ಮನರಂಜನೆ

ನಾನು ಬೆಳೆಯಬೇಕು ಎಂಬ ಸ್ವಾರ್ಥದಿಂದ ಈ ಚಿತ್ರ ಮಾಡಿದೆ: ಅಜೇಯ್‍ ರಾವ್‍

ಅಜೇಯ್‍ ರಾವ್ ಅಭಿನಯದ ‘ಯುದ್ಧ ಕಾಂಡ’ ಚಿತ್ರದ ಸುದ್ದಿಯೇ ಇರಲಿಲ್ಲ. ಎರಡು ವರ್ಷಗಳ ಹಿಂದೆಯೇ ಘೋಷಣೆಯಾದರೂ, ಚಿತ್ರ ಯಾವ ಹಂತದಲ್ಲಿದೆ ಎಂಬ ಸೂಕ್ತವಾದ ಮಾಹಿತಿ ಇರಲಿಲ್ಲ. ಈಗ ಚಿತ್ರವನ್ನು ಸದ್ದಿಲ್ಲದೆ ಮುಗಿಸಿಕೊಂಡು ಬಂದಿದ್ದಾರೆ ಅಜೇಯ್‍ ರಾವ್‍. ಅಷ್ಟೇ ಅಲ್ಲ, ಚಿತ್ರವನ್ನು ಏ.18ಕ್ಕೆ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ.

ಚಿತ್ರದ ಒಂದು ಹಾಡು ಬಿಡುಗಡೆ ಮತ್ತು ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯ ಪತ್ರಿಕಾಗೋಷ್ಠಿಯಲ್ಲಿ ಅಜೇಯ್‍ ಹಲವು ವಿಷಯಗಳನ್ನು ಮಾತನಾಡಿದ್ದಾರೆ. ಈ ಚಿತ್ರ ಮಾಡುವುದಕ್ಕೆ ತಮಗೆ ಎರಡು ಸ್ವಾರ್ಥಗಳಿವೆ ಎಂದು ಹೇಳಿದ್ದಾರೆ. ಅದೇ ಕಾರಣಕ್ಕೆ ಅವರು ಚಿತ್ರವನ್ನು ನಿರ್ಮಿಸಿದ್ದಾಗಿ ಹೇಳಿಕೊಂಡಿದ್ದಾರೆ. ಈ ಚಿತ್ರವು ದೇಶದಾದ್ಯಂತ ಸದ್ದು ಮಾಡಬೇಕೆಂಬುದು ಮೊದಲ ಸ್ವಾರ್ಥವಾದರೆ, ತಾನು ಕನ್ನಡದ ಮುಂಚೂಣಿಯ ನಾಯಕರ ಪೈಕಿ ಬಂದು ನಿಲ್ಲಬೇಕೆಂಬುದು ಎರಡನೆಯ ಸ್ವಾರ್ಥ ಎಂದು ಹೇಳಿದ್ದಾರೆ.

ತನಗೆ ಸಿಗಬೇಕಾದ ಮಾನ್ಯತೆ ಸಿಕ್ಕಿಲ್ಲ ಎಂಬ ಬೇಸರ, ಕೊರಗು ಇದೆ ಎನ್ನುವ ಅಜೇಯ್‍ ರಾವ್, ‘ಕನ್ನಡದಲ್ಲಿ ಯಾರೂ ನನ್ನನ್ನು ಸರಿಯಾಗಿ ಬಳಸಿಕೊಂಡಿಲ್ಲ. ಯಾರೂ ಬಳಸಿಕೊಳ್ಳದಿದ್ದಾಗ, ನಾವೇ ಆ ಪ್ರಯತ್ನ ಮಾಡಬೇಕು ಎಂದು ನಂಬಿರುವವನು ನಾನು. ನನ್ನನ್ನು ನಾನೇ ಸೃಷ್ಟಿ ಮಾಡಿಕೊಳ್ಳಬೇಕು, ನನ್ನ ಭವಿಷ್ಯವನ್ನು ನಾನೇ ಬರೆದುಕೊಳ್ಳಬೇಕು ಎಂದು ನಿರ್ಧಾರ ಮಾಡಿ, ಈ ಚಿತ್ರಕ್ಕೆ ನಿರ್ಮಾಣಕ್ಕೆ ಕೈ ಹಾಕಿದೆ. ನಾನು ಬೆಳೆಯಬೇಕು ಎಂಬ ಸ್ವಾರ್ಥದಿಂದ ಈ ಚಿತ್ರ ಮಾಡಿದೆ’ ಎನ್ನುತ್ತಾರೆ ಅಜೇಯ್‍.

ತನಗೆ ಕನ್ನಡ ಚಿತ್ರರಂಗಕ್ಕೆ ಏನಾದರೂ ಕೊಡಬೇಕು ಎಂಬ ಆಸೆ ಎನ್ನುವ ಅಜೇಯ್‍, ‘ರೀ ನಟನೆ ಮಾಡಿಕೊಂಡಿರುತ್ತೇನೆ, ಬಂದ ದುಡ್ಡಲ್ಲಿ ಮನೆ ನೋಡಿಕೊಂಡಿದ್ದರೆ ಸಾಕು ಎಂದರೆ ಆರಾಮಾಗಿ ಇರಬಹುದು. ನನಗೆ ನಿರ್ಮಾಣ ಅಥವಾ ಹೋರಾಟ ಮಾಡುವ ಅವಶ್ಯಕತೆಯೇ ಇರುತ್ತಿರಲಿಲ್ಲ. ಕನ್ನಡ ಚಿತ್ರರಂಗಕ್ಕೆ ಏನಾದರೂ ಕೊಡಬೇಕು ಎಂಬ ಆಸೆ ನನಗಿದೆ. ಈಗಾಗಲೇ ಯಶ್‍, ರಕ್ಷಿತ್‍ ಶೆಟ್ಟಿ, ರಿಷಭ್‍ ಶೆಟ್ಟಿ ಮುಂತಾದವರು ಕನ್ನಡ ಚಿತ್ರರಂಗವನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅವರೆಲ್ಲರಿಂದ ನಾನು ಬಹಳ ಸ್ಫೂರ್ತಿ ಪಡೆದಿದ್ದೇನೆ. ಅವರೆಲ್ಲರೂ ನಾನು ಬಂದ ನಂತರ ಬಂದವರು. ಈ ಕಾರಣಕ್ಕೆ ನಾನು ಮುಂಚೂಣಿಗೆ ಬರಬೇಕು ಎಂಬ ಆಸೆ ಇದೆಯೇ ಹೊರತು, ಕೋಟಿ ಕೋಟಿ ಸಂಭಾವನೆ ಪಡೆದು ಮೆರೆಯಬೇಕು ಎಂಬ ಆಸೆ ಇಲ್ಲ’ ಎನ್ನುತ್ತಾರೆ ಅಜೇಯ್‍.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

56 mins ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

58 mins ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

1 hour ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

1 hour ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

1 hour ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

1 hour ago