ ಎಂದು ಕೇಳಿದರೆ ಅಳು ಬರುತ್ತದೆ. ಇದೊಂದು ಎಮೋಶನಲ್‌ ಜರ್ನಿ. ಸಿನಿಮಾ ಪ್ರೀತಿಯಿಂದ ಕೆಲಸ ಮಾಡಿದ್ದೇವೆ. ಕಳೆದ 3 ತಿಂಗಳಿನಿಂದ ದಿನಕ್ಕೆ 3 ಗಂಟೆ ನಿದ್ದೆ ಮಾಡಿದರೆ ಹೆಚ್ಚು. ಇದು ರಿಷಬ್‌ ಶೆಟ್ಟಿ ಸಿನಿಮಾ ಎಂದು ಕೆಲಸ ಮಾಡಿಲ್ಲ. ನಮ್ಮ ಸಿನಿಮಾ ಎಂದು ಮಾಡಿದ್ದಾರೆ. ಒಟ್ಟೊಟ್ಟಿಗೆ 36 ಗಂಟೆ ಕೆಲಸ ಮಾಡಿದ್ದೂ ಇದೆ ಎಂದು ಸ್ಮರಿಸಿಕೊಂಡರು.

ಇದನ್ನೂ ಓದಿ :-ಸಾಧ‌ಕರನ್ನು ಗುರುತಿಸಿ ಸನ್ಮಾನಿಸುವುದೇ ದೊಡ್ಡ ಸಾಧನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಇದು ನಾನು ಬಾಲ್ಯದಲ್ಲಿ ಕೇಳಿದ ಜನಪದ, ಪಾಡ್ದನದ ಮೂಲ. ಅದನ್ನಿಟ್ಟುಕೊಂಡು ಹಾಗೂ ಮೂಲ ಕಥೆಯನ್ನಿಟ್ಟುಕೊಂಡು ಅದನ್ನು ಆಯಾ ಕ್ಷೇತ್ರದ ತಜ್ಞರಿಂದ ಡೆವಲಪ್‌ ಮಾಡಿಸಿದ್ದೇವೆ. ಸಾಕಷ್ಟು ಇಂಪ್ರೂವ್‌ ಮಾಡುತ್ತಾ ಸಿನಿಮಾ ಮಾಡಿದ್ದೇವೆ. ನಾನು ನಿರ್ಮಾಪಕರಿಗೆ 15ಕ್ಕೂ ಹೆಚ್ಚು ಬಾರಿ ನರೇಶನ್‌ ಕೊಟ್ಟಿದ್ದೇನೆ. ಕೊನೇ ಕ್ಷಣದವರೆಗೆ ಕೆಲಸ ಮಾಡುತ್ತಲೇ ಇದ್ದೇವೆ ಎಂದಿದ್ದಾರೆ.

ಕಾಂತಾರ ಅವಘಡಗಳ ಬಗ್ಗೆ ಹೇಳಿದ್ದೇನು?
ಇವತ್ತು ನಾನು ಬದುಕಿದ್ದೇನೆ ಎಂದರೆ ಅದಕ್ಕೆ ಕಾರಣ ದೈವ. ಲೆಕ್ಕ ಹಾಕಿದರೆ ನಾನು ಮೂರು- ನಾಲ್ಕು ಸಾರಿ ಹೋಗಿ ಬಿಡಬೇಕಿತ್ತು. ಆದರೆ, ಇವತ್ತು ನಿಮ್ಮಮುಂದೆ ನಿಂತು ಮಾತನಾಡುತ್ತಿದ್ದೇನೆ ಎಂದರೆ ಅದಕ್ಕೆ ಕಾರಣ ನಾವು ನಂಬಿರುವ ದೈವ. ಆ ದೈವವೇ ನಮ್ಮ ತಂಡಕ್ಕೆ ಆಶೀರ್ವಾದ ಮಾಡಿದೆ.

ಬುಹುತೇಕ ಶೂಟಿಂಗ್‌ ಕುಂದಾಪುರದಲ್ಲೇ
ಬಹುತೇಕ ಎಲ್ಲಾ ಕಲಾವಿದರು ಕುಂದಾಪುರಕ್ಕೆ ಬಂದಿದ್ದರು. ಅದೊಂದು ಮಿನಿ ಫಿಲಂ ಸಿಟಿ ತರಹ ಆಗೋಗಿತ್ತು. ಇನ್ನು ಎಷ್ಟು ಸಿನಿಮಾ ಬೇಕಾದರೂ ಶೂಟಿಂಗ್‌ ಮಾಡಬಹುದು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 min ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

8 mins ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

14 mins ago

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

14 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

14 hours ago